Homeಮುಖಪುಟಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

"ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ" ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ ತ್ಯಾಗಿ (53) ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂದಿ ವಾಹಿನಿಯೊಂದರ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಘಾಜಿಯಾಬಾದ್‌ನಲ್ಲಿನ ಸೆಕ್ಟರ್‌ 16ರಲ್ಲಿನ ತಮ್ಮ ನಿವಾಸದಿಂದ ಆಜ್‌ತಕ್ ವಾಹಿನಿಯ ಟಿವಿ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಚರ್ಚೆಯ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ರಾಜೀವ್‌ರವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ರಾಜೀವ್ ಸಂಜೆ 5 ಗಂಟೆ ಸುಮಾರಿಗೆ ಲೈವ್‌ ಡಿಬೇಟ್‌ನಲ್ಲಿ ಭಾಗವಹಿಸಿದ್ದರು. ನಂತರ 6-6.15 ರ ಹೊತ್ತಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಡಲು ಕಷ್ಟವಾಗಿದೆ. ಆಗ ಅವರ ಕುಟುಂಬದವರನ್ನು ಅವರನ್ನು ಸ್ಥಳೀಯ ಯಶೋಧಾ ಹಾಸ್ಪಿಟಲ್‌ಗೆ ದಾಖಲು ಮಾಡಿದ್ದಾರೆ. 6.30ರ ವೇಳೆಗೆ ಅವರು ಮೃತರಾಗಿದ್ದಾರೆ ಎಂದು ವೈದ್ಯರಾದ ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಅವರು ನಮ್ಮ ಆಸ್ಪತ್ರೆಗೆ ಬರುತ್ತಿದ್ದಾರೆ. ನಮ್ಮ ದಾಖಲೆಗಳ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿರಲಿಲ್ಲ. ಸಣ್ಣ ಮಟ್ಟಿಗಿನ ಕೊಲೆಸ್ಟ್ರಾಲ್ ಸಮಸ್ಯೆ ಮಾತ್ರ ಇತ್ತು ಎಂದು ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಟಿವಿ ಚರ್ಚೆಗಳಲ್ಲಿ ರಾಜೀವ್ ತ್ಯಾಗಿ ಹೆಸರುವಾಸಿಯಾಗಿದ್ದರು. ತಮ್ಮ ಹರಿತ ಮಾತುಗಳ ಮೂಲಕ ಗಮನ ಸೆಳೆದಿದ್ದರು. ಎರಡು ದಿನದ ಹಿಂದೆ ಬೆಂಗಳೂರಿನಲ್ಲಿ ಫೇಸ್‌ಬುಕ್ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯ ಕುರಿತು ಅವರು ಚರ್ಚೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡ ಆ ಚರ್ಚೆಯಲ್ಲಿದ್ದರು. ಸಾವಿನ ಸುದ್ದಿ ತಿಳಿದ ಕೂಡಲೇ “ನನ್ನ ಸ್ನೇಹಿತ ರಾಜೀವ್ ತ್ಯಾಗಿ ನಿಧನರಾದರು ಎಂದು ನಂಬಲು ಆಗುತ್ತಿಲ್ಲ. 5 ಗಂಟೆ ಸುಮಾರಿಗೆ ನಾವಿಬ್ಬರೂ ಟಿವಿ ಚರ್ಚೆಯಲ್ಲಿದ್ದವು. ಜೀವನ ಎಷ್ಟು ಅನಿರೀಕ್ಷಿತ. ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಪದಗಳಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್‌ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ರಾಜೀವ್ ನಿಧನಕ್ಕೆ ಸಂತಾಪ  ವ್ಯಕ್ತಪಡಿಸಿದ್ದಾರೆ. “ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಸರಳ ಮತ್ತು ಸಂಯಮವುಳ್ಳವರನ್ನು ಈ ವಿಷಕಾರಿ ಡಿಬೀಟ್‌ಗಳು ಮತ್ತು ವಿಷಕಾರಿ ವಕ್ತಾರರು ಎಷ್ಟು ಸಮಯದವರೆಗೂ ಕೊಲ್ಲುತ್ತಾರೆ? ಟಿಆರ್‌ಪಿಗಾಗಿ ನಡೆಯುವ ಈ ಡಿಬೇಟ್‌ಗಳು ಎಷ್ಟು ಕಾಲ ಮುಂದುವರೆಯುತ್ತವೆ? ಹಿಂದು ಮುಸ್ಲಿಂ ಎಂಬ ವಿಷಕಾರಿ ವಿಭಾಗವು ಎಷ್ಟು ದಿನಗಳ ಕಾಲ ಈ ದೇಶದ ಆತ್ಮವನ್ನು ತಿನ್ನುತ್ತದೆ? ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ ಕಿಡಿಕಾರಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಟ್ವೀಟ್ ಮಾಡಿ, “ಚರ್ಚೆಯ ಸಮಯದಲ್ಲಿ ರಾಜೀವ್‌ ತ್ಯಾಗಿ ಅವರನ್ನು‘ ಜೈಚಂದ್ ’ಎಂದು ಕರೆಯಲಾಯಿತು. ಅವರನ್ನು ‘ನಕಲಿ ಹಿಂದೂ’ ಎಂದು ಕರೆಯಲಾಯಿತು, ಅವರ ನಂಬಿಕೆಯನ್ನು ಪ್ರಶ್ನಿಸಲಾಯಿತು. ಆನಂತರ ಅವರು ಹೃದಯಾಘಾತದಿಂದ ಬಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜೀವ್‌ ತ್ಯಾಗಿ ಅವರಿಗೆ ಹೃದಯಾಘಾತ ಆಗವು ಕೆಲವೇ ಕ್ಷಣಗಳ ಮೊದಲು ಸಂಬಿತ್ ಪಾತ್ರ ಅವರನ್ನು ನಿಂದಿಸಿದ್ದರು. ಅಲ್ಲದೇ ಮತ್ತಷ್ಟು ವಿಷ ಹರಡಲು ಮತ್ತೊಂದು ಚರ್ಚೆಗೆ ಹೋದರು.

ನನಗೆ ಮಾತನಾಡಲು ಅವಕಾಶಕೊಡಿ ಎಂಬುದು ರಾಜೀವ್ ತ್ಯಾಗಿಯವರ ಕೊನೆಯ ಮಾತಾಗಿತ್ತು ಎಂಬುದನ್ನು ನೆನೆದು ನನಗೆ ದುಃಖವಾಗುತ್ತಿದೆ. ಸಂಬಿತ್ ಪಾತ್ರ ಮತ್ತು ಆಜ್‌ತಜ್ ಅವರನ್ನು ಕೊಂದಿದೆ. ಅರೆಸ್ಟ್ ಸಂಬಿತ್ ಪಾತ್ರ ಎಂದು ಮಾಹಿತ ಹಕ್ಕು ಕಾರ್ಯಕರ್ತ ಸಾಕೇತ್ ಗೋಖುಲೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ #ArrestSambitPatra ಹ್ಯಾಷ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....