Homeಕರ್ನಾಟಕಕನ್ನಡಿಗರಿಗೆ ಕೊಟ್ಟ 'ಖಾಲಿ ಚೊಂಬಿ'ಗೆ ಕನ್ನಡಿಗರಿಂದ 'ಖಾಲಿ ಕುರ್ಚಿ'ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ;...

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

- Advertisement -
- Advertisement -

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ ಎಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖಾಲಿ ಕುರ್ಚಿಗಳಿರುವ ವಿಡಿಯೋವನ್ನು ಹಂಚಿಕೊಂಡು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿದೆ. 

ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದ ಮೈದಾನದಲ್ಲಿ ಆಯೊಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಧಾನಿ ಮೋದಿ, ಎನ್‌ಡಿಎ ಮೈತ್ರಿ ಜೆಡಿಎಸ್‌ ಪಕ್ಷದ ನಾಯಕ ಹೆಚ್‌ಡಿ ದೇವೇಗೌಡ ಭಾಗವಹಿಸಿದ್ದರು.

ಸಮಾವೇಶದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ, ಮೋದಿಯವರೇ, ನಿಮ್ಮ ಖಾಲಿ ಚೊಂಬಿನ ಸುಳ್ಳಿನ ಭಾಷಣವನ್ನು ಕೇಳಲು ಕನ್ನಡಿಗರು ಮೂರ್ಖರಲ್ಲ, ಈ ಖಾಲಿ ಕುರ್ಚಿಗಳೇ ಬಿಜೆಪಿಯನ್ನು ದೇಶದಿಂದ ಜಾಗ ಖಾಲಿ ಮಾಡಿಸುವುದಕ್ಕೆ ಮುನ್ನುಡಿ ಬರೆಯುತ್ತವೆ ಎಂದು ಹೇಳಿಕೊಂಡಿದೆ.

ಇದಲ್ಲದೆ ಇನ್ನೊಂದು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬರೋಬ್ಬರಿ 10 ವರ್ಷಗಳ ಕಾಲ ದೇಶವನ್ನಾಳಿದೆ, ಈ ಹತ್ತು ವರ್ಷಗಳಲ್ಲಿ ಒಂದೇ ಒಂದು ಜನೋಪಯೋಗಿ ಕೆಲಸಗಳಾಗಲಿಲ್ಲ, ಕೇವಲ ಮೋದಿಯ ವೈಭವೀಕರಣದ ಪ್ರಪಾಗಂಡಾ ಬಿಟ್ಟರೆ ಯಾವುದೇ ಕೆಲಸಗಳು ಕಾಣಸಿಗುವುದಿಲ್ಲ, ಅವರೇ ನೀಡಿದ್ದ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ಹತ್ತು ವರ್ಷಗಳ ಸುದೀರ್ಘ ಆಡಳಿತ ಸಿಕ್ಕ ನಂತರವೂ ಹೇಳಿಕೊಳ್ಳಲು ಒಂದೇ ಒಂದು ಸಾಧನೆ ಇಲ್ಲದಿರುವುದು ಕೇಂದ್ರ ಸರ್ಕಾರದ ನಿಷ್ಕ್ರಿಯತೆಗೆ ಸಾಕ್ಷಿ. ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್ ತೆಗೆದು ನೋಡಿದರೆ ಕೇವಲ ಸೊನ್ನೆ ಕಾಣುತ್ತದೆಯೇ ಹೊರತು ಸಾಧನೆ ಕಾಣುವುದಿಲ್ಲ ಎಂದು ಹೇಳಿದೆ.

 

ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ 100 ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು ಕೇವಲ 13 ಈ ಅನ್ಯಾಯ ಎಲ್ಲಿಯವರೆಗೆ? ಮೋದಿ ಸರ್ಕಾರದ ಈ ಮಹಾಮೋಸಕ್ಕೆ ಅಂತ್ಯ ಹಾಡೋಣ.. ಕನ್ನಡಿಗರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಹೇಳಿಕೊಂಡಿದೆ.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆಯೆಂದು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ರಾಜ್ಯದಲ್ಲಿ ಖಾಲಿ ಚೊಂಬು ಅಭಿಯಾನವನ್ನು ಪ್ರಾರಂಭಿಸಿತ್ತು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು, ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು, 15ನೇ ಹಣಕಾಸು ಆಯೋಗದಿಂದ ನೀಡಬೇಕಿದ್ದ 62 ಸಾವಿರ ಕೋಟಿ ಚೊಂಬು, ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು, ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಹಾಕಿದ್ದು ಮಾತ್ರ ಚೊಂಬು, ನಾವು ಕಟ್ಟುವ ಪ್ರತಿ 100ರೂ. ತೆರಿಗೆಯಲ್ಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು, ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ರಾಜ್ಯಕ್ಕೆ ನೀಡಿದ್ದು ಚೊಂಬು ಎಂದು ಕಾಂಗ್ರೆಸ್‌ ಹೇಳಿಕೊಂಡಿತ್ತು. ಇದಲ್ಲದೆ ನಿನ್ನೆ ಮೋದಿ ರಾಜ್ಯಕ್ಕೆ ಆಗಮನದ ಹಿನ್ನೆಲೆ ಕಾಂಗ್ರೆಸ್‌ ನಾಯಕರು ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು.

ಇದನ್ನು ಓದಿ: ಕೇಂದ್ರ ಸರಕಾರದ ವಿರುದ್ಧ ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. All the brothers and sisters of Karnataka should teach the bjp government the same as we did during the state election pls 🙏🙏🙏🙏🙏🙏🇮🇳

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...