Homeಕರ್ನಾಟಕಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಲ್ಲಿ ಸ್ವಂತ ಶಕ್ತಿ ಇಲ್ಲ. ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

’ಸುಳ್ಳಿನ ಕಂತೆಗಳನ್ನು ಸೃಷ್ಟಿ ಮಾಡಿ ಮುಗ್ಧ ಜನರ ತಲೆಗೆ ತುಂಬುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕ ಸಾಥ್, ಸಬ್ ಕ ವಿಕಾಸ್ ಎನ್ನುತ್ತಾರೆ, ಆದರೆ ಮಂತ್ರಿಮಂಡಲದಲ್ಲಿ ಒಬ್ಬನೇ ಒಬ್ಬ ಕ್ರಿಶ್ಚಿಯನ್, ಮುಸ್ಲಿಂ ಸಚಿವನಿಗೆ ಅವಕಾಶ ನೀಡಿಲ್ಲ” ಎಂದು ಆರೋಪಿಸಿದ್ದಾರೆ.

’ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಲ್ಲಿ ಸ್ವಂತ ಶಕ್ತಿ ಇಲ್ಲ. ಹಣ, ಅಧಿಕಾರದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ರೂ ಯಡಿಯೂರಪ್ಪ ಅವರನ್ನೇ ಕಿತ್ತು ಬಿಸಾಕಿದ್ರು. ಇದಕ್ಕೇ ಹೇಳೋದು ಮಾಡಿದ್ದುಣ್ಣೋ ಮಹರಾಯ’ ಎಂದು ಯಡಿಯೂರಪ್ಪ ಅವರನ್ನು ಟೀಕಿಸಿದ್ದಾರೆ.

’ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ, ಬಡವರಿಗೆ ಉಚಿತವಾಗಿ ತಲಾ 7 ಕೆ.ಜಿ ಅಕ್ಕಿ ನೀಡಿದ್ದು ನಮ್ಮ ಸರ್ಕಾರ. ಈ ಯೋಜನೆಯನ್ನು ಮುಂದುವರೆಸಿಕೊಂಡು ಹೋಗಲು ಬಿಜೆಪಿ ಸರ್ಕಾರಕ್ಕೆ ಮನಸಿಲ್ಲ. ತಿನ್ನುವ ಅನ್ನದಲ್ಲೂ ರಾಜಕೀಯ ಮಾಡುತ್ತಾರೆ. ಮುಂದೆ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಬಡವರಿಗೆ ಉಚಿತವಾಗಿ ಹತ್ತು ಕೆ.ಜಿ ಅಕ್ಕಿ ನೀಡುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಗುಲಾಬ್ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರಿ ಕಟ್ಟೆಚ್ಚರ, ರಾಜ್ಯದಲ್ಲಿ 2 ದಿನ ಮಳೆ

’ಆರ್‌ಎಸ್‌ಎಸ್‌ನವರು ತಮ್ಮನ್ನು ತಾವು ದೇಶಭಕ್ತರು ಅಂತ ಕರೆದುಕೊಳ್ತಾರೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರ್.ಎಸ್.ಎಸ್ ನಾಯಕನ ಹೆಸರನ್ನು ಬಿಜೆಪಿ ನಾಯಕರು ಹೇಳಲಿ ನೋಡೋಣ. ಇಷ್ಟೇ ಅವರ ದೇಶಭಕ್ತಿ. ಮಹಾತ್ಮ ಗಾಂಧಿ, ಬಿ.ಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಗೆ ಆಗ್ತಾ ಇರಲಿಲ್ಲ, ಅವರ ಭಾವಚಿತ್ರವನ್ನೂ ತಮ್ಮ ಕಚೇರಿಗಳಲ್ಲಿ ಹಾಕುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರನ್ನು ಪ್ರೀತಿಸುವ ಹಾಗೆ ನಾಟಕವಾಡಲು ಆರಂಭಿಸಿದ್ದಾರೆ” ಎಂದು ಬಿಜೆಪಿ ನಾಯಕರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.

’ಗಾಂಧೀಜಿಯವರನ್ನು ಗೌರವಿಸುವುದು ಎಂದರೆ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಲ್ಲ. ಅವರ ಚಿಂತನೆಗಳ ಪಾಲನೆ ಹಾಗೂ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಶ್ರಮಿಸುವುದು ಎಂಬುದನ್ನು ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

’ಈ ದೇಶದಲ್ಲಿ ಪ್ರತಿಯೊಬ್ಬರಿಗೂ ಎಲ್ಲಿಯವರೆಗೆ ಮೈತುಂಬಾ ಬಟ್ಟೆ ಮತ್ತು ಹೊಟ್ಟೆ ತುಂಬಾ ಅನ್ನ ಸಿಗುವುದಿಲ್ಲೋ ಅಲ್ಲಿಯವರೆಗೆ ನಾನು ಅರೆಬೆತ್ತಲಾಗಿಯೇ ಇರುತ್ತೇನೆ ಎಂದು ಗಾಂಧೀಜಿ ಅವರು ಹೇಳಿದ್ದರು. ನಾವು ಆರಂಭಿಸಿದ್ದ ಇಂದಿರಾ ಕ್ಯಾಂಟೀನ್‌ ಅನ್ನು ಬಂದ್ ಮಾಡಿ ಬಿಜೆಪಿ ಸರ್ಕಾರ ಬಡವರು ತಿನ್ನುವ ಅನ್ನಕ್ಕೆ ಕಲ್ಲು ಹಾಕಿದೆ’ ಎಂದಿದ್ದಾರೆ.


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...