Homeಮುಖಪುಟನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ 'ಹೊಸ ವರ್ಷದ ಕ್ರೂರ ಉಡುಗೊರೆ' ಎಂದ...

ನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ ‘ಹೊಸ ವರ್ಷದ ಕ್ರೂರ ಉಡುಗೊರೆ’ ಎಂದ ಕಾಂಗ್ರೆಸ್‌

- Advertisement -
- Advertisement -

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ)ಯೋಜನೆಯಡಿಲ್ಲಿನ ಕಾರ್ಮಿಕರ ಪಾವತಿಯನ್ನು ಇನ್ನು ಮುಂದೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯ( (ABPS)) ಮೂಲಕವೇ ಮಾಡಲು ನಿರ್ಧರಿಸಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರ ‘ಕ್ರೂರ ಹೊಸ ವರ್ಷದ ಉಡುಗೊರೆ’ ಎಂದು ಕಾಂಗ್ರೆಸ್ ಕರೆದಿದ್ದು, ಇದು ಕೋಟಿಗಟ್ಟಲೆ ಬಡವರನ್ನು ಮತ್ತು ಅಂಚಿನಲ್ಲಿರುವ ನಾಗರಿಕರನ್ನು ಮೂಲಭೂತ ಆದಾಯವನ್ನು ಗಳಿಸುವುದರಿಂದ ಹೊರಗಿಡುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು ಆಧಾರ್-ಆಧಾರಿತ ಪಾವತಿ ವ್ಯವಸ್ಥೆಯನ್ನು (ABPS) ಜಾರಿಗೊಳಿಸಲು ಡಿ.31ರ ಗಡುವನ್ನು ವಿಸ್ತರಿಸಿಲ್ಲ. ಕಾರ್ಮಿಕರ ಆಧಾರ್ ವಿವರಗಳನ್ನು ಉದ್ಯೋಗ ಕಾರ್ಡ್‌ಗಳಿಗೆ ಜೋಡನೆ ಮಾಡಬೇಕಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜೈರಾಮ್ ರಮೇಶ್, ಮೋದಿ ಸರ್ಕಾರವು ತಂತ್ರಜ್ಞಾನದ ವಿನಾಶಕಾರಿ ಪ್ರಯೋಗಗಳನ್ನು ಮುಂದುವರೆಸುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಾರ್ವಜನಿಕ ಕೆಲಸಗಳ ಮೂಲಕ ಮೂಲ ಆದಾಯವನ್ನು ಗಳಿಸುವುದರಿಂದ ಕೋಟಿಗಟ್ಟಲೆ ಬಡ ಮತ್ತು ಅಂಚಿನಲ್ಲಿರುವ ಭಾರತೀಯರನ್ನು ಹೊರಗಿಡುವ ‘ಪ್ರಧಾನ ಮಂತ್ರಿಯ ಕ್ರೂರ ಹೊಸ ವರ್ಷದ ಉಡುಗೊರೆ’ಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2023ರ ಆ.30ರಿಂದ ತನ್ನ ಬೇಡಿಕೆಗಳನ್ನು ಪುನರುಚ್ಚರಿಸುತ್ತದೆ. ಮೋದಿ ಸರ್ಕಾರವು ತಂತ್ರಜ್ಞಾನವನ್ನು ಶಸ್ತ್ರಾಸ್ತ್ರಗೊಳಿಸುವುದನ್ನು ನಿಲ್ಲಿಸಬೇಕು. ವಿಶೇಷವಾಗಿ ಆಧಾರ್ ಹೆಸರಿನಲ್ಲಿ ದುರ್ಬಲ ಭಾರತೀಯರಿಗೆ ಸಾಮಾಜಿಕ ಕಲ್ಯಾಣ ಪ್ರಯೋಜನಗಳನ್ನು ನಿರಾಕರಿಸುವುದನ್ನು ನಿಲ್ಲಿಸಬೇಕು, ವಿಳಂಬಿತ ವೇತನ ಪಾವತಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

