Homeಮುಖಪುಟಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪೊಲೀಸರು “ಕಿರುಕುಳ” ಮತ್ತು “ಬೆದರಿಕೆ” ಹಾಕುತ್ತಿದ್ದಾರೆ  ಎಂದು ಕಾಂಗ್ರೆಸ್ ಆರೋಪಿಸಿದೆ.

ಅಮಿತ್‌ ಶಾ ಅವರ ತಿರುಚಿದ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದಲ್ಲಿ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ತಂಡದ ರಾಷ್ಟ್ರೀಯ ಸಂಯೋಜಕರನ್ನು ದೆಹಲಿ ಪೊಲೀಸ್ ವಿಶೇಷ ಕೋಶ ಬಂಧಿಸಿದ ಬೆನ್ನಲ್ಲಿ ಕಾಂಗ್ರೆಸ್‌ “ಕಿರುಕುಳ” ಮತ್ತು “ಬೆದರಿಕೆ” ಆರೋಪವನ್ನು ಮಾಡಿದೆ.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ, ನರೇಂದ್ರ ಮೋದಿ ಮತ್ತು ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲಲಿದೆ. ಬಿಜೆಪಿಯ ಷಡ್ಯಂತ್ರವನ್ನು ಸಾರ್ವಜನಿಕರು ಅರ್ಥಮಾಡಿಕೊಂಡಿರುವುದರಿಂದ, ಬಿಜೆಪಿ ಗೆದ್ದರೆ ಮೀಸಲಾತಿ ಮತ್ತು ಸಂವಿಧಾನವನ್ನು ರದ್ದುಪಡಿಸುತ್ತದೆ ಎಂದು ಜನರು ತಿಳಿದುಕೊಂಡಿದ್ದಾರೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಮತದಾನಕ್ಕೆ ಮೊದಲೇ ಸೋಲನ್ನು ಮನಗಂಡಿದ್ದಾರೆ. ಹೀಗಾಗಿ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ತಂಡದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳನ್ನು ಬಂಧಿಸಲಾಗತ್ತಿದೆ. ಅವರಿಂದ ಉಪಕರಣಗಳನ್ನು ಜಪ್ತಿ ಮಾಡಲಾಗುತ್ತಿದೆ. ಇದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಯ ಮತ್ತು ಹೇಡಿತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಆದೇಶದ ಮೇರೆಗೆ ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗಳನ್ನು ಬೆದರಿಸಲಾಗುತ್ತಿದೆ. ಇವರು ಗಾಂಧಿ, ನೆಹರು, ಪಟೇಲ್, ಬೋಸ್ ಅವರ ಸಿದ್ಧಾಂತವನ್ನು ಆರಿಸಿಕೊಂಡು ಕಾಂಗ್ರೆಸ್ ಜೊತೆ ನಿಂತವರಾಗಿದ್ದಾರೆ. ಸತ್ಯ ಮತ್ತು ನ್ಯಾಯವನ್ನು ಆಯ್ಕೆ ಮಾಡಿದ ಮತ್ತು ನಿಮ್ಮ ಸುಳ್ಳನ್ನು  ತಿರಸ್ಕರಿಸಿದವರನ್ನು ಬಿಜೆಪಿ ಹೆದರಿಸುತ್ತಿದೆ ಎಂದು ಶ್ರೀನಾಟೆ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸೋಲಿನ ನಿರೀಕ್ಷೆಯಿಂದಾಗಿ ಬಿಜೆಪಿ ನಾಯಕರು ಭೀತಿಯಲ್ಲಿದ್ದಾರೆ. ನಿಮಗೆ ಧೈರ್ಯವಿದ್ದರೆ ರಾಜಕೀಯ ಹೋರಾಟ ನಡೆಸಿ, ವಿಶ್ವದ ಅತಿದೊಡ್ಡ ನಕಲಿ ಸುದ್ದಿ ಕಾರ್ಖಾನೆಯನ್ನು ನಡೆಸುತ್ತಿರುವ ಪ್ರಧಾನಿ ಮತ್ತು ಈ ನಕಲಿ ಸುದ್ದಿ ಕಾರ್ಖಾನೆಯ ಬಗ್ಗೆ ಹೆಮ್ಮೆಪಡುವ ಗೃಹ ಸಚಿವರು ಭಯಭೀತರಾಗಿದ್ದಾರೆ. ನೀವು ತುಂಬಾ ಭಯಗೊಂಡಿದ್ದೀರಿ, ನೀವು ನಮ್ಮ ಯುವಕರನ್ನು ಹಿಂಬಾಲಿಸಲು ಪ್ರಾರಂಭಿಸಿದ್ದೀರಿ, ಆದರೆ ಯುವ ಜನತೆ ಇಂದು ನಿಮ್ಮಿಂದ ಅಧಿಕಾರವನ್ನು ವಾಪಾಸ್ಸು ಪಡೆದುಕೊಳ್ಳಲು ತೀರ್ಮಾನಿಸಿದ್ದಾರೆ ಎಂದು ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

ಅಮಿತ್ ಶಾ ಅವರ ದೆಹಲಿ ಪೊಲೀಸರು ಬಹಳ ಉತ್ಸಾಹದಿಂದ ವಿಪಕ್ಷಗಳ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ, ಆದರೆ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯು 72 ಗಂಟೆಗಳ ಹಿಂದೆ ದಾಖಲಿಸಿದ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಮೋದಿ ಜೀ.. ನಮ್ಮ ಸಹೋದ್ಯೋಗಿಗಳು ನಿಮ್ಮ ಬೆದರಿಕೆಗಳಿಗೆ ಹೆದರುವುದಿಲ್ಲ, ನಾವು ತಕ್ಕ ಉತ್ತರವನ್ನು ನೀಡುತ್ತೇವೆ. ನಿಮ್ಮ ಪ್ರತಿಯೊಂದು ಸುಳ್ಳನ್ನು ನಾವು ಸೋಲಿಸುತ್ತೇವೆ, ಸಂವಿಧಾನ ಮತ್ತು ಮೀಸಲಾತಿಯನ್ನು ನಾಶಪಡಿಸುವ ಷಡ್ಯಂತ್ರವನ್ನು ಸೋಲಿಸುತ್ತೇವೆ. ನಾವು ಮೀಸಲಾತಿಯನ್ನು ಕೊನೆಗೊಳಿಸಲು ಬಿಡುವುದಿಲ್ಲ ಏಕೆಂದರೆ ಈ ಮೀಸಲಾತಿ ಬಡವರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಅವರ ಹಕ್ಕುಗಳನ್ನು ನೀಡಿದೆ. ಜೂನ್ 4ರಂದು ದೇಶದಲ್ಲಿ ಹೊಸ ಪ್ರಧಾನಿ ಅಧಿಕಾರಕ್ಕೇರಲಿದ್ದಾರೆ, ಅವರು ಮತ್ತೊಮ್ಮೆ ದೇಶದಲ್ಲಿ ನ್ಯಾಯ, ಸತ್ಯ ಮತ್ತು ಧೈರ್ಯದ ಅಡಿಪಾಯವನ್ನು ಹಾಕುತ್ತಾರೆ ಎಂದು ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...