Homeಮುಖಪುಟಕೋಮುವಾದಿ ಸಂಹಿತೆ ಎಂಬ ಹೇಳಿಕೆ ಅಂಬೇಡ್ಕರ್‌ಗೆ ಮಾಡಿದ ಅವಮಾನ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...

ಕೋಮುವಾದಿ ಸಂಹಿತೆ ಎಂಬ ಹೇಳಿಕೆ ಅಂಬೇಡ್ಕರ್‌ಗೆ ಮಾಡಿದ ಅವಮಾನ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

- Advertisement -
- Advertisement -

“ದೇಶದಲ್ಲಿ ‘ಜಾತ್ಯತೀತ ನಾಗರಿಕ ಸಂಹಿತೆ’ ಜಾರಿಗೊಳಿಸುವ ಅಗತ್ಯವಿದೆ. ಈಗ ಇರುವ ನಾಗರಿಕ ಸಂಹಿತೆ ‘ಕೋಮುವಾದಿ ಮತ್ತು ತಾರತಮ್ಯ’ ಸ್ವರೂಪದಿಂದ ಕೂಡಿದೆ” ಎಂದು ಪ್ರಧಾನಿ ನರೇಂದ್ರ ಗುರುವಾರ ತನ್ನ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ‘ಸಮಾನ ನಾಗರಿಕ ಸಂಹಿತೆ’ ಜಾರಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿಯ ಈ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಸಂವಿಧಾನ ಶಿಲ್ಪಿ ಡಾ.ಬಿಆರ್‌ ಅಂಬೇಡ್ಕರ್ ಅವರಿಗೆ ಮಾಡಿರುವ ದೊಡ್ಡ ಅವಮಾನ ಎಂದಿದೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ “ಜೈವಿಕವಲ್ಲದ ಪ್ರಧಾನಿಯ ಇತಿಹಾಸವನ್ನು ತಿರುಚುವ, ಕುಚೇಷ್ಟೆ ಮಾಡುವ ಹಾಗೂ ಕಳಂಕ ತರುವ ಸಾಮರ್ಥ್ಯಕ್ಕೆ ಗಡಿ ಎಂಬುವುದೇ ಇಲ್ಲ. ಅದು ಇಂದು ಕೆಂಪು ಕೋಟೆಯ ಮೇಲಿಂದ ಸಂಪೂರ್ಣವಾಗಿ ಅನಾವರಣಗೊಂಡಿದೆ. ನಾವು ಇಲ್ಲಿಯವರೆಗೆ ಕೋಮುವಾದಿ ನಾಗರಿಕ ಸಂಹಿತೆಯನ್ನು ಹೊಂದಿದ್ದೆವು ಎಂಬುವುದು ಅಂಬೇಡ್ಕರ್ ಅವರಿಗೆ ಮಾಡುವ ದೊಡ್ಡ ಅವಮಾನವಾಗಿದೆ. 1950ರ ಮಧ್ಯಭಾಗದಲ್ಲಿ ನೈಜವಾಗಿ ಹೊರ ಹೊಮ್ಮಿದ್ದ ಹಿಂದೂ ವೈಯಕ್ತಿಕ ಕಾನೂನುಗಳಲ್ಲಿ ಸುಧಾರಣೆ ತಂದ ಮಹಾನ್ ದಾರ್ಶನಿಕರವರು. ಈ ಸುಧಾರಣೆಗಳನ್ನು ಆರೆಸ್ಸೆಸ್ ಹಾಗೂ ಜನಸಂಘ ತೀವ್ರವಾಗಿ ವಿರೋಧಿಸಿದ್ದವು” ಎಂದು ಹೇಳಿದ್ದಾರೆ.

ಜೈರಮೇಶ್ ಆಗಸ್ಟ್ 31, 2018 ರ ಕೌಟುಂಬಿಕ ಕಾನೂನಿನ ಸುಧಾರಣೆಯ ಕುರಿತಾದ 21ನೇ ಕಾನೂನು ಆಯೋಗದ ಸಮಾಲೋಚನಾ ಪತ್ರವನ್ನು ಉಲ್ಲೇಖಿಸಿದ್ದು, ಆಯೋಗವು ಪೂರ್ಣಪ್ರಮಾಣದ ಸಮಾನ ನಾಗರಿಕ ಸಂಹಿತೆಯ ಜಾರಿಯ ವಿರುದ್ಧ ವಾದ ಮಂಡಿಸಿದೆ ಎಂಬುವುದರತ್ತ ಬೊಟ್ಟು ಮಾಡಿದ್ದಾರೆ.

“ಭಾರತೀಯ ಸಂಸ್ಕೃತಿಯ ವೈವಿಧ್ಯತೆಯನ್ನು ಆಚರಿಸಬಹುದು ಮತ್ತು ಆಚರಿಸಬೇಕು. ನಿರ್ದಿಷ್ಟ ಗುಂಪುಗಳು ಅಥವಾ ಸಮಾಜದ ದುರ್ಬಲ ವರ್ಗಗಳು ಈ ಪ್ರಕ್ರಿಯೆಯಲ್ಲಿ ಅನನುಕೂಲತೆಯನ್ನು ಹೊಂದಿರಬಾರದು. ಈ ಸಂಘರ್ಷದ ಪರಿಹಾರವು ಎಲ್ಲಾ ಭಿನ್ನಾಭಿಪ್ರಾಯಗಳ ನಿರ್ಮೂಲನೆ ಎಂದಲ್ಲ. ಆದ್ದರಿಂದ ಈ ಹಂತದಲ್ಲಿ ಅಗತ್ಯವೂ ಅಲ್ಲದ ಮತ್ತು ಅಪೇಕ್ಷಣೀಯವೂ ಅಲ್ಲದ ಏಕರೂಪದ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಬದಲು ತಾರತಮ್ಯದಿಂದ ಕೂಡಿರುವ ಕಾನೂನುಗಳನ್ನು ಸರಿಪಡಿಸಬೇಕು. ಹೆಚ್ಚಿನ ದೇಶಗಳು ಭಿನ್ನಾಭಿಪ್ರಾಯಗಳನ್ನು ಗುರುತಿಸುವತ್ತ ಸಾಗುತ್ತಿವೆ. ವಿವಿದತೆಯು ತಾರತಮ್ಯವನ್ನು ಸೂಚಿಸುವುದಿಲ್ಲ, ಅದು ದೃಢವಾದ ಪ್ರಜಾಪ್ರಭುತ್ವವನ್ನು ಸೂಚಿಸುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ 1989 ರಿಂದ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ. ಈ ಬಾರಿ ಅದನ್ನೂ ಜಾರಿಗೊಳಿಸಲು ಬಿಜೆಪಿ ಮುಂದಾಗಿದೆ. ಆದರೆ, ಕೇಂದ್ರದಲ್ಲಿ ಬಿಜೆಪಿ ಬಹುಮತದ ಕೊರತೆಯಿದ್ದು, ಟಿಡಿಪಿ ಮತ್ತು ಜೆಡಿಯು ಬಲದಿಂದ ಎನ್‌ಡಿಎ ಸರ್ಕಾರ ಕಟ್ಟಿದೆ. ಹಾಗಾಗಿ, ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲು ಸಾಧ್ಯವಾಗುತದಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಸಿಎಎ ವಿರೋಧಿ ಪ್ರತಿಭಟನೆಗಳ ಕೇಂದ್ರಬಿಂದು ಅಸ್ಸಾಂನಲ್ಲಿ ಪೌರತ್ವ ಪಡೆದ ಮೊದಲನೇ ಅರ್ಜಿದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...