Homeಕರ್ನಾಟಕಕನ್ನಡಿಗರಿಗೆ ಕೊಟ್ಟ 'ಖಾಲಿ ಚೊಂಬಿ'ಗೆ ಕನ್ನಡಿಗರಿಂದ 'ಖಾಲಿ ಕುರ್ಚಿ'ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ;...

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

- Advertisement -
- Advertisement -

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ ಎಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖಾಲಿ ಕುರ್ಚಿಗಳಿರುವ ವಿಡಿಯೋವನ್ನು ಹಂಚಿಕೊಂಡು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿದೆ. 

ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದ ಮೈದಾನದಲ್ಲಿ ಆಯೊಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಧಾನಿ ಮೋದಿ, ಎನ್‌ಡಿಎ ಮೈತ್ರಿ ಜೆಡಿಎಸ್‌ ಪಕ್ಷದ ನಾಯಕ ಹೆಚ್‌ಡಿ ದೇವೇಗೌಡ ಭಾಗವಹಿಸಿದ್ದರು.

ಸಮಾವೇಶದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ, ಮೋದಿಯವರೇ, ನಿಮ್ಮ ಖಾಲಿ ಚೊಂಬಿನ ಸುಳ್ಳಿನ ಭಾಷಣವನ್ನು ಕೇಳಲು ಕನ್ನಡಿಗರು ಮೂರ್ಖರಲ್ಲ, ಈ ಖಾಲಿ ಕುರ್ಚಿಗಳೇ ಬಿಜೆಪಿಯನ್ನು ದೇಶದಿಂದ ಜಾಗ ಖಾಲಿ ಮಾಡಿಸುವುದಕ್ಕೆ ಮುನ್ನುಡಿ ಬರೆಯುತ್ತವೆ ಎಂದು ಹೇಳಿಕೊಂಡಿದೆ.

ಇದಲ್ಲದೆ ಇನ್ನೊಂದು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬರೋಬ್ಬರಿ 10 ವರ್ಷಗಳ ಕಾಲ ದೇಶವನ್ನಾಳಿದೆ, ಈ ಹತ್ತು ವರ್ಷಗಳಲ್ಲಿ ಒಂದೇ ಒಂದು ಜನೋಪಯೋಗಿ ಕೆಲಸಗಳಾಗಲಿಲ್ಲ, ಕೇವಲ ಮೋದಿಯ ವೈಭವೀಕರಣದ ಪ್ರಪಾಗಂಡಾ ಬಿಟ್ಟರೆ ಯಾವುದೇ ಕೆಲಸಗಳು ಕಾಣಸಿಗುವುದಿಲ್ಲ, ಅವರೇ ನೀಡಿದ್ದ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ಹತ್ತು ವರ್ಷಗಳ ಸುದೀರ್ಘ ಆಡಳಿತ ಸಿಕ್ಕ ನಂತರವೂ ಹೇಳಿಕೊಳ್ಳಲು ಒಂದೇ ಒಂದು ಸಾಧನೆ ಇಲ್ಲದಿರುವುದು ಕೇಂದ್ರ ಸರ್ಕಾರದ ನಿಷ್ಕ್ರಿಯತೆಗೆ ಸಾಕ್ಷಿ. ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್ ತೆಗೆದು ನೋಡಿದರೆ ಕೇವಲ ಸೊನ್ನೆ ಕಾಣುತ್ತದೆಯೇ ಹೊರತು ಸಾಧನೆ ಕಾಣುವುದಿಲ್ಲ ಎಂದು ಹೇಳಿದೆ.

 

ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ 100 ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು ಕೇವಲ 13 ಈ ಅನ್ಯಾಯ ಎಲ್ಲಿಯವರೆಗೆ? ಮೋದಿ ಸರ್ಕಾರದ ಈ ಮಹಾಮೋಸಕ್ಕೆ ಅಂತ್ಯ ಹಾಡೋಣ.. ಕನ್ನಡಿಗರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಹೇಳಿಕೊಂಡಿದೆ.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆಯೆಂದು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ರಾಜ್ಯದಲ್ಲಿ ಖಾಲಿ ಚೊಂಬು ಅಭಿಯಾನವನ್ನು ಪ್ರಾರಂಭಿಸಿತ್ತು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು, ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು, 15ನೇ ಹಣಕಾಸು ಆಯೋಗದಿಂದ ನೀಡಬೇಕಿದ್ದ 62 ಸಾವಿರ ಕೋಟಿ ಚೊಂಬು, ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು, ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಹಾಕಿದ್ದು ಮಾತ್ರ ಚೊಂಬು, ನಾವು ಕಟ್ಟುವ ಪ್ರತಿ 100ರೂ. ತೆರಿಗೆಯಲ್ಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು, ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ರಾಜ್ಯಕ್ಕೆ ನೀಡಿದ್ದು ಚೊಂಬು ಎಂದು ಕಾಂಗ್ರೆಸ್‌ ಹೇಳಿಕೊಂಡಿತ್ತು. ಇದಲ್ಲದೆ ನಿನ್ನೆ ಮೋದಿ ರಾಜ್ಯಕ್ಕೆ ಆಗಮನದ ಹಿನ್ನೆಲೆ ಕಾಂಗ್ರೆಸ್‌ ನಾಯಕರು ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು.

ಇದನ್ನು ಓದಿ: ಕೇಂದ್ರ ಸರಕಾರದ ವಿರುದ್ಧ ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. All the brothers and sisters of Karnataka should teach the bjp government the same as we did during the state election pls 🙏🙏🙏🙏🙏🙏🇮🇳

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...