Homeಮುಖಪುಟಚುನಾವಣಾ ಆಯೋಗದ ಹೇಳಿಕೆಗೆ ಅಸಮಾಧಾನ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಚುನಾವಣಾ ಆಯೋಗದ ಹೇಳಿಕೆಗೆ ಅಸಮಾಧಾನ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೊಟ್ಟಿದ್ದ ದೂರಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಗೆ ಕಾಂಗ್ರೆಸ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್‌ ನೀಡಿದ್ದ ದೂರಿಗೆ ಮಂಗಳವಾರ (ಅ.29) ಉತ್ತರಿಸಿದ್ದ ಚುನಾವಣಾ ಆಯೋಗ, “ಪಕ್ಷವು ಚುನಾವಣಾ ಫಲಿತಾಂಶ ತನ್ನ ವಿರುದ್ಧ ಇರುವ ಕಾರಣಕ್ಕೆ ಆಧಾರರಹಿತ ಆರೋಪಗಳನ್ನು ಮಾಡಿದೆ” ಎಂದು ಟೀಕಿಸಿತ್ತು. ಅಲ್ಲದೆ, ಆಧಾರರಹಿತ ಆರೋಪಗಳನ್ನು ಮಾಡದಂತೆ ಎಚ್ಚರಿಕೆ ನೀಡಿತ್ತು.

“ಕಾಂಗ್ರೆಸ್ ಮಾಡಿದ್ದ ಆರೋಪಗಳನ್ನು ಬೇಜವಾಬ್ದಾರಿ ಎಂದಿತ್ತು. ಹರಿಯಾಣದಲ್ಲಿ ಚುನಾವಣಾ ಪ್ರಕ್ರಿಯೆಯು ದೋಷರಹಿತವಾಗಿ ನಡೆದಿದೆ. ಕ್ಷುಲ್ಲಕ ದೂರುಗಳ ಪ್ರವೃತ್ತಿಯನ್ನು ನಿಲ್ಲಿಸಿ” ಎಂದು ಹೇಳಿತ್ತು.

ಈ ಪ್ರತಿಕ್ರಿಯೆ ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಕಾಂಗ್ರೆಸ್, “ಪಕ್ಷವು ಚುನಾವಣಾ ಆಯೋಗವನ್ನು ಗೌರವಿಸುತ್ತದೆ. ಪತ್ರ ಸಂವಹನವು ವಿಧಾನಸಭಾ ಚುನಾವಣೆಯಲ್ಲಿನ ಸಮಸ್ಯೆಗಳಿಗೆ ಸೀಮಿತವಾಗಿ ಮಾಡಲಾಗಿತ್ತು. ಪ್ರಸಕ್ತ ಚುನಾವಣಾ ಆಯೋಗದ ಹೇಳಿಕೆಗಳು, ಆಯೋಗವು ತನ್ನ ತಟಸ್ಥ ನಿಲುವಿನಿಂದ ದೂರ ಉಳಿದಿರುವಂತೆ ಕಂಡು ಬರುತ್ತಿದೆ. ಆ ಮೂಲಕ ತನ್ನ ಕರ್ತವ್ಯವನ್ನು ಆಯೋಗವು ಮರೆತಿದೆ” ಎಂದಿದೆ.

ಚುನಾವಣಾ ಆಯೋಗವು ನೀಡಿರುವ ಪ್ರತಿಕ್ರಿಯೆಯಲ್ಲಿ ಬಳಸಿರುವ ಭಾಷೆ ಮತ್ತು ಪಕ್ಷದ ವಿರುದ್ಧ ಮಾಡಿದ ಆರೋಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್, “ಈ ವಿಚಾರದಲ್ಲಿ ಚುನಾವಣಾ ಆಯೋಗ ತನಗೇ ತಾನೇ ಕ್ಲೀನ್ ಚಿಟ್ ನೀಡಿದರೂ ಆಶ್ಚರ್ಯವಿಲ್ಲ” ಎಂದು ವ್ಯಂಗ್ಯವಾಡಿದೆ. ಚುನಾವಣಾ ಆಯೋಗವು ಕಾನೂನಿನ ಮೂಲಕ ಸ್ಥಾಪಿತವಾದ ಒಂದು ಸ್ವತಂತ್ರ ಸಂಸ್ಥೆ ಎಂಬುವುದನ್ನು ಮರೆಯಬಾರದು. ಆಯೋಗಕ್ಕೆ ಯಾರು ನಿರ್ದೇಶನ ನೀಡುತ್ತಿದ್ದಾರೋ ಗೊತ್ತಿಲ್ಲ. ಆದರೆ, ಇತ್ತೀಚೆಗೆ ಪಕ್ಷದೊಂದಿಗೆ ಅದರ ಸಂವಹನ ಸರಿಯಾಗಿ ಇಲ್ಲ. ನಮಗೆ ಸರಿಯಾದ ಪ್ರತಿಕ್ರಿಯೆ ಸಿಗದಿದ್ದರೆ ಕಾನೂನು ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ಸಿಪಿಐ(ಎಂ) ಸಂಸದರಿಗೆ ‘ಫ್ಯಾಸಿಸಂ ವಿರೋಧಿ’ ಸಭೆಗೆ ತೆರಳಲು ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...