Homeಕರ್ನಾಟಕರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ- ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ

- Advertisement -
- Advertisement -

ಭಾರತ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ಮುಖಂಡರಾದ ವಿ.ಸುದರ್ಶನ್ ಮತ್ತು ಟಿ.ಬಿ.ಜಯಚಂದ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ತುಮಕೂರಿನಲ್ಲಿ ಮಾತನಾಡಿದ ಉಭಯ ಮುಖಂಡರು ಕೇಂದ್ರದ ಧೋರಣೆ ವಿರುದ್ಧ ವಾಗ್ದಾಳಿ ನಡೆಸಿದರು. “ರೈತ ಸಮುದಾಯ ಹಲವು  ಸಮಸ್ಯೆಗಳನ್ನು ಎದುರಿಸುತ್ತಿದೆ. ಸಂಕಷ್ಟಗಳ ನಡುವೆ ಜೀವನ ನಡೆಸುತ್ತಿದೆ. ಇಂತಹ ಸಂದರ್ಭ ಉಪಯೋಗಿಸಿಕೊಂಡು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿರುವುದು ಖಂಡನೀಯ” ಎಂದರು.

ಇದನ್ನೂ ಓದಿ: ತುಮಕೂರು: ಬೌದ್ಧ ಧರ್ಮ ಸ್ವೀಕಾರ ಮಾಡಿದ 250 ದಲಿತರು

“ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಕೃಷಿ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲು ತುದಿಗಾಲಲ್ಲಿ ನಿಂತಿದೆ. ಇದನ್ನು ನೋಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಿತ ಕಾಯುವುದಕ್ಕಿಂತ ಮಾರುಕಟ್ಟೆಯ ಹಿತ ಕಾಯಲು ಮುಂದಾಗಿದೆ. ಕೃಷಿ ಕಾಯ್ದೆಗಳ ಕುರಿತು ಚರ್ಚೆ ನಡೆಸಿದ್ದರೆ ಈ ಸಮಸ್ಯೆ ತಲೆದೋರುತ್ತಿರಲಿಲ್ಲ. ಅರ್ಧ ಸಮಸ್ಯೆ ಬಗೆಹರಿಯುತ್ತಿತ್ತು. ಆದರೆ ಕೇಂದ್ರ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ” ಎಂದು ಟೀಕಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಜನವರಿ 20ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ. ಇದಕ್ಕೂ ಬಗ್ಗದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ ಮಾತನಾಡಿ, “ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ” ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ:

“ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಚಾಲನೆ ನೀಡಲಾಯಿತು. ತಾಂತ್ರಿಕ ಪರಿಣತರು, ನೀರಾವರಿ ತಜ್ಞರು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಸಲಹೆ ಪಡೆದು 9 ಸಾವಿರ ಕೋಟಿ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕಳಿಸಿಕೊಟ್ಟೆವು. ನಂತರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪರಿಷ್ಕರಿಸಿ 20 ಸಾವಿರ ಕೋಟಿ ರೂ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳಿಸಿಕೊಟ್ಟರು. ಅದರ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತಿಲ್ಲ” ಎಂದು ದೂರಿದರು.

ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕು. ಮೇಕದಾಟು ಅಣೆಕಟ್ಟು ಕಟ್ಟಬೇಕು. ಇದರಿಂದ ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಸುಮಾರು 80 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು. ಈ ನೀರನ್ನು ಬಳಕೆ ಮಾಡಿಕೊಂಡರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಹಾಗಾಗಿ ಈ ಬಗ್ಗೆ ಯಡಿಯೂರಪ್ಪ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

ತುಮಕೂರು ಜಿಲ್ಲೆ ಸದಾ ಬರಗಾಲಕ್ಕೆ ತುತ್ತಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಹತ್ತೂ ತಾಲೂಕುಗಳಲ್ಲಿ ಇದೆ. ನೀರಿಗೆ ಹಾಹಾಕಾರವಿದ್ದು ಹೇವಮಾತಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಹೇಮಾವತಿ ಜಲಾಶಯದಿಂದ ನೀರನ್ನು ಮೆಟ್ಟೂರು ಡ್ಯಾಂಗೆ ಹರಿಸಲಾಗುತ್ತಿದೆ. ಹೇಮಾವತಿ ಜಲಾಶಯದ ನೀರು ತಮಿಳು ನಾಡಿಗೆ ಮೀಸಲು ಎಂಬಂತೆ ಪರಿಗಣಿಸುತ್ತಿರುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ತುಮಕೂರು: ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ

ಮುಂಗಾರು ಸಮಯದಲ್ಲಿ ವ್ಯಾಪಕ ಮಳೆ ಸುರಿದರೆ ಜಲಾಶಯಗಳು ತುಂಬಿ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರುತ್ತದೆ. ಇದನ್ನು ತಪ್ಪಿಸಿ ವ್ಯರ್ಥವಾಗಿ ಹರಿಯುವ ನೀರನ್ನು ಬಳಸಿಕೊಳ್ಳಬೇಕು. ಅದಕ್ಕಾಗಿ ಮೇಕೆದಾಟು ಅಣೆ ನಿರ್ಮಾಣವಾಗಬೇಕು. ಆಗ ಹೇಮಾವತಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯಬಹುದು. ಹೇಮಾವತಿ ಜಲಾಶಯ ಆಶ್ರಿತ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಬಹುದು. ಇದೇ ಕಾರಣಕ್ಕೆ ಯಡಿಯೂರಪ್ಪ ಸರ್ಕಾರ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಒಪ್ಪಿಗೆ ಪಡೆಯಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶಿರಾ ಜನರಿಗೆ ