Homeಕರ್ನಾಟಕಕನ್ನಡಿಗರಿಗೆ ಕೊಟ್ಟ 'ಖಾಲಿ ಚೊಂಬಿ'ಗೆ ಕನ್ನಡಿಗರಿಂದ 'ಖಾಲಿ ಕುರ್ಚಿ'ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ;...

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

- Advertisement -
- Advertisement -

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ ಎಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖಾಲಿ ಕುರ್ಚಿಗಳಿರುವ ವಿಡಿಯೋವನ್ನು ಹಂಚಿಕೊಂಡು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿದೆ. 

ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದ ಮೈದಾನದಲ್ಲಿ ಆಯೊಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಧಾನಿ ಮೋದಿ, ಎನ್‌ಡಿಎ ಮೈತ್ರಿ ಜೆಡಿಎಸ್‌ ಪಕ್ಷದ ನಾಯಕ ಹೆಚ್‌ಡಿ ದೇವೇಗೌಡ ಭಾಗವಹಿಸಿದ್ದರು.

ಸಮಾವೇಶದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ, ಮೋದಿಯವರೇ, ನಿಮ್ಮ ಖಾಲಿ ಚೊಂಬಿನ ಸುಳ್ಳಿನ ಭಾಷಣವನ್ನು ಕೇಳಲು ಕನ್ನಡಿಗರು ಮೂರ್ಖರಲ್ಲ, ಈ ಖಾಲಿ ಕುರ್ಚಿಗಳೇ ಬಿಜೆಪಿಯನ್ನು ದೇಶದಿಂದ ಜಾಗ ಖಾಲಿ ಮಾಡಿಸುವುದಕ್ಕೆ ಮುನ್ನುಡಿ ಬರೆಯುತ್ತವೆ ಎಂದು ಹೇಳಿಕೊಂಡಿದೆ.

ಇದಲ್ಲದೆ ಇನ್ನೊಂದು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬರೋಬ್ಬರಿ 10 ವರ್ಷಗಳ ಕಾಲ ದೇಶವನ್ನಾಳಿದೆ, ಈ ಹತ್ತು ವರ್ಷಗಳಲ್ಲಿ ಒಂದೇ ಒಂದು ಜನೋಪಯೋಗಿ ಕೆಲಸಗಳಾಗಲಿಲ್ಲ, ಕೇವಲ ಮೋದಿಯ ವೈಭವೀಕರಣದ ಪ್ರಪಾಗಂಡಾ ಬಿಟ್ಟರೆ ಯಾವುದೇ ಕೆಲಸಗಳು ಕಾಣಸಿಗುವುದಿಲ್ಲ, ಅವರೇ ನೀಡಿದ್ದ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ಹತ್ತು ವರ್ಷಗಳ ಸುದೀರ್ಘ ಆಡಳಿತ ಸಿಕ್ಕ ನಂತರವೂ ಹೇಳಿಕೊಳ್ಳಲು ಒಂದೇ ಒಂದು ಸಾಧನೆ ಇಲ್ಲದಿರುವುದು ಕೇಂದ್ರ ಸರ್ಕಾರದ ನಿಷ್ಕ್ರಿಯತೆಗೆ ಸಾಕ್ಷಿ. ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್ ತೆಗೆದು ನೋಡಿದರೆ ಕೇವಲ ಸೊನ್ನೆ ಕಾಣುತ್ತದೆಯೇ ಹೊರತು ಸಾಧನೆ ಕಾಣುವುದಿಲ್ಲ ಎಂದು ಹೇಳಿದೆ.

 

ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ 100 ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು ಕೇವಲ 13 ಈ ಅನ್ಯಾಯ ಎಲ್ಲಿಯವರೆಗೆ? ಮೋದಿ ಸರ್ಕಾರದ ಈ ಮಹಾಮೋಸಕ್ಕೆ ಅಂತ್ಯ ಹಾಡೋಣ.. ಕನ್ನಡಿಗರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಹೇಳಿಕೊಂಡಿದೆ.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆಯೆಂದು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ರಾಜ್ಯದಲ್ಲಿ ಖಾಲಿ ಚೊಂಬು ಅಭಿಯಾನವನ್ನು ಪ್ರಾರಂಭಿಸಿತ್ತು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು, ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು, 15ನೇ ಹಣಕಾಸು ಆಯೋಗದಿಂದ ನೀಡಬೇಕಿದ್ದ 62 ಸಾವಿರ ಕೋಟಿ ಚೊಂಬು, ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು, ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಹಾಕಿದ್ದು ಮಾತ್ರ ಚೊಂಬು, ನಾವು ಕಟ್ಟುವ ಪ್ರತಿ 100ರೂ. ತೆರಿಗೆಯಲ್ಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು, ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ರಾಜ್ಯಕ್ಕೆ ನೀಡಿದ್ದು ಚೊಂಬು ಎಂದು ಕಾಂಗ್ರೆಸ್‌ ಹೇಳಿಕೊಂಡಿತ್ತು. ಇದಲ್ಲದೆ ನಿನ್ನೆ ಮೋದಿ ರಾಜ್ಯಕ್ಕೆ ಆಗಮನದ ಹಿನ್ನೆಲೆ ಕಾಂಗ್ರೆಸ್‌ ನಾಯಕರು ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು.

ಇದನ್ನು ಓದಿ: ಕೇಂದ್ರ ಸರಕಾರದ ವಿರುದ್ಧ ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. All the brothers and sisters of Karnataka should teach the bjp government the same as we did during the state election pls 🙏🙏🙏🙏🙏🙏🇮🇳

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...