Homeಮುಖಪುಟಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

"ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ" ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ ತ್ಯಾಗಿ (53) ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂದಿ ವಾಹಿನಿಯೊಂದರ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಘಾಜಿಯಾಬಾದ್‌ನಲ್ಲಿನ ಸೆಕ್ಟರ್‌ 16ರಲ್ಲಿನ ತಮ್ಮ ನಿವಾಸದಿಂದ ಆಜ್‌ತಕ್ ವಾಹಿನಿಯ ಟಿವಿ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಚರ್ಚೆಯ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ರಾಜೀವ್‌ರವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ರಾಜೀವ್ ಸಂಜೆ 5 ಗಂಟೆ ಸುಮಾರಿಗೆ ಲೈವ್‌ ಡಿಬೇಟ್‌ನಲ್ಲಿ ಭಾಗವಹಿಸಿದ್ದರು. ನಂತರ 6-6.15 ರ ಹೊತ್ತಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಡಲು ಕಷ್ಟವಾಗಿದೆ. ಆಗ ಅವರ ಕುಟುಂಬದವರನ್ನು ಅವರನ್ನು ಸ್ಥಳೀಯ ಯಶೋಧಾ ಹಾಸ್ಪಿಟಲ್‌ಗೆ ದಾಖಲು ಮಾಡಿದ್ದಾರೆ. 6.30ರ ವೇಳೆಗೆ ಅವರು ಮೃತರಾಗಿದ್ದಾರೆ ಎಂದು ವೈದ್ಯರಾದ ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಅವರು ನಮ್ಮ ಆಸ್ಪತ್ರೆಗೆ ಬರುತ್ತಿದ್ದಾರೆ. ನಮ್ಮ ದಾಖಲೆಗಳ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿರಲಿಲ್ಲ. ಸಣ್ಣ ಮಟ್ಟಿಗಿನ ಕೊಲೆಸ್ಟ್ರಾಲ್ ಸಮಸ್ಯೆ ಮಾತ್ರ ಇತ್ತು ಎಂದು ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಟಿವಿ ಚರ್ಚೆಗಳಲ್ಲಿ ರಾಜೀವ್ ತ್ಯಾಗಿ ಹೆಸರುವಾಸಿಯಾಗಿದ್ದರು. ತಮ್ಮ ಹರಿತ ಮಾತುಗಳ ಮೂಲಕ ಗಮನ ಸೆಳೆದಿದ್ದರು. ಎರಡು ದಿನದ ಹಿಂದೆ ಬೆಂಗಳೂರಿನಲ್ಲಿ ಫೇಸ್‌ಬುಕ್ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯ ಕುರಿತು ಅವರು ಚರ್ಚೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡ ಆ ಚರ್ಚೆಯಲ್ಲಿದ್ದರು. ಸಾವಿನ ಸುದ್ದಿ ತಿಳಿದ ಕೂಡಲೇ “ನನ್ನ ಸ್ನೇಹಿತ ರಾಜೀವ್ ತ್ಯಾಗಿ ನಿಧನರಾದರು ಎಂದು ನಂಬಲು ಆಗುತ್ತಿಲ್ಲ. 5 ಗಂಟೆ ಸುಮಾರಿಗೆ ನಾವಿಬ್ಬರೂ ಟಿವಿ ಚರ್ಚೆಯಲ್ಲಿದ್ದವು. ಜೀವನ ಎಷ್ಟು ಅನಿರೀಕ್ಷಿತ. ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಪದಗಳಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್‌ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ರಾಜೀವ್ ನಿಧನಕ್ಕೆ ಸಂತಾಪ  ವ್ಯಕ್ತಪಡಿಸಿದ್ದಾರೆ. “ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಸರಳ ಮತ್ತು ಸಂಯಮವುಳ್ಳವರನ್ನು ಈ ವಿಷಕಾರಿ ಡಿಬೀಟ್‌ಗಳು ಮತ್ತು ವಿಷಕಾರಿ ವಕ್ತಾರರು ಎಷ್ಟು ಸಮಯದವರೆಗೂ ಕೊಲ್ಲುತ್ತಾರೆ? ಟಿಆರ್‌ಪಿಗಾಗಿ ನಡೆಯುವ ಈ ಡಿಬೇಟ್‌ಗಳು ಎಷ್ಟು ಕಾಲ ಮುಂದುವರೆಯುತ್ತವೆ? ಹಿಂದು ಮುಸ್ಲಿಂ ಎಂಬ ವಿಷಕಾರಿ ವಿಭಾಗವು ಎಷ್ಟು ದಿನಗಳ ಕಾಲ ಈ ದೇಶದ ಆತ್ಮವನ್ನು ತಿನ್ನುತ್ತದೆ? ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ ಕಿಡಿಕಾರಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಟ್ವೀಟ್ ಮಾಡಿ, “ಚರ್ಚೆಯ ಸಮಯದಲ್ಲಿ ರಾಜೀವ್‌ ತ್ಯಾಗಿ ಅವರನ್ನು‘ ಜೈಚಂದ್ ’ಎಂದು ಕರೆಯಲಾಯಿತು. ಅವರನ್ನು ‘ನಕಲಿ ಹಿಂದೂ’ ಎಂದು ಕರೆಯಲಾಯಿತು, ಅವರ ನಂಬಿಕೆಯನ್ನು ಪ್ರಶ್ನಿಸಲಾಯಿತು. ಆನಂತರ ಅವರು ಹೃದಯಾಘಾತದಿಂದ ಬಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜೀವ್‌ ತ್ಯಾಗಿ ಅವರಿಗೆ ಹೃದಯಾಘಾತ ಆಗವು ಕೆಲವೇ ಕ್ಷಣಗಳ ಮೊದಲು ಸಂಬಿತ್ ಪಾತ್ರ ಅವರನ್ನು ನಿಂದಿಸಿದ್ದರು. ಅಲ್ಲದೇ ಮತ್ತಷ್ಟು ವಿಷ ಹರಡಲು ಮತ್ತೊಂದು ಚರ್ಚೆಗೆ ಹೋದರು.

ನನಗೆ ಮಾತನಾಡಲು ಅವಕಾಶಕೊಡಿ ಎಂಬುದು ರಾಜೀವ್ ತ್ಯಾಗಿಯವರ ಕೊನೆಯ ಮಾತಾಗಿತ್ತು ಎಂಬುದನ್ನು ನೆನೆದು ನನಗೆ ದುಃಖವಾಗುತ್ತಿದೆ. ಸಂಬಿತ್ ಪಾತ್ರ ಮತ್ತು ಆಜ್‌ತಜ್ ಅವರನ್ನು ಕೊಂದಿದೆ. ಅರೆಸ್ಟ್ ಸಂಬಿತ್ ಪಾತ್ರ ಎಂದು ಮಾಹಿತ ಹಕ್ಕು ಕಾರ್ಯಕರ್ತ ಸಾಕೇತ್ ಗೋಖುಲೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ #ArrestSambitPatra ಹ್ಯಾಷ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...