Homeಮುಖಪುಟಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪೊಲೀಸರು “ಕಿರುಕುಳ” ಮತ್ತು “ಬೆದರಿಕೆ” ಹಾಕುತ್ತಿದ್ದಾರೆ  ಎಂದು ಕಾಂಗ್ರೆಸ್ ಆರೋಪಿಸಿದೆ.

ಅಮಿತ್‌ ಶಾ ಅವರ ತಿರುಚಿದ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದಲ್ಲಿ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ತಂಡದ ರಾಷ್ಟ್ರೀಯ ಸಂಯೋಜಕರನ್ನು ದೆಹಲಿ ಪೊಲೀಸ್ ವಿಶೇಷ ಕೋಶ ಬಂಧಿಸಿದ ಬೆನ್ನಲ್ಲಿ ಕಾಂಗ್ರೆಸ್‌ “ಕಿರುಕುಳ” ಮತ್ತು “ಬೆದರಿಕೆ” ಆರೋಪವನ್ನು ಮಾಡಿದೆ.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ, ನರೇಂದ್ರ ಮೋದಿ ಮತ್ತು ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲಲಿದೆ. ಬಿಜೆಪಿಯ ಷಡ್ಯಂತ್ರವನ್ನು ಸಾರ್ವಜನಿಕರು ಅರ್ಥಮಾಡಿಕೊಂಡಿರುವುದರಿಂದ, ಬಿಜೆಪಿ ಗೆದ್ದರೆ ಮೀಸಲಾತಿ ಮತ್ತು ಸಂವಿಧಾನವನ್ನು ರದ್ದುಪಡಿಸುತ್ತದೆ ಎಂದು ಜನರು ತಿಳಿದುಕೊಂಡಿದ್ದಾರೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಮತದಾನಕ್ಕೆ ಮೊದಲೇ ಸೋಲನ್ನು ಮನಗಂಡಿದ್ದಾರೆ. ಹೀಗಾಗಿ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ತಂಡದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳನ್ನು ಬಂಧಿಸಲಾಗತ್ತಿದೆ. ಅವರಿಂದ ಉಪಕರಣಗಳನ್ನು ಜಪ್ತಿ ಮಾಡಲಾಗುತ್ತಿದೆ. ಇದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಯ ಮತ್ತು ಹೇಡಿತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಆದೇಶದ ಮೇರೆಗೆ ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗಳನ್ನು ಬೆದರಿಸಲಾಗುತ್ತಿದೆ. ಇವರು ಗಾಂಧಿ, ನೆಹರು, ಪಟೇಲ್, ಬೋಸ್ ಅವರ ಸಿದ್ಧಾಂತವನ್ನು ಆರಿಸಿಕೊಂಡು ಕಾಂಗ್ರೆಸ್ ಜೊತೆ ನಿಂತವರಾಗಿದ್ದಾರೆ. ಸತ್ಯ ಮತ್ತು ನ್ಯಾಯವನ್ನು ಆಯ್ಕೆ ಮಾಡಿದ ಮತ್ತು ನಿಮ್ಮ ಸುಳ್ಳನ್ನು  ತಿರಸ್ಕರಿಸಿದವರನ್ನು ಬಿಜೆಪಿ ಹೆದರಿಸುತ್ತಿದೆ ಎಂದು ಶ್ರೀನಾಟೆ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸೋಲಿನ ನಿರೀಕ್ಷೆಯಿಂದಾಗಿ ಬಿಜೆಪಿ ನಾಯಕರು ಭೀತಿಯಲ್ಲಿದ್ದಾರೆ. ನಿಮಗೆ ಧೈರ್ಯವಿದ್ದರೆ ರಾಜಕೀಯ ಹೋರಾಟ ನಡೆಸಿ, ವಿಶ್ವದ ಅತಿದೊಡ್ಡ ನಕಲಿ ಸುದ್ದಿ ಕಾರ್ಖಾನೆಯನ್ನು ನಡೆಸುತ್ತಿರುವ ಪ್ರಧಾನಿ ಮತ್ತು ಈ ನಕಲಿ ಸುದ್ದಿ ಕಾರ್ಖಾನೆಯ ಬಗ್ಗೆ ಹೆಮ್ಮೆಪಡುವ ಗೃಹ ಸಚಿವರು ಭಯಭೀತರಾಗಿದ್ದಾರೆ. ನೀವು ತುಂಬಾ ಭಯಗೊಂಡಿದ್ದೀರಿ, ನೀವು ನಮ್ಮ ಯುವಕರನ್ನು ಹಿಂಬಾಲಿಸಲು ಪ್ರಾರಂಭಿಸಿದ್ದೀರಿ, ಆದರೆ ಯುವ ಜನತೆ ಇಂದು ನಿಮ್ಮಿಂದ ಅಧಿಕಾರವನ್ನು ವಾಪಾಸ್ಸು ಪಡೆದುಕೊಳ್ಳಲು ತೀರ್ಮಾನಿಸಿದ್ದಾರೆ ಎಂದು ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

ಅಮಿತ್ ಶಾ ಅವರ ದೆಹಲಿ ಪೊಲೀಸರು ಬಹಳ ಉತ್ಸಾಹದಿಂದ ವಿಪಕ್ಷಗಳ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ, ಆದರೆ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯು 72 ಗಂಟೆಗಳ ಹಿಂದೆ ದಾಖಲಿಸಿದ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಮೋದಿ ಜೀ.. ನಮ್ಮ ಸಹೋದ್ಯೋಗಿಗಳು ನಿಮ್ಮ ಬೆದರಿಕೆಗಳಿಗೆ ಹೆದರುವುದಿಲ್ಲ, ನಾವು ತಕ್ಕ ಉತ್ತರವನ್ನು ನೀಡುತ್ತೇವೆ. ನಿಮ್ಮ ಪ್ರತಿಯೊಂದು ಸುಳ್ಳನ್ನು ನಾವು ಸೋಲಿಸುತ್ತೇವೆ, ಸಂವಿಧಾನ ಮತ್ತು ಮೀಸಲಾತಿಯನ್ನು ನಾಶಪಡಿಸುವ ಷಡ್ಯಂತ್ರವನ್ನು ಸೋಲಿಸುತ್ತೇವೆ. ನಾವು ಮೀಸಲಾತಿಯನ್ನು ಕೊನೆಗೊಳಿಸಲು ಬಿಡುವುದಿಲ್ಲ ಏಕೆಂದರೆ ಈ ಮೀಸಲಾತಿ ಬಡವರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಅವರ ಹಕ್ಕುಗಳನ್ನು ನೀಡಿದೆ. ಜೂನ್ 4ರಂದು ದೇಶದಲ್ಲಿ ಹೊಸ ಪ್ರಧಾನಿ ಅಧಿಕಾರಕ್ಕೇರಲಿದ್ದಾರೆ, ಅವರು ಮತ್ತೊಮ್ಮೆ ದೇಶದಲ್ಲಿ ನ್ಯಾಯ, ಸತ್ಯ ಮತ್ತು ಧೈರ್ಯದ ಅಡಿಪಾಯವನ್ನು ಹಾಕುತ್ತಾರೆ ಎಂದು ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...