Homeಮುಖಪುಟಕೋಮುವಾದಿ ಸಂಹಿತೆ ಎಂಬ ಹೇಳಿಕೆ ಅಂಬೇಡ್ಕರ್‌ಗೆ ಮಾಡಿದ ಅವಮಾನ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...

ಕೋಮುವಾದಿ ಸಂಹಿತೆ ಎಂಬ ಹೇಳಿಕೆ ಅಂಬೇಡ್ಕರ್‌ಗೆ ಮಾಡಿದ ಅವಮಾನ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

- Advertisement -
- Advertisement -

“ದೇಶದಲ್ಲಿ ‘ಜಾತ್ಯತೀತ ನಾಗರಿಕ ಸಂಹಿತೆ’ ಜಾರಿಗೊಳಿಸುವ ಅಗತ್ಯವಿದೆ. ಈಗ ಇರುವ ನಾಗರಿಕ ಸಂಹಿತೆ ‘ಕೋಮುವಾದಿ ಮತ್ತು ತಾರತಮ್ಯ’ ಸ್ವರೂಪದಿಂದ ಕೂಡಿದೆ” ಎಂದು ಪ್ರಧಾನಿ ನರೇಂದ್ರ ಗುರುವಾರ ತನ್ನ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ‘ಸಮಾನ ನಾಗರಿಕ ಸಂಹಿತೆ’ ಜಾರಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿಯ ಈ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಸಂವಿಧಾನ ಶಿಲ್ಪಿ ಡಾ.ಬಿಆರ್‌ ಅಂಬೇಡ್ಕರ್ ಅವರಿಗೆ ಮಾಡಿರುವ ದೊಡ್ಡ ಅವಮಾನ ಎಂದಿದೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ “ಜೈವಿಕವಲ್ಲದ ಪ್ರಧಾನಿಯ ಇತಿಹಾಸವನ್ನು ತಿರುಚುವ, ಕುಚೇಷ್ಟೆ ಮಾಡುವ ಹಾಗೂ ಕಳಂಕ ತರುವ ಸಾಮರ್ಥ್ಯಕ್ಕೆ ಗಡಿ ಎಂಬುವುದೇ ಇಲ್ಲ. ಅದು ಇಂದು ಕೆಂಪು ಕೋಟೆಯ ಮೇಲಿಂದ ಸಂಪೂರ್ಣವಾಗಿ ಅನಾವರಣಗೊಂಡಿದೆ. ನಾವು ಇಲ್ಲಿಯವರೆಗೆ ಕೋಮುವಾದಿ ನಾಗರಿಕ ಸಂಹಿತೆಯನ್ನು ಹೊಂದಿದ್ದೆವು ಎಂಬುವುದು ಅಂಬೇಡ್ಕರ್ ಅವರಿಗೆ ಮಾಡುವ ದೊಡ್ಡ ಅವಮಾನವಾಗಿದೆ. 1950ರ ಮಧ್ಯಭಾಗದಲ್ಲಿ ನೈಜವಾಗಿ ಹೊರ ಹೊಮ್ಮಿದ್ದ ಹಿಂದೂ ವೈಯಕ್ತಿಕ ಕಾನೂನುಗಳಲ್ಲಿ ಸುಧಾರಣೆ ತಂದ ಮಹಾನ್ ದಾರ್ಶನಿಕರವರು. ಈ ಸುಧಾರಣೆಗಳನ್ನು ಆರೆಸ್ಸೆಸ್ ಹಾಗೂ ಜನಸಂಘ ತೀವ್ರವಾಗಿ ವಿರೋಧಿಸಿದ್ದವು” ಎಂದು ಹೇಳಿದ್ದಾರೆ.

ಜೈರಮೇಶ್ ಆಗಸ್ಟ್ 31, 2018 ರ ಕೌಟುಂಬಿಕ ಕಾನೂನಿನ ಸುಧಾರಣೆಯ ಕುರಿತಾದ 21ನೇ ಕಾನೂನು ಆಯೋಗದ ಸಮಾಲೋಚನಾ ಪತ್ರವನ್ನು ಉಲ್ಲೇಖಿಸಿದ್ದು, ಆಯೋಗವು ಪೂರ್ಣಪ್ರಮಾಣದ ಸಮಾನ ನಾಗರಿಕ ಸಂಹಿತೆಯ ಜಾರಿಯ ವಿರುದ್ಧ ವಾದ ಮಂಡಿಸಿದೆ ಎಂಬುವುದರತ್ತ ಬೊಟ್ಟು ಮಾಡಿದ್ದಾರೆ.

“ಭಾರತೀಯ ಸಂಸ್ಕೃತಿಯ ವೈವಿಧ್ಯತೆಯನ್ನು ಆಚರಿಸಬಹುದು ಮತ್ತು ಆಚರಿಸಬೇಕು. ನಿರ್ದಿಷ್ಟ ಗುಂಪುಗಳು ಅಥವಾ ಸಮಾಜದ ದುರ್ಬಲ ವರ್ಗಗಳು ಈ ಪ್ರಕ್ರಿಯೆಯಲ್ಲಿ ಅನನುಕೂಲತೆಯನ್ನು ಹೊಂದಿರಬಾರದು. ಈ ಸಂಘರ್ಷದ ಪರಿಹಾರವು ಎಲ್ಲಾ ಭಿನ್ನಾಭಿಪ್ರಾಯಗಳ ನಿರ್ಮೂಲನೆ ಎಂದಲ್ಲ. ಆದ್ದರಿಂದ ಈ ಹಂತದಲ್ಲಿ ಅಗತ್ಯವೂ ಅಲ್ಲದ ಮತ್ತು ಅಪೇಕ್ಷಣೀಯವೂ ಅಲ್ಲದ ಏಕರೂಪದ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಬದಲು ತಾರತಮ್ಯದಿಂದ ಕೂಡಿರುವ ಕಾನೂನುಗಳನ್ನು ಸರಿಪಡಿಸಬೇಕು. ಹೆಚ್ಚಿನ ದೇಶಗಳು ಭಿನ್ನಾಭಿಪ್ರಾಯಗಳನ್ನು ಗುರುತಿಸುವತ್ತ ಸಾಗುತ್ತಿವೆ. ವಿವಿದತೆಯು ತಾರತಮ್ಯವನ್ನು ಸೂಚಿಸುವುದಿಲ್ಲ, ಅದು ದೃಢವಾದ ಪ್ರಜಾಪ್ರಭುತ್ವವನ್ನು ಸೂಚಿಸುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ 1989 ರಿಂದ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ. ಈ ಬಾರಿ ಅದನ್ನೂ ಜಾರಿಗೊಳಿಸಲು ಬಿಜೆಪಿ ಮುಂದಾಗಿದೆ. ಆದರೆ, ಕೇಂದ್ರದಲ್ಲಿ ಬಿಜೆಪಿ ಬಹುಮತದ ಕೊರತೆಯಿದ್ದು, ಟಿಡಿಪಿ ಮತ್ತು ಜೆಡಿಯು ಬಲದಿಂದ ಎನ್‌ಡಿಎ ಸರ್ಕಾರ ಕಟ್ಟಿದೆ. ಹಾಗಾಗಿ, ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲು ಸಾಧ್ಯವಾಗುತದಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಸಿಎಎ ವಿರೋಧಿ ಪ್ರತಿಭಟನೆಗಳ ಕೇಂದ್ರಬಿಂದು ಅಸ್ಸಾಂನಲ್ಲಿ ಪೌರತ್ವ ಪಡೆದ ಮೊದಲನೇ ಅರ್ಜಿದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...