Homeಮುಖಪುಟನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ 'ಹೊಸ ವರ್ಷದ ಕ್ರೂರ ಉಡುಗೊರೆ' ಎಂದ...

ನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ ‘ಹೊಸ ವರ್ಷದ ಕ್ರೂರ ಉಡುಗೊರೆ’ ಎಂದ ಕಾಂಗ್ರೆಸ್‌

- Advertisement -
- Advertisement -

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ)ಯೋಜನೆಯಡಿಲ್ಲಿನ ಕಾರ್ಮಿಕರ ಪಾವತಿಯನ್ನು ಇನ್ನು ಮುಂದೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯ( (ABPS)) ಮೂಲಕವೇ ಮಾಡಲು ನಿರ್ಧರಿಸಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರ ‘ಕ್ರೂರ ಹೊಸ ವರ್ಷದ ಉಡುಗೊರೆ’ ಎಂದು ಕಾಂಗ್ರೆಸ್ ಕರೆದಿದ್ದು, ಇದು ಕೋಟಿಗಟ್ಟಲೆ ಬಡವರನ್ನು ಮತ್ತು ಅಂಚಿನಲ್ಲಿರುವ ನಾಗರಿಕರನ್ನು ಮೂಲಭೂತ ಆದಾಯವನ್ನು ಗಳಿಸುವುದರಿಂದ ಹೊರಗಿಡುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು ಆಧಾರ್-ಆಧಾರಿತ ಪಾವತಿ ವ್ಯವಸ್ಥೆಯನ್ನು (ABPS) ಜಾರಿಗೊಳಿಸಲು ಡಿ.31ರ ಗಡುವನ್ನು ವಿಸ್ತರಿಸಿಲ್ಲ. ಕಾರ್ಮಿಕರ ಆಧಾರ್ ವಿವರಗಳನ್ನು ಉದ್ಯೋಗ ಕಾರ್ಡ್‌ಗಳಿಗೆ ಜೋಡನೆ ಮಾಡಬೇಕಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜೈರಾಮ್ ರಮೇಶ್, ಮೋದಿ ಸರ್ಕಾರವು ತಂತ್ರಜ್ಞಾನದ ವಿನಾಶಕಾರಿ ಪ್ರಯೋಗಗಳನ್ನು ಮುಂದುವರೆಸುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಾರ್ವಜನಿಕ ಕೆಲಸಗಳ ಮೂಲಕ ಮೂಲ ಆದಾಯವನ್ನು ಗಳಿಸುವುದರಿಂದ ಕೋಟಿಗಟ್ಟಲೆ ಬಡ ಮತ್ತು ಅಂಚಿನಲ್ಲಿರುವ ಭಾರತೀಯರನ್ನು ಹೊರಗಿಡುವ ‘ಪ್ರಧಾನ ಮಂತ್ರಿಯ ಕ್ರೂರ ಹೊಸ ವರ್ಷದ ಉಡುಗೊರೆ’ಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2023ರ ಆ.30ರಿಂದ ತನ್ನ ಬೇಡಿಕೆಗಳನ್ನು ಪುನರುಚ್ಚರಿಸುತ್ತದೆ. ಮೋದಿ ಸರ್ಕಾರವು ತಂತ್ರಜ್ಞಾನವನ್ನು ಶಸ್ತ್ರಾಸ್ತ್ರಗೊಳಿಸುವುದನ್ನು ನಿಲ್ಲಿಸಬೇಕು. ವಿಶೇಷವಾಗಿ ಆಧಾರ್ ಹೆಸರಿನಲ್ಲಿ ದುರ್ಬಲ ಭಾರತೀಯರಿಗೆ ಸಾಮಾಜಿಕ ಕಲ್ಯಾಣ ಪ್ರಯೋಜನಗಳನ್ನು ನಿರಾಕರಿಸುವುದನ್ನು ನಿಲ್ಲಿಸಬೇಕು, ವಿಳಂಬಿತ ವೇತನ ಪಾವತಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

