HomeಮುಖಪುಟEIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ಮಾಜಿ ಪರಿಸರ ಸಚಿವರಾಗಿದ್ದ ಜೈರಾಮ್ ರಮೇಶ್ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ರ ಅಧಿಸೂಚನೆಯ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ತೀವ್ರ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿ ಬರೆದಿರುವ ಪತ್ರಕ್ಕೆ, ನಿಮ್ಮ ಆರೋಪ ಮತ್ತು ಸಲಹೆಗಳು ಆಧಾರರಹಿತ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಉತ್ತರಿಸಿದ್ದಾರೆ.

ಮಾಜಿ ಪರಿಸರ ಸಚಿವರಾಗಿದ್ದ ಜೈರಾಮ್ ರಮೇಶ್ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಕರಡು ಅಧಿಸೂಚನೆಯು, ಸಾರ್ವಜನಿಕ ವಿಚಾರಣೆಗೆ ಸೂಚನೆ ಅವಧಿಯನ್ನು ಕಡಿಮೆ ಮಾಡಿ ಮತ್ತು ದೊಡ್ಡ ವರ್ಗದ ಜನರಿಂದ ದೂರವಿಡುತ್ತಾರೆ. ಇದು ಪರಿಸರ ತೆರವು ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ ಎಂದು ರಮೆಶ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಇದು ಪರಿಸರ ಅನುಮತಿಗಳ ಮಾನ್ಯತೆಯನ್ನು ಹೆಚ್ಚಿಸುತ್ತದೆ, ಯೋಜನೆಗಳು ನಿರ್ಮಾಣವಾಗದಿದ್ದರೂ ಸಹ ದೀರ್ಘಾವಧಿಯವರೆಗೆ ಭೂಮಿಯನ್ನು ಭದ್ರಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದು ಭೂ ಕಬಳಿಕೆಯನ್ನು ಉತ್ತೇಜಿಸುತ್ತದೆಯೇ ಹೊರತು ಅಭಿವೃದ್ಧಿಯನ್ನಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದು ರಾಜ್ಯ EIA ಅಧಿಕಾರಿಗಳನ್ನು ನೇಮಿಸಲು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವನ್ನು ನೀಡುತ್ತದೆ. EIA ಕರಡು, ಸಹಕಾರಿ ಸಂಯುಕ್ತ ವ್ಯವಸ್ಥೆಗೆ ಮತ್ತೊಂದು ಹೊಡೆತ ಎಂದು ರಮೇಶ್ ಹೇಳಿದ್ದಾರೆ.

ಈ ಕರಡು, ಪರಿಸರ ನಿಯಂತ್ರಣವನ್ನು “ಅನಗತ್ಯ ನಿಯಂತ್ರಕ ಹೊರೆ”ಯಾಗಿ ನೋಡುವ ಮನೋಭಾವದ ಪರಿಣಾಮವಾಗಿದೆ. ಆದರೆ ಜನರ ಕಲ್ಯಾಣ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಸಾಧನವಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಯಾಗಿ ಜಾವಡೇಕರ್ “ಕರಡು ಅಧಿಸೂಚನೆಯನ್ನು ಸೂಚನೆ ಮತ್ತು ಸಲಹೆಗಳಿಗಾಗಿ ಸಾರ್ವಜನಿಕ ವಲಯದಲ್ಲಿ ಇರಿಸಲಾಗಿದೆ. ನಿಮ್ಮ ಅವಲೋಕನಗಳನ್ನು ಗುರುತಿಸಲಾಗಿದೆ. ಸಲಹೆಗಳಿಗಾಗಿ ಇನ್ನೂ 15 ದಿನಗಳಿವೆ. ನಿಮ್ಮ ಎಲ್ಲಾ ಸಲಹೆಗಳು ಮತ್ತು ಆರೋಪಗಳು ಆಧಾರರಹಿತ ಮತ್ತು ತಪ್ಪು ವ್ಯಾಖ್ಯಾನವನ್ನು ಹೊಂದಿವೆ. ನಾನು ನಿಮಗೆ ವಿವರವಾಗಿ ಉತ್ತರಿಸುತ್ತೇನೆ” ಎಂದಿದ್ದಾರೆ.

ಕರಡನ್ನು ಅಂತಿಮಗೊಳಿಸುವ ಮೊದಲು ಕೇಂದ್ರವು ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಸರ್ಕಾರದ ನಿರ್ಧಾರಗಳನ್ನು ಸಂಸತ್ತು ಮತ್ತು ಸ್ಥಾಯಿ ಸಮಿತಿಗಳು ಪರಿಶೀಲಿಸಬಹುದು ಎಂದು ಪರಿಸರ ಸಚಿವರು ಹೇಳಿದರು.

ಏನಿದು EIA-2020;

ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಮಾಹಿತಿ ಹಕ್ಕು ಕಾಯ್ದೆ ಅರ್ಜಿದಾರರು ನೀಡಿದ ದಾಖಲೆಗಳು, ಕರಡು ಕುರಿತು ಸಾರ್ವಜನಿಕ ಪ್ರತಿಕ್ರಿಯೆಗಾಗಿ ನೀಡಿರುವ ಸಮಯದ ಅವಧಿಯನ್ನು ವಿಸ್ತರಿಸುವ ಸಚಿವಾಲಯದ ಹಿರಿಯ ಅಧಿಕಾರಿಯ ಶಿಫಾರಸುಗಳನ್ನು ಜಾವಡೇಕರ್ ರದ್ದುಪಡಿಸಿದ್ದಾರೆ ಎನ್ನಲಾಗಿದೆ.

ಪರಿಸರ ಸಚಿವಾಲಯವು ಕರಡು ಕಾನೂನನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯದಲ್ಲಿ ಇರಿಸಿತ್ತು.

ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ಕ್ಕೆ ವಿಸ್ತರಿಸಿದೆ. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.


ಇದನ್ನೂ ಓದಿ: ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...