Homeಕರ್ನಾಟಕಕನ್ನಡಿಗರಿಗೆ ಕೊಟ್ಟ 'ಖಾಲಿ ಚೊಂಬಿ'ಗೆ ಕನ್ನಡಿಗರಿಂದ 'ಖಾಲಿ ಕುರ್ಚಿ'ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ;...

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

- Advertisement -
- Advertisement -

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ ಎಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖಾಲಿ ಕುರ್ಚಿಗಳಿರುವ ವಿಡಿಯೋವನ್ನು ಹಂಚಿಕೊಂಡು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿದೆ. 

ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದ ಮೈದಾನದಲ್ಲಿ ಆಯೊಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಧಾನಿ ಮೋದಿ, ಎನ್‌ಡಿಎ ಮೈತ್ರಿ ಜೆಡಿಎಸ್‌ ಪಕ್ಷದ ನಾಯಕ ಹೆಚ್‌ಡಿ ದೇವೇಗೌಡ ಭಾಗವಹಿಸಿದ್ದರು.

ಸಮಾವೇಶದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ, ಮೋದಿಯವರೇ, ನಿಮ್ಮ ಖಾಲಿ ಚೊಂಬಿನ ಸುಳ್ಳಿನ ಭಾಷಣವನ್ನು ಕೇಳಲು ಕನ್ನಡಿಗರು ಮೂರ್ಖರಲ್ಲ, ಈ ಖಾಲಿ ಕುರ್ಚಿಗಳೇ ಬಿಜೆಪಿಯನ್ನು ದೇಶದಿಂದ ಜಾಗ ಖಾಲಿ ಮಾಡಿಸುವುದಕ್ಕೆ ಮುನ್ನುಡಿ ಬರೆಯುತ್ತವೆ ಎಂದು ಹೇಳಿಕೊಂಡಿದೆ.

ಇದಲ್ಲದೆ ಇನ್ನೊಂದು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬರೋಬ್ಬರಿ 10 ವರ್ಷಗಳ ಕಾಲ ದೇಶವನ್ನಾಳಿದೆ, ಈ ಹತ್ತು ವರ್ಷಗಳಲ್ಲಿ ಒಂದೇ ಒಂದು ಜನೋಪಯೋಗಿ ಕೆಲಸಗಳಾಗಲಿಲ್ಲ, ಕೇವಲ ಮೋದಿಯ ವೈಭವೀಕರಣದ ಪ್ರಪಾಗಂಡಾ ಬಿಟ್ಟರೆ ಯಾವುದೇ ಕೆಲಸಗಳು ಕಾಣಸಿಗುವುದಿಲ್ಲ, ಅವರೇ ನೀಡಿದ್ದ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ಹತ್ತು ವರ್ಷಗಳ ಸುದೀರ್ಘ ಆಡಳಿತ ಸಿಕ್ಕ ನಂತರವೂ ಹೇಳಿಕೊಳ್ಳಲು ಒಂದೇ ಒಂದು ಸಾಧನೆ ಇಲ್ಲದಿರುವುದು ಕೇಂದ್ರ ಸರ್ಕಾರದ ನಿಷ್ಕ್ರಿಯತೆಗೆ ಸಾಕ್ಷಿ. ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್ ತೆಗೆದು ನೋಡಿದರೆ ಕೇವಲ ಸೊನ್ನೆ ಕಾಣುತ್ತದೆಯೇ ಹೊರತು ಸಾಧನೆ ಕಾಣುವುದಿಲ್ಲ ಎಂದು ಹೇಳಿದೆ.

 

ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ 100 ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು ಕೇವಲ 13 ಈ ಅನ್ಯಾಯ ಎಲ್ಲಿಯವರೆಗೆ? ಮೋದಿ ಸರ್ಕಾರದ ಈ ಮಹಾಮೋಸಕ್ಕೆ ಅಂತ್ಯ ಹಾಡೋಣ.. ಕನ್ನಡಿಗರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಹೇಳಿಕೊಂಡಿದೆ.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆಯೆಂದು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ರಾಜ್ಯದಲ್ಲಿ ಖಾಲಿ ಚೊಂಬು ಅಭಿಯಾನವನ್ನು ಪ್ರಾರಂಭಿಸಿತ್ತು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು, ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು, 15ನೇ ಹಣಕಾಸು ಆಯೋಗದಿಂದ ನೀಡಬೇಕಿದ್ದ 62 ಸಾವಿರ ಕೋಟಿ ಚೊಂಬು, ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು, ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಹಾಕಿದ್ದು ಮಾತ್ರ ಚೊಂಬು, ನಾವು ಕಟ್ಟುವ ಪ್ರತಿ 100ರೂ. ತೆರಿಗೆಯಲ್ಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು, ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ರಾಜ್ಯಕ್ಕೆ ನೀಡಿದ್ದು ಚೊಂಬು ಎಂದು ಕಾಂಗ್ರೆಸ್‌ ಹೇಳಿಕೊಂಡಿತ್ತು. ಇದಲ್ಲದೆ ನಿನ್ನೆ ಮೋದಿ ರಾಜ್ಯಕ್ಕೆ ಆಗಮನದ ಹಿನ್ನೆಲೆ ಕಾಂಗ್ರೆಸ್‌ ನಾಯಕರು ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು.

ಇದನ್ನು ಓದಿ: ಕೇಂದ್ರ ಸರಕಾರದ ವಿರುದ್ಧ ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. All the brothers and sisters of Karnataka should teach the bjp government the same as we did during the state election pls 🙏🙏🙏🙏🙏🙏🇮🇳

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...