25.69 ಕೋಟಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿದ್ದು, ಅದರಲ್ಲಿ 14.33 ಕೋಟಿ ಸಕ್ರಿಯ ಕೆಲಸಗಾರರೆಂದು ಪರಿಗಣಿಸಲಾಗಿದೆ ಮತ್ತು ಇದರಲ್ಲಿ ಕ್ರಮವಾಗಿ ಶೇ.34.8 (8.9 ಕೋಟಿ) ಮತ್ತು ಶೇ.12.7 (1.8 ಕೋಟಿ) ಎಬಿಪಿಎಸ್‌ಗೆ ಅನರ್ಹರಾಗಿದ್ದಾರೆ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರು ಎಬಿಪಿಎಸ್‌ಗೆ ಅರ್ಹರಲ್ಲ ಎಂಬ ಕಾರಣಕ್ಕೆ ಯಾವುದೇ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗುವುದಿಲ್ಲ ಎಂಬ 2023ರ ಸಚಿವಾಲಯದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಜೈರಾಮ್ ರಮೇಶ್,  ಏಪ್ರಿಲ್ 2022ರಿಂದ 7.6 ಕೋಟಿ ಕಾರ್ಮಿಕರ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ 1.9 ಕೋಟಿ ಕಾರ್ಡ್‌ಗಳನ್ನು ಅಳಿಸಲಾಗಿದೆ ಎಂದು ಹೇಳಿದ್ದಾರೆ.

ಆಧಾರ್ ದೃಢೀಕರಣ ಮತ್ತು ಎಬಿಪಿಎಸ್‌ನ್ನು ಜಾರಿಗೊಳಿಸಲು ಮೋದಿ ಸರ್ಕಾರದ ಆತುರವು ಗಮನಾರ್ಹ ಸಂಖ್ಯೆಯ ಕಾರ್ಡ್‌ಗಳ ಅಳಿಸುವಿಕೆಗೆ ಕಾರಣವಾಗಿದೆ ಎಂದು ಪರಿಶೀಲನೆಯು ತೋರಿಸಿದೆ. ವಿವಿಧ ಪಾಲುದಾರರು ವೇತನ ಪಾವತಿಗೆ ಎಬಿಪಿಎಸ್‌ನ್ನು ಅತ್ಯುತ್ತಮ ಮಾರ್ಗವೆಂದು ಕಂಡುಕೊಂಡಿದ್ದಾರೆ ಎಂಬ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಮೇಶ್, ಈ ಪಾಲುದಾರರು ಯಾರು ಮತ್ತು ಯಾವಾಗ ಈ ಸಮಾಲೋಚನೆಗಳನ್ನು ನಡೆಸಲಾಯಿತು ಎಂಬುದನ್ನು ಸ್ಪಷ್ಟಪಡಿಸಲು ಸಚಿವಾಲಯವನ್ನು ಕೇಳಿದರು.  ಎಬಿಪಿಎಸ್‌ನಿಂದ ಪಾವತಿ ದಕ್ಷತೆಯ ಹೆಚ್ಚಳದ ಕುರಿತ ಸಚಿವಾಲಯದ ಸಮರ್ಥನೆಯು ಆಧಾರರಹಿತವಾಗಿ ಉಳಿದಿವೆ ಎಂದು ಹೇಳಿದ್ದಾರೆ.

ಹೊಸ ವರ್ಷದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯೋಜನೆಯಡಿಲ್ಲಿನ ಎಲ್ಲ ವೇತನಗಳನ್ನು ಆಧಾರ್ ಆಧರಿತ ಪಾವತಿ ವ್ಯವಸ್ಥೆ (ಎಬಿಪಿಎಸ್)ಯ ಮೂಲಕವೇ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಕಾರ್ಮಿಕರ ಆಧಾರ್ ವಿವರಗಳನ್ನು ಅವರ ಉದ್ಯೋಗ ಕಾರ್ಡ್‌ಗಳ ಜೊತೆಗೆ ಜೋಡಣೆಗೊಳಿಸುವುದು ಅಗತ್ಯವಾಗಿದೆ. ಎಬಿಪಿಎಸ್‌ನ್ನು ಕಡ್ಡಾಯಗೊಳಿಸಿದ 5ನೇ ಗಡುವು 2023ರ ಡಿ.31ರಂದು ಅಂತ್ಯಗೊಂಡಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...