Homeಮುಖಪುಟನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ 'ಹೊಸ ವರ್ಷದ ಕ್ರೂರ ಉಡುಗೊರೆ' ಎಂದ...

ನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ ‘ಹೊಸ ವರ್ಷದ ಕ್ರೂರ ಉಡುಗೊರೆ’ ಎಂದ ಕಾಂಗ್ರೆಸ್‌

- Advertisement -
- Advertisement -

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ)ಯೋಜನೆಯಡಿಲ್ಲಿನ ಕಾರ್ಮಿಕರ ಪಾವತಿಯನ್ನು ಇನ್ನು ಮುಂದೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯ( (ABPS)) ಮೂಲಕವೇ ಮಾಡಲು ನಿರ್ಧರಿಸಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರ ‘ಕ್ರೂರ ಹೊಸ ವರ್ಷದ ಉಡುಗೊರೆ’ ಎಂದು ಕಾಂಗ್ರೆಸ್ ಕರೆದಿದ್ದು, ಇದು ಕೋಟಿಗಟ್ಟಲೆ ಬಡವರನ್ನು ಮತ್ತು ಅಂಚಿನಲ್ಲಿರುವ ನಾಗರಿಕರನ್ನು ಮೂಲಭೂತ ಆದಾಯವನ್ನು ಗಳಿಸುವುದರಿಂದ ಹೊರಗಿಡುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು ಆಧಾರ್-ಆಧಾರಿತ ಪಾವತಿ ವ್ಯವಸ್ಥೆಯನ್ನು (ABPS) ಜಾರಿಗೊಳಿಸಲು ಡಿ.31ರ ಗಡುವನ್ನು ವಿಸ್ತರಿಸಿಲ್ಲ. ಕಾರ್ಮಿಕರ ಆಧಾರ್ ವಿವರಗಳನ್ನು ಉದ್ಯೋಗ ಕಾರ್ಡ್‌ಗಳಿಗೆ ಜೋಡನೆ ಮಾಡಬೇಕಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜೈರಾಮ್ ರಮೇಶ್, ಮೋದಿ ಸರ್ಕಾರವು ತಂತ್ರಜ್ಞಾನದ ವಿನಾಶಕಾರಿ ಪ್ರಯೋಗಗಳನ್ನು ಮುಂದುವರೆಸುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಾರ್ವಜನಿಕ ಕೆಲಸಗಳ ಮೂಲಕ ಮೂಲ ಆದಾಯವನ್ನು ಗಳಿಸುವುದರಿಂದ ಕೋಟಿಗಟ್ಟಲೆ ಬಡ ಮತ್ತು ಅಂಚಿನಲ್ಲಿರುವ ಭಾರತೀಯರನ್ನು ಹೊರಗಿಡುವ ‘ಪ್ರಧಾನ ಮಂತ್ರಿಯ ಕ್ರೂರ ಹೊಸ ವರ್ಷದ ಉಡುಗೊರೆ’ಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2023ರ ಆ.30ರಿಂದ ತನ್ನ ಬೇಡಿಕೆಗಳನ್ನು ಪುನರುಚ್ಚರಿಸುತ್ತದೆ. ಮೋದಿ ಸರ್ಕಾರವು ತಂತ್ರಜ್ಞಾನವನ್ನು ಶಸ್ತ್ರಾಸ್ತ್ರಗೊಳಿಸುವುದನ್ನು ನಿಲ್ಲಿಸಬೇಕು. ವಿಶೇಷವಾಗಿ ಆಧಾರ್ ಹೆಸರಿನಲ್ಲಿ ದುರ್ಬಲ ಭಾರತೀಯರಿಗೆ ಸಾಮಾಜಿಕ ಕಲ್ಯಾಣ ಪ್ರಯೋಜನಗಳನ್ನು ನಿರಾಕರಿಸುವುದನ್ನು ನಿಲ್ಲಿಸಬೇಕು, ವಿಳಂಬಿತ ವೇತನ ಪಾವತಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

