Homeಮುಖಪುಟ8 ರಾಜ್ಯಗಳಿಗೆ ಚುನಾವಣಾ ಸಮಿತಿಗಳನ್ನು ನೇಮಿಸಿದ ಕಾಂಗ್ರೆಸ್‌

8 ರಾಜ್ಯಗಳಿಗೆ ಚುನಾವಣಾ ಸಮಿತಿಗಳನ್ನು ನೇಮಿಸಿದ ಕಾಂಗ್ರೆಸ್‌

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ ಪಕ್ಷವು, ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ಛತ್ತೀಸ್‌ಗಢ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ 8 ರಾಜ್ಯಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿಗಳನ್ನು ರಚಿಸಿದೆ.

ರಾಜಸ್ಥಾನ, ಕೇರಳ, ತೆಲಂಗಾಣ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮತ್ತು ತ್ರಿಪುರಾ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿಗಳನ್ನು ರಚಿಸಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

ರಾಜಸ್ಥಾನ ಪ್ರದೇಶ ಕಾಂಗ್ರೆಸ್‌ ಸಮಿತಿ ಮುಖ್ಯಸ್ಥರಾದ ಗೋವಿಂದ್ ಸಿಂಗ್ ದೋತಸ್ರಾ ಅವರನ್ನು ರಾಜಸ್ಥಾನ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌, ಮಹೇಂದ್ರಜೀತ್ ಸಿಂಗ್ ಮಾಳವೀಯ, ಮೋಹನ್ ಪ್ರಕಾಶ್, ಸಿ ಪಿ ಜೋಶಿ, ಹರೀಶ್ ಚೌಧರಿ, ರಾಮಲಾಲ್ ಜಾಟ್, ಪ್ರಮೋದ್ ಜೈನ್ ಭಯ, ಪ್ರತಾಪ್ ಸಿಂಗ್ ಖಚರಿಯಾವಾಸ್, ಮಮತಾ ಭೂಪೇಶ್, ಭಜನ್ ಲಾಲ್ ಜಾತವ್, ಮುರಾರಿ ಲಾಲ್ ಮೀನಾ, ಅಶೋಕ್ ಚಂದನಾ, ನೀರಜ್ ಡಾಂಗಿ, ಜುಬೇರ್ ಖಾನ್, ಧೀರಜ್ ಶರ್ಜಾರ್, ರೋಹಿತ್ ಬೋಹ್ರಾ, ಇಂದ್ರ ಮೀನಾ, ಡುಂಗರ್ ರಾಮ್ ಗೆದರ್, ಶಿಮ್ಲಾ ದೇವಿ ನಾಯಕ್ ಮತ್ತು ಲಲಿತ್ ಯಾದವ್ ಅವರು ಸದಸ್ಯರಾಗಿದ್ದಾರೆ. ಇದಲ್ಲದೆ ಯುವ ಕಾಂಗ್ರೆಸ್ ಅಧ್ಯಕ್ಷರು, ಎನ್‌ಎಸ್‌ಯುಐ ಅಧ್ಯಕ್ಷರು, ಸೇವಾದಳದ ಮುಖ್ಯ ಸಂಘಟಕರು ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಸಮಿತಿಯ ಸದಸ್ಯರಾಗಿರಲಿದ್ದಾರೆ.

ಕೆ ಸುಧಾಕರ್ ಅವರನ್ನು ಕೇರಳ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕೇರಳ ಪ್ರದೇಶ ಕಾಂಗ್ರೆಸ್‌ ಚುನಾವಣಾ ಸಮಿತಿಯ ಸಮಿತಿಯಲ್ಲಿ ಎ ಕೆ ಆಂಟನಿ, ಕೆ ಸಿ ವೇಣುಗೋಪಾಲ್, ರಮೇಶ್ ಚೆನ್ನಿತ್ತಲ, ವಯಲಾರ್ ರವಿ, ವಿ ಡಿ ಸತೀಶನ್, ಕೆ ಸುರೇಶ್, ಶಶಿ ತರೂರ್, ಮತ್ತು ಮುಲ್ಲಪಲ್ಲಿ ರಾಮಚಂದ್ರನ್ ಸೇರಿದಂತೆ ಹಿರಿಯ ನಾಯಕರು ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.

ತೆಲಂಗಾಣದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಚುನಾವಣಾ ಸಮಿತಿಯ ಅಧ್ಯಕ್ಷರಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಉಪಮುಖ್ಯಮಂತ್ರಿ ಭಟ್ಟಿವಿಕ್ರಮಾರ್ಕ ಮಲ್ಲು, ಉತ್ತಮ್ ಕುಮಾರ್ ರೆಡ್ಡಿ ಮತ್ತು ವಿ ಹನುಮಂತ ರಾವ್ ಅವರು ಕೂಡ ಸದಸ್ಯರಾಗಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರನ್ನು ಚುನಾವಣಾ ಸಮಿತಿ ಮುಖ್ಯಸ್ಥರಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಉಪ ಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ, ಆನಂದ್ ಶರ್ಮಾ, ವಿಪ್ಲೋವ್ ಠಾಕೂರ್, ಆಶಾ ಕುಮಾರಿ, ರಾಮ್ ಲಾಲ್ ಠಾಕೂರ್, ಠಾಕೂರ್ ಕೌಲ್ ಮುಂತಾದ ಹಿರಿಯ ನಾಯಕರಿದ್ದಾರೆ.

ಜಿತು ಪಟ್ವಾರಿ ಅವರನ್ನು ಮಧ್ಯಪ್ರದೇಶದ ಪ್ರದೇಶ ಚುನಾವಣಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ದಿಗ್ವಿಜಯ ಸಿಂಗ್, ವಿವೇಕ್ ಟಂಖಾ, ಸುರೇಶ್ ಪಚೌರಿ, ಕಾಂತಿಲಾಲ್ ಭೂರಿಯಾ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸೇರಿದ್ದಾರೆ. ಇದಲ್ಲದೆ ಮಧ್ಯಪ್ರದೇಶಕ್ಕೆ ರಾಜಕೀಯ ವ್ಯವಹಾರಗಳ ಸಮಿತಿಯನ್ನು ಕೂಡ ನೇಮಕ ಮಾಡಲಾಗಿದೆ.

ಛತ್ತೀಸ್‌ಗಢದ ಪ್ರದೇಶ ಕಾಂಗ್ರೆಸ್‌ ಸಮಿತಿಯ ಮುಖ್ಯಸ್ಥ ದೀಪಕ್ ಬೈಜ್ ಅವರನ್ನು ಛತ್ತೀಸ್‌ಗಢದ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರು ಸದಸ್ಯತ್ವವನ್ನು ಹೊಂದಿದ್ದಾರೆ.

ಮಣಿಪುರದಲ್ಲಿ ಕೆ ಮೇಘಚಂದ್ರ ಸಿಂಗ್ ಅವರನ್ನು ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಇಬೋಬಿ ಸಿಂಗ್ ಮತ್ತು ಮಾಜಿ ಉಪಮುಖ್ಯಮಂತ್ರಿ ಗೈಖಾಂಗಮ್  ಅವರು ಸದಸ್ಯರಾಗಿರಲಿದ್ದಾರೆ.

ಎಸ್ ಸುಪೊಂಗ್ಮೆರೆನ್ ಜಮೀರ್ ಅವರನ್ನು ನಾಗಾಲ್ಯಾಂಡ್ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ಮತ್ತು ಆಶಿಶ್ ಕುಮಾರ್ ಸಾಹಾ ಅವರನ್ನು ತ್ರಿಪುರ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇದನ್ನು ಓದಿ: ‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...