ಚಂದ್ರಯಾನ–3ರ ವಿಜ್ಞಾನಿಗಳಿಗೆ ಕಳೆದ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಈ ಕುರಿತು X(ಟ್ವಿಟರ್) ನಲ್ಲಿ ಬರೆದುಕೊಂಡಿದ್ದು, ರಾಂಚಿ ಮೂಲದ ಹಿಂದೂಸ್ತಾನ್ ಎಂಜಿನಿಯರಿಂಗ್ ಕಾರ್ಪೊರೇಷನ್ (ಎಚ್ಇಸಿ) ಚಂದ್ರಯಾನ–3ರ ಉಡ್ಡಯನ ವಾಹನ ತಯಾರಿಸಿದ್ದು, ಇದರ ಎಂಜಿನಿಯರ್ಗಳಿಗೆ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್ ಮುಂದಾಳತ್ವದಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದೇವೆ. ಸೋಮನಾಥ್ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.ಆದರೆ ಕಪಟತನ ತೋರಿರುವ ಬಗ್ಗೆ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.
ಲ್ಯಾಂಡಿಂಗ್ ನಂತರ ನೀವು ಪರದೆಯ ಮೇಲೆ ತ್ವರಿತವಾಗಿ ಬಂದು ಕ್ರೆಡಿಟ್ ತೆಗೆದುಕೊಂಡಿದ್ದೀರಿ. ಆದರೆ ವಿಜ್ಞಾನಿಗಳು ಮತ್ತು ಇಸ್ರೋವನ್ನು ಬೆಂಬಲಿಸುವಲ್ಲಿ ನಿಮ್ಮ ಸರ್ಕಾರವು ಏಕೆ ವಿಫಲವಾಗಿದೆ ಎಂದು ಪ್ರಶ್ನಿಸಿದ್ದಾರೆ.
ಚಂದ್ರಯಾನ 3ರಲ್ಲಿ ಕೆಲಸ ಮಾಡಿದ HEC ಇಂಜಿನಿಯರ್ಗಳು ಕಳೆದ 17 ತಿಂಗಳಿನಿಂದ ಸಂಬಳವನ್ನು ಏಕೆ ಸ್ವೀಕರಿಸಲಿಲ್ಲ ಎಂದು ವೇಣುಗೋಪಾಲ್ ಪ್ರಶ್ನಿಸಿದ್ದಾರೆ.
ಚಂದ್ರಯಾನ–3ರ ಬಜೆಟ್ನ್ನು ಶೇ. 32ರಷ್ಟು ಕಡಿತಗೊಳಿಸಿದ್ದೇಕೆ ಎಂದು ಪ್ರಶ್ನಿಸಿರುವ ಅವರು, ಇವರೆಲ್ಲಾ ದೇಶದ ಹೀರೋಗಳು. ಅವರು ವಿಶ್ವದರ್ಜೆಯ ಬಾಹ್ಯಾಕಾಶ ಯೋಜನೆಯನ್ನು ಮಾಡಿದ್ದಾರೆ. ಆದರೆ ಅವರ ಪ್ರತಿಭೆ ಮತ್ತು ಶ್ರಮದ ಬಗ್ಗೆ ನಿಮಗೆ ಯಾವುದೇ ಗೌರವವಿಲ್ಲ ಎಂದು ಪ್ರಧಾನಿ ಮೋದಿಯವರನ್ನು ವೇಣುಗೋಪಲ್ ಪ್ರಶ್ನಿಸಿದ್ದಾರೆ.
ಇದಲ್ಲದೆ ನಿನ್ನೆ ಇಸ್ರೋ ವಿಜ್ಞಾನಿಗಳು 17 ತಿಂಗಳಿನಿಂದ ತಮ್ಮ ಸಂಬಳವನ್ನು ಪಡೆದಿಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರೋಪಿಸಿದ್ದರು. ಇಸ್ರೋ ವಿಜ್ಞಾನಿಗಳ ವೇತನದ ಬಗ್ಗೆ ಪ್ರಧಾನಿ ಗಮನಿಸಬೇಕು ಎಂದು ಹೇಳಿದ್ದಾರೆ.
The excitement and pride of the #Chandrayaan3 landing will stay with us for a long time. ISRO Chairman Dr. Somanath’s leadership truly created history and we extend our hearty congratulations to him and his team.
However, the PM must answer some for his hypocrisy.
You were… pic.twitter.com/USwpJbtx2l
— K C Venugopal (@kcvenugopalmp) August 24, 2023
ಇದನ್ನು ಓದಿ: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಟ್ರಾನ್ಸ್ಜಂಡರ್ಗಳಿಗೆ ಮೀಸಲಾತಿ ಒದಗಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