25.69 ಕೋಟಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿದ್ದು, ಅದರಲ್ಲಿ 14.33 ಕೋಟಿ ಸಕ್ರಿಯ ಕೆಲಸಗಾರರೆಂದು ಪರಿಗಣಿಸಲಾಗಿದೆ ಮತ್ತು ಇದರಲ್ಲಿ ಕ್ರಮವಾಗಿ ಶೇ.34.8 (8.9 ಕೋಟಿ) ಮತ್ತು ಶೇ.12.7 (1.8 ಕೋಟಿ) ಎಬಿಪಿಎಸ್‌ಗೆ ಅನರ್ಹರಾಗಿದ್ದಾರೆ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರು ಎಬಿಪಿಎಸ್‌ಗೆ ಅರ್ಹರಲ್ಲ ಎಂಬ ಕಾರಣಕ್ಕೆ ಯಾವುದೇ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗುವುದಿಲ್ಲ ಎಂಬ 2023ರ ಸಚಿವಾಲಯದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಜೈರಾಮ್ ರಮೇಶ್,  ಏಪ್ರಿಲ್ 2022ರಿಂದ 7.6 ಕೋಟಿ ಕಾರ್ಮಿಕರ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ 1.9 ಕೋಟಿ ಕಾರ್ಡ್‌ಗಳನ್ನು ಅಳಿಸಲಾಗಿದೆ ಎಂದು ಹೇಳಿದ್ದಾರೆ.

ಆಧಾರ್ ದೃಢೀಕರಣ ಮತ್ತು ಎಬಿಪಿಎಸ್‌ನ್ನು ಜಾರಿಗೊಳಿಸಲು ಮೋದಿ ಸರ್ಕಾರದ ಆತುರವು ಗಮನಾರ್ಹ ಸಂಖ್ಯೆಯ ಕಾರ್ಡ್‌ಗಳ ಅಳಿಸುವಿಕೆಗೆ ಕಾರಣವಾಗಿದೆ ಎಂದು ಪರಿಶೀಲನೆಯು ತೋರಿಸಿದೆ. ವಿವಿಧ ಪಾಲುದಾರರು ವೇತನ ಪಾವತಿಗೆ ಎಬಿಪಿಎಸ್‌ನ್ನು ಅತ್ಯುತ್ತಮ ಮಾರ್ಗವೆಂದು ಕಂಡುಕೊಂಡಿದ್ದಾರೆ ಎಂಬ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಮೇಶ್, ಈ ಪಾಲುದಾರರು ಯಾರು ಮತ್ತು ಯಾವಾಗ ಈ ಸಮಾಲೋಚನೆಗಳನ್ನು ನಡೆಸಲಾಯಿತು ಎಂಬುದನ್ನು ಸ್ಪಷ್ಟಪಡಿಸಲು ಸಚಿವಾಲಯವನ್ನು ಕೇಳಿದರು.  ಎಬಿಪಿಎಸ್‌ನಿಂದ ಪಾವತಿ ದಕ್ಷತೆಯ ಹೆಚ್ಚಳದ ಕುರಿತ ಸಚಿವಾಲಯದ ಸಮರ್ಥನೆಯು ಆಧಾರರಹಿತವಾಗಿ ಉಳಿದಿವೆ ಎಂದು ಹೇಳಿದ್ದಾರೆ.

ಹೊಸ ವರ್ಷದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯೋಜನೆಯಡಿಲ್ಲಿನ ಎಲ್ಲ ವೇತನಗಳನ್ನು ಆಧಾರ್ ಆಧರಿತ ಪಾವತಿ ವ್ಯವಸ್ಥೆ (ಎಬಿಪಿಎಸ್)ಯ ಮೂಲಕವೇ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಕಾರ್ಮಿಕರ ಆಧಾರ್ ವಿವರಗಳನ್ನು ಅವರ ಉದ್ಯೋಗ ಕಾರ್ಡ್‌ಗಳ ಜೊತೆಗೆ ಜೋಡಣೆಗೊಳಿಸುವುದು ಅಗತ್ಯವಾಗಿದೆ. ಎಬಿಪಿಎಸ್‌ನ್ನು ಕಡ್ಡಾಯಗೊಳಿಸಿದ 5ನೇ ಗಡುವು 2023ರ ಡಿ.31ರಂದು ಅಂತ್ಯಗೊಂಡಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...