Homeಮುಖಪುಟಮೋದಿಯನ್ನು ಮಹಾತ್ಮಾ ಗಾಂಧಿ ಜೊತೆ ಹೋಲಿಸಿದ ಉಪರಾಷ್ಟ್ರಪತಿ: ಪ್ರತಿಪಕ್ಷಗಳಿಂದ ಟೀಕೆ

ಮೋದಿಯನ್ನು ಮಹಾತ್ಮಾ ಗಾಂಧಿ ಜೊತೆ ಹೋಲಿಸಿದ ಉಪರಾಷ್ಟ್ರಪತಿ: ಪ್ರತಿಪಕ್ಷಗಳಿಂದ ಟೀಕೆ

- Advertisement -
- Advertisement -

ಮಹಾತ್ಮ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೋಲಿಕೆ ಮಾಡಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿಯನ್ನು ನಡೆಸಿದೆ.

ಜೈನ ಧರ್ಮಗುರು ಹಾಗೂ ತತ್ವಜ್ಞಾನಿ ಶ್ರೀಮದ್ ರಾಜಚಂದ್ರಜೀ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಧನಕರ್, ನಾನು ಒಂದು ವಿಷಯವನ್ನು ಹೇಳಲು ಬಯಸುತ್ತೇನೆ, ಕಳೆದ ಶತಮಾನದ ‘ಮಹಾಪುರುಷ’ ಮಹಾತ್ಮಾ ಗಾಂಧಿ, ನರೇಂದ್ರ ಮೋದಿ ಈ ಶತಮಾನದ ಯುಗಪುರುಷ ಎಂದು ಹೇಳಿದ್ದರು. ಮಹಾತ್ಮ ಗಾಂಧಿಯವರು ಸತ್ಯ ಮತ್ತು ಅಹಿಂಸೆಯಿಂದ ನಮ್ಮನ್ನು ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತಗೊಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಪ್ರಗತಿಯ ಪಥದಲ್ಲಿ ಸಾಗಿಸುತ್ತಿದ್ದಾರೆ. ಅದನ್ನು ನಾವು ಯಾವಾಗಲೂ ನೋಡಲು ಬಯಸುತ್ತೇವೆ ಎಂದು ಅವರು ಹೇಳಿದ್ದರು.

ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಈ ಬಗ್ಗೆ ಉಪರಾಷ್ಟ್ರಪತಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಷ್ಟ್ರಪತಿಗಳ ಹೇಳಿಕೆ ನಾಚಿಕೆಗೇಡಿನದ್ದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಗೋವಾ ಉಸ್ತುವಾರಿ ಟ್ಯಾಗೋರ್ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನೀವು ಮೋದಿಯನ್ನು ಮಹಾತ್ಮರೊಂದಿಗೆ ಹೋಲಿಸಿದರೆ ಅದು ನಾಚಿಕೆಗೇಡಿನ ಸಂಗತಿಯಾಗಿದೆ. ಭಟ್ಟಂಗಿತನಕ್ಕೆ ಮಿತಿಯಿದೆ. ನೀವು ಈಗ ಆ ಮಿತಿಯನ್ನು ದಾಟಿದ್ದೀರಿ ಎಂದು ಹೇಳಿದ್ದಾರೆ.

ಜಗದೀಪ್‌ ಧನಕರ್‌ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಶಿವಸೇನಾ (ಉದ್ದವ್‌ ಬಣದ) ನಾಯಕ ಸಂಜಯ್‌ ರಾವತ್‌, ಇದನ್ನು ಇತಿಹಾಸ ಹಾಗೂ ಜನ ನಿರ್ಧರಿಸುತ್ತಾರೆ. ಮಹಾತ್ಮ ಗಾಂಧಿ ಅವರನ್ನು ಜಗತ್ತು ಪೂಜಿಸುತ್ತದೆ. ಯಾರು ಪುರುಷ, ಯುಗಪುರುಷ ಮತ್ತು ಮಹಾಪುರುಷ ಎಂದು ಇತಿಹಾಸ ಹಾಗೂ ಜನರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಬಿಎಸ್ಪಿ ಸಂಸದ ಡ್ಯಾನಿಶ್‌ ಅಲಿ, ಧನಕರ್‌ ಅವರ ಹೇಳಿಕೆಗೆ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಶತಮಾನದ ಮಾಹನ್‌ ವ್ಯಕ್ತಿ ಮಹಾತ್ಮ ಗಾಂಧಿ, ಈ ಶತಮಾನದ ಮಹಾನ್‌ ವ್ಯಕ್ತಿ ನರೇಂದ್ರ ಮೋದಿ. ಪ್ರಧಾನಿಯವರ ಪಕ್ಷದ ಸದಸ್ಯರು ನಿರ್ದಿಷ್ಟ ಸಮುದಾಯದ ವಿರುದ್ಧ ನಿಂದನೀಯ ಪದಗಳನ್ನು ಬಳಸಲು ಅವಕಾಶ ನೀಡುವ ಮೂಲಕ ಸಂಸತ್ತಿನಲ್ಲಿ ಯಾವ ಯುಗ ಪ್ರಾರಂಭಿಸಲಾಗಿದೆ? ಎಂದು ನಾನು ಉಪರಾಷ್ಟ್ರಪತಿಯವರಲ್ಲಿ ಕೇಳ ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪಾಕ್‌ ಕಲಾವಿದರನ್ನು ನಿಷೇಧಿಸುವಂತೆ ಅರ್ಜಿ: ಸಂಕುಚಿತ ಮನೋಭಾವ ಬೇಡ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...