HomeಮುಖಪುಟEIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ಮಾಜಿ ಪರಿಸರ ಸಚಿವರಾಗಿದ್ದ ಜೈರಾಮ್ ರಮೇಶ್ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ರ ಅಧಿಸೂಚನೆಯ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ತೀವ್ರ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿ ಬರೆದಿರುವ ಪತ್ರಕ್ಕೆ, ನಿಮ್ಮ ಆರೋಪ ಮತ್ತು ಸಲಹೆಗಳು ಆಧಾರರಹಿತ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಉತ್ತರಿಸಿದ್ದಾರೆ.

ಮಾಜಿ ಪರಿಸರ ಸಚಿವರಾಗಿದ್ದ ಜೈರಾಮ್ ರಮೇಶ್ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಕರಡು ಅಧಿಸೂಚನೆಯು, ಸಾರ್ವಜನಿಕ ವಿಚಾರಣೆಗೆ ಸೂಚನೆ ಅವಧಿಯನ್ನು ಕಡಿಮೆ ಮಾಡಿ ಮತ್ತು ದೊಡ್ಡ ವರ್ಗದ ಜನರಿಂದ ದೂರವಿಡುತ್ತಾರೆ. ಇದು ಪರಿಸರ ತೆರವು ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ ಎಂದು ರಮೆಶ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಇದು ಪರಿಸರ ಅನುಮತಿಗಳ ಮಾನ್ಯತೆಯನ್ನು ಹೆಚ್ಚಿಸುತ್ತದೆ, ಯೋಜನೆಗಳು ನಿರ್ಮಾಣವಾಗದಿದ್ದರೂ ಸಹ ದೀರ್ಘಾವಧಿಯವರೆಗೆ ಭೂಮಿಯನ್ನು ಭದ್ರಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದು ಭೂ ಕಬಳಿಕೆಯನ್ನು ಉತ್ತೇಜಿಸುತ್ತದೆಯೇ ಹೊರತು ಅಭಿವೃದ್ಧಿಯನ್ನಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದು ರಾಜ್ಯ EIA ಅಧಿಕಾರಿಗಳನ್ನು ನೇಮಿಸಲು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವನ್ನು ನೀಡುತ್ತದೆ. EIA ಕರಡು, ಸಹಕಾರಿ ಸಂಯುಕ್ತ ವ್ಯವಸ್ಥೆಗೆ ಮತ್ತೊಂದು ಹೊಡೆತ ಎಂದು ರಮೇಶ್ ಹೇಳಿದ್ದಾರೆ.

ಈ ಕರಡು, ಪರಿಸರ ನಿಯಂತ್ರಣವನ್ನು “ಅನಗತ್ಯ ನಿಯಂತ್ರಕ ಹೊರೆ”ಯಾಗಿ ನೋಡುವ ಮನೋಭಾವದ ಪರಿಣಾಮವಾಗಿದೆ. ಆದರೆ ಜನರ ಕಲ್ಯಾಣ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಸಾಧನವಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಯಾಗಿ ಜಾವಡೇಕರ್ “ಕರಡು ಅಧಿಸೂಚನೆಯನ್ನು ಸೂಚನೆ ಮತ್ತು ಸಲಹೆಗಳಿಗಾಗಿ ಸಾರ್ವಜನಿಕ ವಲಯದಲ್ಲಿ ಇರಿಸಲಾಗಿದೆ. ನಿಮ್ಮ ಅವಲೋಕನಗಳನ್ನು ಗುರುತಿಸಲಾಗಿದೆ. ಸಲಹೆಗಳಿಗಾಗಿ ಇನ್ನೂ 15 ದಿನಗಳಿವೆ. ನಿಮ್ಮ ಎಲ್ಲಾ ಸಲಹೆಗಳು ಮತ್ತು ಆರೋಪಗಳು ಆಧಾರರಹಿತ ಮತ್ತು ತಪ್ಪು ವ್ಯಾಖ್ಯಾನವನ್ನು ಹೊಂದಿವೆ. ನಾನು ನಿಮಗೆ ವಿವರವಾಗಿ ಉತ್ತರಿಸುತ್ತೇನೆ” ಎಂದಿದ್ದಾರೆ.

ಕರಡನ್ನು ಅಂತಿಮಗೊಳಿಸುವ ಮೊದಲು ಕೇಂದ್ರವು ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಸರ್ಕಾರದ ನಿರ್ಧಾರಗಳನ್ನು ಸಂಸತ್ತು ಮತ್ತು ಸ್ಥಾಯಿ ಸಮಿತಿಗಳು ಪರಿಶೀಲಿಸಬಹುದು ಎಂದು ಪರಿಸರ ಸಚಿವರು ಹೇಳಿದರು.

ಏನಿದು EIA-2020;

ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಮಾಹಿತಿ ಹಕ್ಕು ಕಾಯ್ದೆ ಅರ್ಜಿದಾರರು ನೀಡಿದ ದಾಖಲೆಗಳು, ಕರಡು ಕುರಿತು ಸಾರ್ವಜನಿಕ ಪ್ರತಿಕ್ರಿಯೆಗಾಗಿ ನೀಡಿರುವ ಸಮಯದ ಅವಧಿಯನ್ನು ವಿಸ್ತರಿಸುವ ಸಚಿವಾಲಯದ ಹಿರಿಯ ಅಧಿಕಾರಿಯ ಶಿಫಾರಸುಗಳನ್ನು ಜಾವಡೇಕರ್ ರದ್ದುಪಡಿಸಿದ್ದಾರೆ ಎನ್ನಲಾಗಿದೆ.

ಪರಿಸರ ಸಚಿವಾಲಯವು ಕರಡು ಕಾನೂನನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯದಲ್ಲಿ ಇರಿಸಿತ್ತು.

ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ಕ್ಕೆ ವಿಸ್ತರಿಸಿದೆ. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.


ಇದನ್ನೂ ಓದಿ: ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...