Homeಮುಖಪುಟಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

"ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ" ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ ತ್ಯಾಗಿ (53) ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂದಿ ವಾಹಿನಿಯೊಂದರ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಘಾಜಿಯಾಬಾದ್‌ನಲ್ಲಿನ ಸೆಕ್ಟರ್‌ 16ರಲ್ಲಿನ ತಮ್ಮ ನಿವಾಸದಿಂದ ಆಜ್‌ತಕ್ ವಾಹಿನಿಯ ಟಿವಿ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಚರ್ಚೆಯ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ರಾಜೀವ್‌ರವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ರಾಜೀವ್ ಸಂಜೆ 5 ಗಂಟೆ ಸುಮಾರಿಗೆ ಲೈವ್‌ ಡಿಬೇಟ್‌ನಲ್ಲಿ ಭಾಗವಹಿಸಿದ್ದರು. ನಂತರ 6-6.15 ರ ಹೊತ್ತಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಡಲು ಕಷ್ಟವಾಗಿದೆ. ಆಗ ಅವರ ಕುಟುಂಬದವರನ್ನು ಅವರನ್ನು ಸ್ಥಳೀಯ ಯಶೋಧಾ ಹಾಸ್ಪಿಟಲ್‌ಗೆ ದಾಖಲು ಮಾಡಿದ್ದಾರೆ. 6.30ರ ವೇಳೆಗೆ ಅವರು ಮೃತರಾಗಿದ್ದಾರೆ ಎಂದು ವೈದ್ಯರಾದ ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಅವರು ನಮ್ಮ ಆಸ್ಪತ್ರೆಗೆ ಬರುತ್ತಿದ್ದಾರೆ. ನಮ್ಮ ದಾಖಲೆಗಳ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿರಲಿಲ್ಲ. ಸಣ್ಣ ಮಟ್ಟಿಗಿನ ಕೊಲೆಸ್ಟ್ರಾಲ್ ಸಮಸ್ಯೆ ಮಾತ್ರ ಇತ್ತು ಎಂದು ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಟಿವಿ ಚರ್ಚೆಗಳಲ್ಲಿ ರಾಜೀವ್ ತ್ಯಾಗಿ ಹೆಸರುವಾಸಿಯಾಗಿದ್ದರು. ತಮ್ಮ ಹರಿತ ಮಾತುಗಳ ಮೂಲಕ ಗಮನ ಸೆಳೆದಿದ್ದರು. ಎರಡು ದಿನದ ಹಿಂದೆ ಬೆಂಗಳೂರಿನಲ್ಲಿ ಫೇಸ್‌ಬುಕ್ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯ ಕುರಿತು ಅವರು ಚರ್ಚೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡ ಆ ಚರ್ಚೆಯಲ್ಲಿದ್ದರು. ಸಾವಿನ ಸುದ್ದಿ ತಿಳಿದ ಕೂಡಲೇ “ನನ್ನ ಸ್ನೇಹಿತ ರಾಜೀವ್ ತ್ಯಾಗಿ ನಿಧನರಾದರು ಎಂದು ನಂಬಲು ಆಗುತ್ತಿಲ್ಲ. 5 ಗಂಟೆ ಸುಮಾರಿಗೆ ನಾವಿಬ್ಬರೂ ಟಿವಿ ಚರ್ಚೆಯಲ್ಲಿದ್ದವು. ಜೀವನ ಎಷ್ಟು ಅನಿರೀಕ್ಷಿತ. ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಪದಗಳಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್‌ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ರಾಜೀವ್ ನಿಧನಕ್ಕೆ ಸಂತಾಪ  ವ್ಯಕ್ತಪಡಿಸಿದ್ದಾರೆ. “ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಸರಳ ಮತ್ತು ಸಂಯಮವುಳ್ಳವರನ್ನು ಈ ವಿಷಕಾರಿ ಡಿಬೀಟ್‌ಗಳು ಮತ್ತು ವಿಷಕಾರಿ ವಕ್ತಾರರು ಎಷ್ಟು ಸಮಯದವರೆಗೂ ಕೊಲ್ಲುತ್ತಾರೆ? ಟಿಆರ್‌ಪಿಗಾಗಿ ನಡೆಯುವ ಈ ಡಿಬೇಟ್‌ಗಳು ಎಷ್ಟು ಕಾಲ ಮುಂದುವರೆಯುತ್ತವೆ? ಹಿಂದು ಮುಸ್ಲಿಂ ಎಂಬ ವಿಷಕಾರಿ ವಿಭಾಗವು ಎಷ್ಟು ದಿನಗಳ ಕಾಲ ಈ ದೇಶದ ಆತ್ಮವನ್ನು ತಿನ್ನುತ್ತದೆ? ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ ಕಿಡಿಕಾರಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಟ್ವೀಟ್ ಮಾಡಿ, “ಚರ್ಚೆಯ ಸಮಯದಲ್ಲಿ ರಾಜೀವ್‌ ತ್ಯಾಗಿ ಅವರನ್ನು‘ ಜೈಚಂದ್ ’ಎಂದು ಕರೆಯಲಾಯಿತು. ಅವರನ್ನು ‘ನಕಲಿ ಹಿಂದೂ’ ಎಂದು ಕರೆಯಲಾಯಿತು, ಅವರ ನಂಬಿಕೆಯನ್ನು ಪ್ರಶ್ನಿಸಲಾಯಿತು. ಆನಂತರ ಅವರು ಹೃದಯಾಘಾತದಿಂದ ಬಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜೀವ್‌ ತ್ಯಾಗಿ ಅವರಿಗೆ ಹೃದಯಾಘಾತ ಆಗವು ಕೆಲವೇ ಕ್ಷಣಗಳ ಮೊದಲು ಸಂಬಿತ್ ಪಾತ್ರ ಅವರನ್ನು ನಿಂದಿಸಿದ್ದರು. ಅಲ್ಲದೇ ಮತ್ತಷ್ಟು ವಿಷ ಹರಡಲು ಮತ್ತೊಂದು ಚರ್ಚೆಗೆ ಹೋದರು.

ನನಗೆ ಮಾತನಾಡಲು ಅವಕಾಶಕೊಡಿ ಎಂಬುದು ರಾಜೀವ್ ತ್ಯಾಗಿಯವರ ಕೊನೆಯ ಮಾತಾಗಿತ್ತು ಎಂಬುದನ್ನು ನೆನೆದು ನನಗೆ ದುಃಖವಾಗುತ್ತಿದೆ. ಸಂಬಿತ್ ಪಾತ್ರ ಮತ್ತು ಆಜ್‌ತಜ್ ಅವರನ್ನು ಕೊಂದಿದೆ. ಅರೆಸ್ಟ್ ಸಂಬಿತ್ ಪಾತ್ರ ಎಂದು ಮಾಹಿತ ಹಕ್ಕು ಕಾರ್ಯಕರ್ತ ಸಾಕೇತ್ ಗೋಖುಲೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ #ArrestSambitPatra ಹ್ಯಾಷ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...