Homeಮುಖಪುಟಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

"ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ" ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ ತ್ಯಾಗಿ (53) ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂದಿ ವಾಹಿನಿಯೊಂದರ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಘಾಜಿಯಾಬಾದ್‌ನಲ್ಲಿನ ಸೆಕ್ಟರ್‌ 16ರಲ್ಲಿನ ತಮ್ಮ ನಿವಾಸದಿಂದ ಆಜ್‌ತಕ್ ವಾಹಿನಿಯ ಟಿವಿ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಚರ್ಚೆಯ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ರಾಜೀವ್‌ರವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ರಾಜೀವ್ ಸಂಜೆ 5 ಗಂಟೆ ಸುಮಾರಿಗೆ ಲೈವ್‌ ಡಿಬೇಟ್‌ನಲ್ಲಿ ಭಾಗವಹಿಸಿದ್ದರು. ನಂತರ 6-6.15 ರ ಹೊತ್ತಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಡಲು ಕಷ್ಟವಾಗಿದೆ. ಆಗ ಅವರ ಕುಟುಂಬದವರನ್ನು ಅವರನ್ನು ಸ್ಥಳೀಯ ಯಶೋಧಾ ಹಾಸ್ಪಿಟಲ್‌ಗೆ ದಾಖಲು ಮಾಡಿದ್ದಾರೆ. 6.30ರ ವೇಳೆಗೆ ಅವರು ಮೃತರಾಗಿದ್ದಾರೆ ಎಂದು ವೈದ್ಯರಾದ ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಅವರು ನಮ್ಮ ಆಸ್ಪತ್ರೆಗೆ ಬರುತ್ತಿದ್ದಾರೆ. ನಮ್ಮ ದಾಖಲೆಗಳ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿರಲಿಲ್ಲ. ಸಣ್ಣ ಮಟ್ಟಿಗಿನ ಕೊಲೆಸ್ಟ್ರಾಲ್ ಸಮಸ್ಯೆ ಮಾತ್ರ ಇತ್ತು ಎಂದು ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಟಿವಿ ಚರ್ಚೆಗಳಲ್ಲಿ ರಾಜೀವ್ ತ್ಯಾಗಿ ಹೆಸರುವಾಸಿಯಾಗಿದ್ದರು. ತಮ್ಮ ಹರಿತ ಮಾತುಗಳ ಮೂಲಕ ಗಮನ ಸೆಳೆದಿದ್ದರು. ಎರಡು ದಿನದ ಹಿಂದೆ ಬೆಂಗಳೂರಿನಲ್ಲಿ ಫೇಸ್‌ಬುಕ್ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯ ಕುರಿತು ಅವರು ಚರ್ಚೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡ ಆ ಚರ್ಚೆಯಲ್ಲಿದ್ದರು. ಸಾವಿನ ಸುದ್ದಿ ತಿಳಿದ ಕೂಡಲೇ “ನನ್ನ ಸ್ನೇಹಿತ ರಾಜೀವ್ ತ್ಯಾಗಿ ನಿಧನರಾದರು ಎಂದು ನಂಬಲು ಆಗುತ್ತಿಲ್ಲ. 5 ಗಂಟೆ ಸುಮಾರಿಗೆ ನಾವಿಬ್ಬರೂ ಟಿವಿ ಚರ್ಚೆಯಲ್ಲಿದ್ದವು. ಜೀವನ ಎಷ್ಟು ಅನಿರೀಕ್ಷಿತ. ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಪದಗಳಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್‌ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ರಾಜೀವ್ ನಿಧನಕ್ಕೆ ಸಂತಾಪ  ವ್ಯಕ್ತಪಡಿಸಿದ್ದಾರೆ. “ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಸರಳ ಮತ್ತು ಸಂಯಮವುಳ್ಳವರನ್ನು ಈ ವಿಷಕಾರಿ ಡಿಬೀಟ್‌ಗಳು ಮತ್ತು ವಿಷಕಾರಿ ವಕ್ತಾರರು ಎಷ್ಟು ಸಮಯದವರೆಗೂ ಕೊಲ್ಲುತ್ತಾರೆ? ಟಿಆರ್‌ಪಿಗಾಗಿ ನಡೆಯುವ ಈ ಡಿಬೇಟ್‌ಗಳು ಎಷ್ಟು ಕಾಲ ಮುಂದುವರೆಯುತ್ತವೆ? ಹಿಂದು ಮುಸ್ಲಿಂ ಎಂಬ ವಿಷಕಾರಿ ವಿಭಾಗವು ಎಷ್ಟು ದಿನಗಳ ಕಾಲ ಈ ದೇಶದ ಆತ್ಮವನ್ನು ತಿನ್ನುತ್ತದೆ? ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ ಕಿಡಿಕಾರಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಟ್ವೀಟ್ ಮಾಡಿ, “ಚರ್ಚೆಯ ಸಮಯದಲ್ಲಿ ರಾಜೀವ್‌ ತ್ಯಾಗಿ ಅವರನ್ನು‘ ಜೈಚಂದ್ ’ಎಂದು ಕರೆಯಲಾಯಿತು. ಅವರನ್ನು ‘ನಕಲಿ ಹಿಂದೂ’ ಎಂದು ಕರೆಯಲಾಯಿತು, ಅವರ ನಂಬಿಕೆಯನ್ನು ಪ್ರಶ್ನಿಸಲಾಯಿತು. ಆನಂತರ ಅವರು ಹೃದಯಾಘಾತದಿಂದ ಬಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜೀವ್‌ ತ್ಯಾಗಿ ಅವರಿಗೆ ಹೃದಯಾಘಾತ ಆಗವು ಕೆಲವೇ ಕ್ಷಣಗಳ ಮೊದಲು ಸಂಬಿತ್ ಪಾತ್ರ ಅವರನ್ನು ನಿಂದಿಸಿದ್ದರು. ಅಲ್ಲದೇ ಮತ್ತಷ್ಟು ವಿಷ ಹರಡಲು ಮತ್ತೊಂದು ಚರ್ಚೆಗೆ ಹೋದರು.

ನನಗೆ ಮಾತನಾಡಲು ಅವಕಾಶಕೊಡಿ ಎಂಬುದು ರಾಜೀವ್ ತ್ಯಾಗಿಯವರ ಕೊನೆಯ ಮಾತಾಗಿತ್ತು ಎಂಬುದನ್ನು ನೆನೆದು ನನಗೆ ದುಃಖವಾಗುತ್ತಿದೆ. ಸಂಬಿತ್ ಪಾತ್ರ ಮತ್ತು ಆಜ್‌ತಜ್ ಅವರನ್ನು ಕೊಂದಿದೆ. ಅರೆಸ್ಟ್ ಸಂಬಿತ್ ಪಾತ್ರ ಎಂದು ಮಾಹಿತ ಹಕ್ಕು ಕಾರ್ಯಕರ್ತ ಸಾಕೇತ್ ಗೋಖುಲೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ #ArrestSambitPatra ಹ್ಯಾಷ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...