Homeಮುಖಪುಟನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ 'ಹೊಸ ವರ್ಷದ ಕ್ರೂರ ಉಡುಗೊರೆ' ಎಂದ...

ನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ ‘ಹೊಸ ವರ್ಷದ ಕ್ರೂರ ಉಡುಗೊರೆ’ ಎಂದ ಕಾಂಗ್ರೆಸ್‌

- Advertisement -
- Advertisement -

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ)ಯೋಜನೆಯಡಿಲ್ಲಿನ ಕಾರ್ಮಿಕರ ಪಾವತಿಯನ್ನು ಇನ್ನು ಮುಂದೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯ( (ABPS)) ಮೂಲಕವೇ ಮಾಡಲು ನಿರ್ಧರಿಸಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರ ‘ಕ್ರೂರ ಹೊಸ ವರ್ಷದ ಉಡುಗೊರೆ’ ಎಂದು ಕಾಂಗ್ರೆಸ್ ಕರೆದಿದ್ದು, ಇದು ಕೋಟಿಗಟ್ಟಲೆ ಬಡವರನ್ನು ಮತ್ತು ಅಂಚಿನಲ್ಲಿರುವ ನಾಗರಿಕರನ್ನು ಮೂಲಭೂತ ಆದಾಯವನ್ನು ಗಳಿಸುವುದರಿಂದ ಹೊರಗಿಡುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು ಆಧಾರ್-ಆಧಾರಿತ ಪಾವತಿ ವ್ಯವಸ್ಥೆಯನ್ನು (ABPS) ಜಾರಿಗೊಳಿಸಲು ಡಿ.31ರ ಗಡುವನ್ನು ವಿಸ್ತರಿಸಿಲ್ಲ. ಕಾರ್ಮಿಕರ ಆಧಾರ್ ವಿವರಗಳನ್ನು ಉದ್ಯೋಗ ಕಾರ್ಡ್‌ಗಳಿಗೆ ಜೋಡನೆ ಮಾಡಬೇಕಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜೈರಾಮ್ ರಮೇಶ್, ಮೋದಿ ಸರ್ಕಾರವು ತಂತ್ರಜ್ಞಾನದ ವಿನಾಶಕಾರಿ ಪ್ರಯೋಗಗಳನ್ನು ಮುಂದುವರೆಸುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಾರ್ವಜನಿಕ ಕೆಲಸಗಳ ಮೂಲಕ ಮೂಲ ಆದಾಯವನ್ನು ಗಳಿಸುವುದರಿಂದ ಕೋಟಿಗಟ್ಟಲೆ ಬಡ ಮತ್ತು ಅಂಚಿನಲ್ಲಿರುವ ಭಾರತೀಯರನ್ನು ಹೊರಗಿಡುವ ‘ಪ್ರಧಾನ ಮಂತ್ರಿಯ ಕ್ರೂರ ಹೊಸ ವರ್ಷದ ಉಡುಗೊರೆ’ಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2023ರ ಆ.30ರಿಂದ ತನ್ನ ಬೇಡಿಕೆಗಳನ್ನು ಪುನರುಚ್ಚರಿಸುತ್ತದೆ. ಮೋದಿ ಸರ್ಕಾರವು ತಂತ್ರಜ್ಞಾನವನ್ನು ಶಸ್ತ್ರಾಸ್ತ್ರಗೊಳಿಸುವುದನ್ನು ನಿಲ್ಲಿಸಬೇಕು. ವಿಶೇಷವಾಗಿ ಆಧಾರ್ ಹೆಸರಿನಲ್ಲಿ ದುರ್ಬಲ ಭಾರತೀಯರಿಗೆ ಸಾಮಾಜಿಕ ಕಲ್ಯಾಣ ಪ್ರಯೋಜನಗಳನ್ನು ನಿರಾಕರಿಸುವುದನ್ನು ನಿಲ್ಲಿಸಬೇಕು, ವಿಳಂಬಿತ ವೇತನ ಪಾವತಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

25.69 ಕೋಟಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿದ್ದು, ಅದರಲ್ಲಿ 14.33 ಕೋಟಿ ಸಕ್ರಿಯ ಕೆಲಸಗಾರರೆಂದು ಪರಿಗಣಿಸಲಾಗಿದೆ ಮತ್ತು ಇದರಲ್ಲಿ ಕ್ರಮವಾಗಿ ಶೇ.34.8 (8.9 ಕೋಟಿ) ಮತ್ತು ಶೇ.12.7 (1.8 ಕೋಟಿ) ಎಬಿಪಿಎಸ್‌ಗೆ ಅನರ್ಹರಾಗಿದ್ದಾರೆ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರು ಎಬಿಪಿಎಸ್‌ಗೆ ಅರ್ಹರಲ್ಲ ಎಂಬ ಕಾರಣಕ್ಕೆ ಯಾವುದೇ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗುವುದಿಲ್ಲ ಎಂಬ 2023ರ ಸಚಿವಾಲಯದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಜೈರಾಮ್ ರಮೇಶ್,  ಏಪ್ರಿಲ್ 2022ರಿಂದ 7.6 ಕೋಟಿ ಕಾರ್ಮಿಕರ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ 1.9 ಕೋಟಿ ಕಾರ್ಡ್‌ಗಳನ್ನು ಅಳಿಸಲಾಗಿದೆ ಎಂದು ಹೇಳಿದ್ದಾರೆ.

ಆಧಾರ್ ದೃಢೀಕರಣ ಮತ್ತು ಎಬಿಪಿಎಸ್‌ನ್ನು ಜಾರಿಗೊಳಿಸಲು ಮೋದಿ ಸರ್ಕಾರದ ಆತುರವು ಗಮನಾರ್ಹ ಸಂಖ್ಯೆಯ ಕಾರ್ಡ್‌ಗಳ ಅಳಿಸುವಿಕೆಗೆ ಕಾರಣವಾಗಿದೆ ಎಂದು ಪರಿಶೀಲನೆಯು ತೋರಿಸಿದೆ. ವಿವಿಧ ಪಾಲುದಾರರು ವೇತನ ಪಾವತಿಗೆ ಎಬಿಪಿಎಸ್‌ನ್ನು ಅತ್ಯುತ್ತಮ ಮಾರ್ಗವೆಂದು ಕಂಡುಕೊಂಡಿದ್ದಾರೆ ಎಂಬ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಮೇಶ್, ಈ ಪಾಲುದಾರರು ಯಾರು ಮತ್ತು ಯಾವಾಗ ಈ ಸಮಾಲೋಚನೆಗಳನ್ನು ನಡೆಸಲಾಯಿತು ಎಂಬುದನ್ನು ಸ್ಪಷ್ಟಪಡಿಸಲು ಸಚಿವಾಲಯವನ್ನು ಕೇಳಿದರು.  ಎಬಿಪಿಎಸ್‌ನಿಂದ ಪಾವತಿ ದಕ್ಷತೆಯ ಹೆಚ್ಚಳದ ಕುರಿತ ಸಚಿವಾಲಯದ ಸಮರ್ಥನೆಯು ಆಧಾರರಹಿತವಾಗಿ ಉಳಿದಿವೆ ಎಂದು ಹೇಳಿದ್ದಾರೆ.

ಹೊಸ ವರ್ಷದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯೋಜನೆಯಡಿಲ್ಲಿನ ಎಲ್ಲ ವೇತನಗಳನ್ನು ಆಧಾರ್ ಆಧರಿತ ಪಾವತಿ ವ್ಯವಸ್ಥೆ (ಎಬಿಪಿಎಸ್)ಯ ಮೂಲಕವೇ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಕಾರ್ಮಿಕರ ಆಧಾರ್ ವಿವರಗಳನ್ನು ಅವರ ಉದ್ಯೋಗ ಕಾರ್ಡ್‌ಗಳ ಜೊತೆಗೆ ಜೋಡಣೆಗೊಳಿಸುವುದು ಅಗತ್ಯವಾಗಿದೆ. ಎಬಿಪಿಎಸ್‌ನ್ನು ಕಡ್ಡಾಯಗೊಳಿಸಿದ 5ನೇ ಗಡುವು 2023ರ ಡಿ.31ರಂದು ಅಂತ್ಯಗೊಂಡಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...