Homeಮುಖಪುಟ'ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ' : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

- Advertisement -
- Advertisement -

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ‘ನಿರ್ಲಜ್ಜ ಸಮರ್ಥನೆ’ ಎಂದಿದೆ.

ಇಸ್ರೇಲ್ ರಾಷ್ಟ್ರದ ರಚನೆಯ ಬಗ್ಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಹೊಂದಿದ್ದ ಅಭಿಪ್ರಾಯಗಳನ್ನು ಉಲ್ಲೇಖಿಸಿದ ಕಾಂಗ್ರೆಸ್, ಈ ಸಂಬಂಧ ಭೌತವಿಜ್ಞಾನಿ ಆಲ್ಬರ್ಟ್ ಐನ್‌ಸ್ಟೈನ್ ಅವರೊಂದಿಗೆ ನೆಹರೂ ನಡೆಸಿದ್ದ ಪತ್ರವ್ಯವಹಾರವನ್ನೂ ಕೂಡ ನೆನಪಿಸಿದೆ.

ಬುಧವಾರ (ಫೆ.25) ನೆಸೆಟ್‌ ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಗಾಝಾ ಶಾಂತಿ ಉಪಕ್ರಮವು ಈ ಪ್ರದೇಶದಲ್ಲಿ ನ್ಯಾಯಯುತ ಮತ್ತು ಸುಸ್ಥಿರ ಶಾಂತಿಯತ್ತ ಸಾಗುವ ಒಂದು ಹಾದಿಯಾಗಿದೆ ಎಂದು ಹೇಳಿದ್ದಾರೆ. ಇಸ್ರೇಲ್‌ನೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಮೋದಿ, ಭಯೋತ್ಪಾದನೆಯ ವಿರುದ್ಧದ ಭಾರತದ ದೃಢ ನಿಲುವನ್ನು ಒತ್ತಿ ಹೇಳಿದ್ದಾರೆ.

“2023ರ ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರಿಗಾಗಿ ಮತ್ತು ಜೀವನವನ್ನೇ ಕಳೆದುಕೊಂಡು ಕಂಗಾಲಾದ ಪ್ರತಿ ಕುಟುಂಬಕ್ಕಾಗಿ ಭಾರತದ ಜನರ ಪರವಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ತಿಳಿಸಿದ್ದಾರೆ.

“ನಾವು ನಿಮ್ಮ ನೋವನ್ನು ಅನುಭವಿಸುತ್ತಿದ್ದೇವೆ. ನಾವು ನಿಮ್ಮ ದುಃಖದಲ್ಲಿ ಭಾಗಿಗಳಾಗಿದ್ದೇವೆ. ಭಾರತವು ಇಸ್ರೇಲ್ ಜೊತೆಗೆ ಈ ಕ್ಷಣದಲ್ಲಿ ಮತ್ತು ಮುಂದೆಯೂ ಪೂರ್ಣ ದೃಢತೆಯೊಂದಿಗೆ ಮತ್ತು ನಂಬಿಕೆಯೊಂದಿಗೆ ನಿಲ್ಲುತ್ತದೆ. ಯಾವುದೇ ಕಾರಣವೂ ನಾಗರಿಕರ ಹತ್ಯೆಯನ್ನು ಸಮರ್ಥಿಸಲು ಸಾಧ್ಯವಿಲ್ಲ. ಯಾವುದೂ ಭಯೋತ್ಪಾದನೆಯನ್ನು ಸಮರ್ಥಿಸಲಾರದು” ಎಂದು ಹೇಳಿದ್ದಾರೆ.

ಮೋದಿಯವರ ಭಾಷಣಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ ವಿಭಾಗದ ಉಸ್ತುವಾರಿ) ಜೈರಾಮ್ ರಮೇಶ್ ಅವರು ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ.

“ನಿನ್ನೆ ನೆಸೆಟ್‌ನಲ್ಲಿ ಮಾಡಿದ ಭಾಷಣವು ತಮ್ಮ ಆತಿಥೇಯರ ನಿರ್ಲಜ್ಜ ಸಮರ್ಥನೆಯಾಗಿತ್ತು. ಅದರಲ್ಲಿ ಪ್ರಧಾನಿ ಮೋದಿ ಅವರು ತಾವು ಜನಿಸಿದ ದಿನದಂದೇ ಭಾರತವು ಇಸ್ರೇಲ್ ಎಂಬ ಹೊಸ ರಾಷ್ಟ್ರವನ್ನು ಅಂಗೀಕರಿಸಿತು ಎಂಬ ವಿಷಯದ ಕಡೆಗೆ ಗಮನ ಸೆಳೆದಿದ್ದಾರೆ” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಜೈರಾಮ್ ರಮೇಶ್ ಅವರು, ಇಸ್ರೇಲ್ ರಚನೆಯ ವಿಷಯದ ಕುರಿತು ಐನ್‌ಸ್ಟೈನ್‌ಗೆ ನೆಹರೂ ನೀಡಿದ್ದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ್ದಾರೆ. ನವೆಂಬರ್ 5,1949 ರಂದು ಪ್ರಿನ್ಸ್ಟನ್‌ನಲ್ಲಿರುವ ಐನ್‌ಸ್ಟೈನ್ ಅವರ ಮನೆಯಲ್ಲಿ ಇಬ್ಬರು ಪರಸ್ಪರ ಭೇಟಿಯಾಗಿದ್ದರು ಎಂದು ಗಮನ ಸೆಳೆದಿದ್ದಾರೆ. ನವೆಂಬರ್ 1952ರಲ್ಲಿ ಇಸ್ರೇಲ್‌ನ ಅಧ್ಯಕ್ಷರಾಗುವ ಪ್ರಸ್ತಾಪವನ್ನು ಐನ್‌ಸ್ಟೈನ್ ನಿರಾಕರಿಸಿದ್ದನ್ನು ಮತ್ತು ಏಪ್ರಿಲ್ 1955ರಲ್ಲಿ ತಮ್ಮ ನಿಧನಕ್ಕೆ ಸ್ವಲ್ಪ ಮೊದಲು ಪರಮಾಣು ಶಸ್ತ್ರಾಸ್ತ್ರಗಳ ಕುರಿತು ನೆಹರೂ ಅವರೊಂದಿಗೆ ಪತ್ರವ್ಯವಹಾರ ನಡೆಸಿದ್ದನ್ನು ಸಹ ಜೈರಾಮ್ ರಮೇಶ್ ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...