Homeಮುಖಪುಟ’ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ..ಕೆಚ್ಚೆದೆಯಿಂದ ಹೋರಾಡಿದವರಿಗೆ ಸ್ವಾತಂತ್ರ್ಯ ಸಿಕ್ಕಿದೆ: ಕಂಗನಾಗೆ ಕಾಂಗ್ರೆಸ್ ತಿರುಗೇಟು

’ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ..ಕೆಚ್ಚೆದೆಯಿಂದ ಹೋರಾಡಿದವರಿಗೆ ಸ್ವಾತಂತ್ರ್ಯ ಸಿಕ್ಕಿದೆ: ಕಂಗನಾಗೆ ಕಾಂಗ್ರೆಸ್ ತಿರುಗೇಟು

ಕಂಗನಾ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗಿದೆ

- Advertisement -
- Advertisement -

“ಭಾರತಕ್ಕೆ 2014 ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು, 1947 ರಲ್ಲಿ ಸಿಕ್ಕಿದ್ದು ಭಿಕ್ಷೆ” ಎಂಬ ಬಾಲಿವುಡ್ ನಟಿ ಪದ್ಮಶ್ರೀ ಕಂಗನಾ ರಣಾವತ್ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಪಕ್ಷಗಳ ನಾಯಕರು ಸೇರಿದಂತೆ ಜನ ಸಾಮಾನ್ಯರು ನಟಿಯ ವಿರುದ್ಧ ಕಿಡಿ ಕಾರಿದ್ದಾರೆ.

ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ವೀರ ಸಾವರ್ಕರ್ ಅವರ ಕ್ಷಮಾದಾನ ಅರ್ಜಿಗಳನ್ನು ಉಲ್ಲೇಖಿಸಿ, ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ ಎಂದು ಆಕ್ರೋಶ ಹೊರಹಾಕಿದೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “ಅದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು.

ಕಂಗನಾ ಹೇಳಿಕೆಗೆ ಬಿಜೆಪಿ ಸಂಸದ ವರುಣ್ ಗಾಂಧಿ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಸೇರಿದಂತೆ ಅನೇಕ ಮಂದಿ ಆಕ್ರೋಶ ಹೊರಹಾಕಿದ್ದರು. ಈಗ ಕಾಂಗ್ರೆಸ್ ಕೂಡ ಟ್ವೀಟ್ ಮಾಡಿ ನಟಿಯ ಹೇಳಿಕೆಗೆ ಕಿಡಿ ಕಾರಿದೆ.

ಇದನ್ನೂ ಓದಿ: ದೇಶದ ಸ್ವಾತಂತ್ಯ್ರದ ಕುರಿತು ವಿವಾದಾತ್ಮಕ ಹೇಳಿಕೆ: ನಟಿ ಕಂಗನಾ ವಿರುದ್ದ ದೂರು ದಾಖಲು

’ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ..ಕೆಚ್ಚೆದೆಯಿಂದ ಹೋರಾಡಿದವರಿಗೆ ಸ್ವಾತಂತ್ರ್ಯ ಸಿಕ್ಕಿದೆ’ ಎಂದು ಟ್ವೀಟ್ ಮಾಡಿದೆ.

ಇನ್ನು ನಟಿ ಕಂಗನಾರ ಅದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ ಎಂಬ ದೇಶದ್ರೋಹ ಹೇಳಿಕೆ ಹಿನ್ನೆಲೆ ಆಕೆಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಒತ್ತಾಯಿಸಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು “ಪ್ರಧಾನಿ ಅವರು ತಮ್ಮ ಮೌನವನ್ನು ಮುರಿಯಬೇಕು. ಅವರು ನಟಿ ಕಂಗನಾ ರಣಾವತ್ ಅವರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುತ್ತಾರೆ ಎಂಬುದನ್ನು ದೇಶಕ್ಕೆ ತಿಳಿಸಬೇಕು. ಒಪ್ಪಿಕೊಳ್ಳೂವುದಿಲ್ಲ ಎಂದರೆ ಅಂತಹವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಇತ್ತೀಚೆಗೆ ಕಂಗನಾ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ದೇಶದ ಕಾನೂನು, ಭಾರತದ ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವವಿಲ್ಲದ ಇಂತಹ ವ್ಯಕ್ತಿ ಪದ್ಮಶ್ರೀಯಂತಹ ಶ್ರೇಷ್ಠ ಪ್ರಶಸ್ತಿಗೆ ಅರ್ಹರಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಬರೆದಿದ್ದಾರೆ.

ಆಮ್ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಕಾರ್ಯಾಧ್ಯಕ್ಷೆ ಪ್ರೀತಿ ಮೆನನ್, ಕಂಗನಾ ರಣಾವತ್ ನೀಡಿರುವ ದೇಶದ್ರೋಹಿ ಮತ್ತು ಪ್ರಚೋದಕ ಹೇಳಿಕೆಗಳಿಗಾಗಿ ಸೆಕ್ಷನ್ 504, 505 ಮತ್ತು 124A ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿ ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್ ಮಾಡಿ, “ಒಮ್ಮೆ ಮಹಾತ್ಮಾ ಗಾಂಧಿಯವರ ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಕೆಲವೊಮ್ಮೆ ಅವರ ಕೊಲೆಗಾರನಿಗೆ ಗೌರವ. ಈಗ ಹುತಾತ್ಮ ಮಂಗಲ್ ಪಾಂಡೆಯಿಂದ ಹಿಡಿದು ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆ ತಿರಸ್ಕಾರ. ಇಂತಹ ಆಲೋಚನೆಯನ್ನು ನಾನು ಹುಚ್ಚುತನ ಎನ್ನಲೋ…ದೇಶದ್ರೋಹ ಎನ್ನಲೋ…” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: 1947 ರಲ್ಲಿ ದೇಶಕ್ಕೆ ಸಿಕ್ಕಿದು ಸ್ವತಂತ್ರವಲ್ಲ ಭಿಕ್ಷೆ ಎಂಬ ಕಂಗನಾ ಹೇಳಿಕೆ: ಇದು ಹುಚ್ಚುತನವೋ..ದೇಶದ್ರೋಹವೋ- ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 2020ರಲ್ಲಿನ ಪದ್ಮಶ್ರೀ ಕಂಗನಾ ಕಷ್ಟಪಟ್ಟು ಪಡೆದದ್ದೊ ಅಥವಾ, ಯಾರೋ ಕೊಟ್ಟ ಬಿಕ್ಷೆಯೊ? ಸ್ವಾತಂತ್ರಕ್ಕಾಗಿ ಹಿರಿಯರು ಪಟ್ಟ ಕಷ್ಟ ಮತ್ತು ಬಲಿದಾನ ಅರಿಯದವರು ಮತ್ತು ಕ್ಷುಲ್ಲಕವಾಗಿ ನೋಡುವ ಎಲ್ಲರೂ ಮುಂಚೂಣಿಗೆ ಬಂದಿರುವ ಕಾಲ ಇದು. ಸಮಾಜದಲ್ಲಿ ಮೂರೂ ಬಿಟ್ಟವರು ಇಂದು ಮುಖ್ಯ!

  2. Beedi Nayigu adaradde aada yogyathe irutthe. Adakinthalu keelu Abhivyakti hondiruvavaru INDIPENDENT INDIA da bagge heegeye sadaakala Mathana
    duthiruthare allave!!?

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...