25.69 ಕೋಟಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿದ್ದು, ಅದರಲ್ಲಿ 14.33 ಕೋಟಿ ಸಕ್ರಿಯ ಕೆಲಸಗಾರರೆಂದು ಪರಿಗಣಿಸಲಾಗಿದೆ ಮತ್ತು ಇದರಲ್ಲಿ ಕ್ರಮವಾಗಿ ಶೇ.34.8 (8.9 ಕೋಟಿ) ಮತ್ತು ಶೇ.12.7 (1.8 ಕೋಟಿ) ಎಬಿಪಿಎಸ್‌ಗೆ ಅನರ್ಹರಾಗಿದ್ದಾರೆ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರು ಎಬಿಪಿಎಸ್‌ಗೆ ಅರ್ಹರಲ್ಲ ಎಂಬ ಕಾರಣಕ್ಕೆ ಯಾವುದೇ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗುವುದಿಲ್ಲ ಎಂಬ 2023ರ ಸಚಿವಾಲಯದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಜೈರಾಮ್ ರಮೇಶ್,  ಏಪ್ರಿಲ್ 2022ರಿಂದ 7.6 ಕೋಟಿ ಕಾರ್ಮಿಕರ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ 1.9 ಕೋಟಿ ಕಾರ್ಡ್‌ಗಳನ್ನು ಅಳಿಸಲಾಗಿದೆ ಎಂದು ಹೇಳಿದ್ದಾರೆ.

ಆಧಾರ್ ದೃಢೀಕರಣ ಮತ್ತು ಎಬಿಪಿಎಸ್‌ನ್ನು ಜಾರಿಗೊಳಿಸಲು ಮೋದಿ ಸರ್ಕಾರದ ಆತುರವು ಗಮನಾರ್ಹ ಸಂಖ್ಯೆಯ ಕಾರ್ಡ್‌ಗಳ ಅಳಿಸುವಿಕೆಗೆ ಕಾರಣವಾಗಿದೆ ಎಂದು ಪರಿಶೀಲನೆಯು ತೋರಿಸಿದೆ. ವಿವಿಧ ಪಾಲುದಾರರು ವೇತನ ಪಾವತಿಗೆ ಎಬಿಪಿಎಸ್‌ನ್ನು ಅತ್ಯುತ್ತಮ ಮಾರ್ಗವೆಂದು ಕಂಡುಕೊಂಡಿದ್ದಾರೆ ಎಂಬ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಮೇಶ್, ಈ ಪಾಲುದಾರರು ಯಾರು ಮತ್ತು ಯಾವಾಗ ಈ ಸಮಾಲೋಚನೆಗಳನ್ನು ನಡೆಸಲಾಯಿತು ಎಂಬುದನ್ನು ಸ್ಪಷ್ಟಪಡಿಸಲು ಸಚಿವಾಲಯವನ್ನು ಕೇಳಿದರು.  ಎಬಿಪಿಎಸ್‌ನಿಂದ ಪಾವತಿ ದಕ್ಷತೆಯ ಹೆಚ್ಚಳದ ಕುರಿತ ಸಚಿವಾಲಯದ ಸಮರ್ಥನೆಯು ಆಧಾರರಹಿತವಾಗಿ ಉಳಿದಿವೆ ಎಂದು ಹೇಳಿದ್ದಾರೆ.

ಹೊಸ ವರ್ಷದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯೋಜನೆಯಡಿಲ್ಲಿನ ಎಲ್ಲ ವೇತನಗಳನ್ನು ಆಧಾರ್ ಆಧರಿತ ಪಾವತಿ ವ್ಯವಸ್ಥೆ (ಎಬಿಪಿಎಸ್)ಯ ಮೂಲಕವೇ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಕಾರ್ಮಿಕರ ಆಧಾರ್ ವಿವರಗಳನ್ನು ಅವರ ಉದ್ಯೋಗ ಕಾರ್ಡ್‌ಗಳ ಜೊತೆಗೆ ಜೋಡಣೆಗೊಳಿಸುವುದು ಅಗತ್ಯವಾಗಿದೆ. ಎಬಿಪಿಎಸ್‌ನ್ನು ಕಡ್ಡಾಯಗೊಳಿಸಿದ 5ನೇ ಗಡುವು 2023ರ ಡಿ.31ರಂದು ಅಂತ್ಯಗೊಂಡಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...