Homeಮುಖಪುಟಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪೊಲೀಸರು “ಕಿರುಕುಳ” ಮತ್ತು “ಬೆದರಿಕೆ” ಹಾಕುತ್ತಿದ್ದಾರೆ  ಎಂದು ಕಾಂಗ್ರೆಸ್ ಆರೋಪಿಸಿದೆ.

ಅಮಿತ್‌ ಶಾ ಅವರ ತಿರುಚಿದ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದಲ್ಲಿ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ತಂಡದ ರಾಷ್ಟ್ರೀಯ ಸಂಯೋಜಕರನ್ನು ದೆಹಲಿ ಪೊಲೀಸ್ ವಿಶೇಷ ಕೋಶ ಬಂಧಿಸಿದ ಬೆನ್ನಲ್ಲಿ ಕಾಂಗ್ರೆಸ್‌ “ಕಿರುಕುಳ” ಮತ್ತು “ಬೆದರಿಕೆ” ಆರೋಪವನ್ನು ಮಾಡಿದೆ.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ, ನರೇಂದ್ರ ಮೋದಿ ಮತ್ತು ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲಲಿದೆ. ಬಿಜೆಪಿಯ ಷಡ್ಯಂತ್ರವನ್ನು ಸಾರ್ವಜನಿಕರು ಅರ್ಥಮಾಡಿಕೊಂಡಿರುವುದರಿಂದ, ಬಿಜೆಪಿ ಗೆದ್ದರೆ ಮೀಸಲಾತಿ ಮತ್ತು ಸಂವಿಧಾನವನ್ನು ರದ್ದುಪಡಿಸುತ್ತದೆ ಎಂದು ಜನರು ತಿಳಿದುಕೊಂಡಿದ್ದಾರೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಮತದಾನಕ್ಕೆ ಮೊದಲೇ ಸೋಲನ್ನು ಮನಗಂಡಿದ್ದಾರೆ. ಹೀಗಾಗಿ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ತಂಡದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳನ್ನು ಬಂಧಿಸಲಾಗತ್ತಿದೆ. ಅವರಿಂದ ಉಪಕರಣಗಳನ್ನು ಜಪ್ತಿ ಮಾಡಲಾಗುತ್ತಿದೆ. ಇದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಯ ಮತ್ತು ಹೇಡಿತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಆದೇಶದ ಮೇರೆಗೆ ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗಳನ್ನು ಬೆದರಿಸಲಾಗುತ್ತಿದೆ. ಇವರು ಗಾಂಧಿ, ನೆಹರು, ಪಟೇಲ್, ಬೋಸ್ ಅವರ ಸಿದ್ಧಾಂತವನ್ನು ಆರಿಸಿಕೊಂಡು ಕಾಂಗ್ರೆಸ್ ಜೊತೆ ನಿಂತವರಾಗಿದ್ದಾರೆ. ಸತ್ಯ ಮತ್ತು ನ್ಯಾಯವನ್ನು ಆಯ್ಕೆ ಮಾಡಿದ ಮತ್ತು ನಿಮ್ಮ ಸುಳ್ಳನ್ನು  ತಿರಸ್ಕರಿಸಿದವರನ್ನು ಬಿಜೆಪಿ ಹೆದರಿಸುತ್ತಿದೆ ಎಂದು ಶ್ರೀನಾಟೆ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸೋಲಿನ ನಿರೀಕ್ಷೆಯಿಂದಾಗಿ ಬಿಜೆಪಿ ನಾಯಕರು ಭೀತಿಯಲ್ಲಿದ್ದಾರೆ. ನಿಮಗೆ ಧೈರ್ಯವಿದ್ದರೆ ರಾಜಕೀಯ ಹೋರಾಟ ನಡೆಸಿ, ವಿಶ್ವದ ಅತಿದೊಡ್ಡ ನಕಲಿ ಸುದ್ದಿ ಕಾರ್ಖಾನೆಯನ್ನು ನಡೆಸುತ್ತಿರುವ ಪ್ರಧಾನಿ ಮತ್ತು ಈ ನಕಲಿ ಸುದ್ದಿ ಕಾರ್ಖಾನೆಯ ಬಗ್ಗೆ ಹೆಮ್ಮೆಪಡುವ ಗೃಹ ಸಚಿವರು ಭಯಭೀತರಾಗಿದ್ದಾರೆ. ನೀವು ತುಂಬಾ ಭಯಗೊಂಡಿದ್ದೀರಿ, ನೀವು ನಮ್ಮ ಯುವಕರನ್ನು ಹಿಂಬಾಲಿಸಲು ಪ್ರಾರಂಭಿಸಿದ್ದೀರಿ, ಆದರೆ ಯುವ ಜನತೆ ಇಂದು ನಿಮ್ಮಿಂದ ಅಧಿಕಾರವನ್ನು ವಾಪಾಸ್ಸು ಪಡೆದುಕೊಳ್ಳಲು ತೀರ್ಮಾನಿಸಿದ್ದಾರೆ ಎಂದು ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

ಅಮಿತ್ ಶಾ ಅವರ ದೆಹಲಿ ಪೊಲೀಸರು ಬಹಳ ಉತ್ಸಾಹದಿಂದ ವಿಪಕ್ಷಗಳ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ, ಆದರೆ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯು 72 ಗಂಟೆಗಳ ಹಿಂದೆ ದಾಖಲಿಸಿದ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಮೋದಿ ಜೀ.. ನಮ್ಮ ಸಹೋದ್ಯೋಗಿಗಳು ನಿಮ್ಮ ಬೆದರಿಕೆಗಳಿಗೆ ಹೆದರುವುದಿಲ್ಲ, ನಾವು ತಕ್ಕ ಉತ್ತರವನ್ನು ನೀಡುತ್ತೇವೆ. ನಿಮ್ಮ ಪ್ರತಿಯೊಂದು ಸುಳ್ಳನ್ನು ನಾವು ಸೋಲಿಸುತ್ತೇವೆ, ಸಂವಿಧಾನ ಮತ್ತು ಮೀಸಲಾತಿಯನ್ನು ನಾಶಪಡಿಸುವ ಷಡ್ಯಂತ್ರವನ್ನು ಸೋಲಿಸುತ್ತೇವೆ. ನಾವು ಮೀಸಲಾತಿಯನ್ನು ಕೊನೆಗೊಳಿಸಲು ಬಿಡುವುದಿಲ್ಲ ಏಕೆಂದರೆ ಈ ಮೀಸಲಾತಿ ಬಡವರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಅವರ ಹಕ್ಕುಗಳನ್ನು ನೀಡಿದೆ. ಜೂನ್ 4ರಂದು ದೇಶದಲ್ಲಿ ಹೊಸ ಪ್ರಧಾನಿ ಅಧಿಕಾರಕ್ಕೇರಲಿದ್ದಾರೆ, ಅವರು ಮತ್ತೊಮ್ಮೆ ದೇಶದಲ್ಲಿ ನ್ಯಾಯ, ಸತ್ಯ ಮತ್ತು ಧೈರ್ಯದ ಅಡಿಪಾಯವನ್ನು ಹಾಕುತ್ತಾರೆ ಎಂದು ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...