Homeಮುಖಪುಟಇಂಡಿಯಾ ಬಣದ ನಾಯಕತ್ವವನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳಬೇಕು: ಒಮರ್ ಅಬ್ದುಲ್ಲಾ ಸಲಹೆ

ಇಂಡಿಯಾ ಬಣದ ನಾಯಕತ್ವವನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳಬೇಕು: ಒಮರ್ ಅಬ್ದುಲ್ಲಾ ಸಲಹೆ

- Advertisement -
- Advertisement -

ಕಾಂಗ್ರೆಸ್ ಜೊತೆಗಿನ ಇಂಡಿಯಾ ಬ್ಲಾಕ್ ಪಾಲುದಾರರಲ್ಲಿ ಹೆಚ್ಚುತ್ತಿರುವ ಅಸಮಾಧಾನವನ್ನು ಒಪ್ಪಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, “ಈ ವಿಷಯವನ್ನು ಲಘುವಾಗಿ ತೆಗೆದುಕೊಳ್ಳುವ ಬದಲು, ಮೈತ್ರಿಯಲ್ಲಿ ತನ್ನ ನಾಯಕತ್ವದ ಪಾತ್ರವನ್ನು ಸಮರ್ಥಿಸಿಕೊಳ್ಳಬೇಕು” ಎಂದು ಕಾಂಗ್ರೆಸ್ ಪಕ್ಷಕ್ಕೆ ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ಪಕ್ಷವಾಗಿ, ಸಂಸತ್ತಿನಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ನ ಮಹತ್ವದ ಸ್ಥಾನದ ಕುರಿತು ಮಾತನಾಡಿ,”ಪಕ್ಷವು  ನಾಯಕತ್ವವನ್ನು ಗಳಿಸಬೇಕಾಗಿದೆ, ಅದನ್ನು ಲಘುವಾಗಿ ತೆಗೆದುಕೊಳ್ಳಲಾಗುವುದಿಲ್ಲ. ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವ ವಿಷಯವನ್ನು ಪಕ್ಷವು ಪ್ರಸ್ತಾಪಿಸಬೇಕು” ಎಂದು ಅವರು ಹೇಳಿದರು.

“ಸಂಸತ್‌ನಲ್ಲಿ ಏಕೈಕ ದೊಡ್ಡ ಪಕ್ಷ ಎಂಬ ಕಾರಣದಿಂದ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವಿರೋಧ ಪಕ್ಷದ ನಾಯಕರಾಗಿರುವ ಕಾರಣ, ಅವರು ರಾಷ್ಟ್ರೀಯ ಮಟ್ಟದಲ್ಲಿ ಹೆಜ್ಜೆಗುರುತನ್ನು ಹೊಂದಿದ್ದಾರೆ ಎಂಬ ಅಂಶವನ್ನು ಬೇರೆ ಯಾವುದೇ ಪಕ್ಷಗಳು ಹೇಳಿಕೊಳ್ಳುವುದಿಲ್ಲ” ಎಂದರು.

ಆದರೂ ಕೆಲವು ಮಿತ್ರಪಕ್ಷಗಳಲ್ಲಿ ಅಸಮಾಧಾನದ ಭಾವನೆ ಇದೆ. ಏಕೆಂದರೆ, ಕಾಂಗ್ರೆಸ್ ನಾಯತ್ವವನ್ನು ಸಮರ್ಥಿಸಲು, ಗಳಿಸಲು ಅಥವಾ ಉಳಿಸಿಕೊಳ್ಳಲು ಸಾಕಷ್ಟು ಕೆಲಸ ಮಾಡುತ್ತಿಲ್ಲ. ಇದನ್ನು ಕಾಂಗ್ರೆಸ್ ಪರಿಗಣಿಸಲು ಬಯಸಬಹುದು ಎಂದು ಹೇಳಿದರು.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶ್ಲಾಘಿಸಿದ ಅಬ್ದುಲ್ಲಾ, “ಅವರು ವಿರೋಧ ಪಕ್ಷದ ಮೈತ್ರಿಕೂಟದಲ್ಲಿ ಅಪ್ರತಿಮ ಸ್ಥಾನಮಾನದ ನಾಯಕಿ, ಇಂಡಿಯಾ ಬ್ಲಾಕ್ ಒಗ್ಗೂಡಿದಾಗ, ಅವರು ಪ್ರಮುಖ ನಾಯಕತ್ವದ ಪಾತ್ರವನ್ನು ವಹಿಸುತ್ತಾರೆ” ಎಂದು ಅವರು ಹೇಳಿದರು.

ಶರದ್ ಪವಾರ್ ಅಥವಾ ಲಾಲು ಯಾದವ್ ಅವರಂತಹ ನಾಯಕರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಉತ್ತಮ ನಾಯಕಿ ಎಂದು ಒಲವು ತೋರುತ್ತಿದ್ದಾರೆ ಎಂಬ ಪ್ರಶ್ನೆಗೆ ಅಬ್ದುಲ್ಲಾ ನೇರ ಉತ್ತರವನ್ನು ನೀಡದಿರಲು ನಿರ್ಧರಿಸಿದರು.

“ನಮ್ಮ ಅಸ್ತಿತ್ವವು ಸಂಸತ್ತಿನ ಚುನಾವಣೆಗೆ ಕೇವಲ ಆರು ತಿಂಗಳ ಮೊದಲು ಇರಬಾರದು. ನಮ್ಮ ಅಸ್ತಿತ್ವವು ಅದಕ್ಕಿಂತ ಹೆಚ್ಚಿನದಾಗಿರಬೇಕು. ಲೋಕಸಭೆಯ ಫಲಿತಾಂಶಗಳು ಕೇವಲ ಹೊರಬಂದಾಗ ನಾವು ಕೊನೆಯ ಬಾರಿ ಭೇಟಿಯಾಗಿದ್ದೇವೆ. ಇಂಡಿಯಾ ಬ್ಲಾಕ್‌ಗಾಗಿ ನಾವು ಮಾಡಿದ ಕೆಲಸಗಳು ಯಾವುದೇ ಔಪಚಾರಿಕ ಅಥವಾ ಅನೌಪಚಾರಿಕ ರೀತಿಯಿರಲಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ; ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...