Homeಮುಖಪುಟಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

"ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ" ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ ತ್ಯಾಗಿ (53) ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂದಿ ವಾಹಿನಿಯೊಂದರ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಘಾಜಿಯಾಬಾದ್‌ನಲ್ಲಿನ ಸೆಕ್ಟರ್‌ 16ರಲ್ಲಿನ ತಮ್ಮ ನಿವಾಸದಿಂದ ಆಜ್‌ತಕ್ ವಾಹಿನಿಯ ಟಿವಿ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಚರ್ಚೆಯ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ರಾಜೀವ್‌ರವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ರಾಜೀವ್ ಸಂಜೆ 5 ಗಂಟೆ ಸುಮಾರಿಗೆ ಲೈವ್‌ ಡಿಬೇಟ್‌ನಲ್ಲಿ ಭಾಗವಹಿಸಿದ್ದರು. ನಂತರ 6-6.15 ರ ಹೊತ್ತಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಡಲು ಕಷ್ಟವಾಗಿದೆ. ಆಗ ಅವರ ಕುಟುಂಬದವರನ್ನು ಅವರನ್ನು ಸ್ಥಳೀಯ ಯಶೋಧಾ ಹಾಸ್ಪಿಟಲ್‌ಗೆ ದಾಖಲು ಮಾಡಿದ್ದಾರೆ. 6.30ರ ವೇಳೆಗೆ ಅವರು ಮೃತರಾಗಿದ್ದಾರೆ ಎಂದು ವೈದ್ಯರಾದ ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಅವರು ನಮ್ಮ ಆಸ್ಪತ್ರೆಗೆ ಬರುತ್ತಿದ್ದಾರೆ. ನಮ್ಮ ದಾಖಲೆಗಳ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿರಲಿಲ್ಲ. ಸಣ್ಣ ಮಟ್ಟಿಗಿನ ಕೊಲೆಸ್ಟ್ರಾಲ್ ಸಮಸ್ಯೆ ಮಾತ್ರ ಇತ್ತು ಎಂದು ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಟಿವಿ ಚರ್ಚೆಗಳಲ್ಲಿ ರಾಜೀವ್ ತ್ಯಾಗಿ ಹೆಸರುವಾಸಿಯಾಗಿದ್ದರು. ತಮ್ಮ ಹರಿತ ಮಾತುಗಳ ಮೂಲಕ ಗಮನ ಸೆಳೆದಿದ್ದರು. ಎರಡು ದಿನದ ಹಿಂದೆ ಬೆಂಗಳೂರಿನಲ್ಲಿ ಫೇಸ್‌ಬುಕ್ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯ ಕುರಿತು ಅವರು ಚರ್ಚೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡ ಆ ಚರ್ಚೆಯಲ್ಲಿದ್ದರು. ಸಾವಿನ ಸುದ್ದಿ ತಿಳಿದ ಕೂಡಲೇ “ನನ್ನ ಸ್ನೇಹಿತ ರಾಜೀವ್ ತ್ಯಾಗಿ ನಿಧನರಾದರು ಎಂದು ನಂಬಲು ಆಗುತ್ತಿಲ್ಲ. 5 ಗಂಟೆ ಸುಮಾರಿಗೆ ನಾವಿಬ್ಬರೂ ಟಿವಿ ಚರ್ಚೆಯಲ್ಲಿದ್ದವು. ಜೀವನ ಎಷ್ಟು ಅನಿರೀಕ್ಷಿತ. ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಪದಗಳಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್‌ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ರಾಜೀವ್ ನಿಧನಕ್ಕೆ ಸಂತಾಪ  ವ್ಯಕ್ತಪಡಿಸಿದ್ದಾರೆ. “ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಸರಳ ಮತ್ತು ಸಂಯಮವುಳ್ಳವರನ್ನು ಈ ವಿಷಕಾರಿ ಡಿಬೀಟ್‌ಗಳು ಮತ್ತು ವಿಷಕಾರಿ ವಕ್ತಾರರು ಎಷ್ಟು ಸಮಯದವರೆಗೂ ಕೊಲ್ಲುತ್ತಾರೆ? ಟಿಆರ್‌ಪಿಗಾಗಿ ನಡೆಯುವ ಈ ಡಿಬೇಟ್‌ಗಳು ಎಷ್ಟು ಕಾಲ ಮುಂದುವರೆಯುತ್ತವೆ? ಹಿಂದು ಮುಸ್ಲಿಂ ಎಂಬ ವಿಷಕಾರಿ ವಿಭಾಗವು ಎಷ್ಟು ದಿನಗಳ ಕಾಲ ಈ ದೇಶದ ಆತ್ಮವನ್ನು ತಿನ್ನುತ್ತದೆ? ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ ಕಿಡಿಕಾರಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಟ್ವೀಟ್ ಮಾಡಿ, “ಚರ್ಚೆಯ ಸಮಯದಲ್ಲಿ ರಾಜೀವ್‌ ತ್ಯಾಗಿ ಅವರನ್ನು‘ ಜೈಚಂದ್ ’ಎಂದು ಕರೆಯಲಾಯಿತು. ಅವರನ್ನು ‘ನಕಲಿ ಹಿಂದೂ’ ಎಂದು ಕರೆಯಲಾಯಿತು, ಅವರ ನಂಬಿಕೆಯನ್ನು ಪ್ರಶ್ನಿಸಲಾಯಿತು. ಆನಂತರ ಅವರು ಹೃದಯಾಘಾತದಿಂದ ಬಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜೀವ್‌ ತ್ಯಾಗಿ ಅವರಿಗೆ ಹೃದಯಾಘಾತ ಆಗವು ಕೆಲವೇ ಕ್ಷಣಗಳ ಮೊದಲು ಸಂಬಿತ್ ಪಾತ್ರ ಅವರನ್ನು ನಿಂದಿಸಿದ್ದರು. ಅಲ್ಲದೇ ಮತ್ತಷ್ಟು ವಿಷ ಹರಡಲು ಮತ್ತೊಂದು ಚರ್ಚೆಗೆ ಹೋದರು.

ನನಗೆ ಮಾತನಾಡಲು ಅವಕಾಶಕೊಡಿ ಎಂಬುದು ರಾಜೀವ್ ತ್ಯಾಗಿಯವರ ಕೊನೆಯ ಮಾತಾಗಿತ್ತು ಎಂಬುದನ್ನು ನೆನೆದು ನನಗೆ ದುಃಖವಾಗುತ್ತಿದೆ. ಸಂಬಿತ್ ಪಾತ್ರ ಮತ್ತು ಆಜ್‌ತಜ್ ಅವರನ್ನು ಕೊಂದಿದೆ. ಅರೆಸ್ಟ್ ಸಂಬಿತ್ ಪಾತ್ರ ಎಂದು ಮಾಹಿತ ಹಕ್ಕು ಕಾರ್ಯಕರ್ತ ಸಾಕೇತ್ ಗೋಖುಲೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ #ArrestSambitPatra ಹ್ಯಾಷ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...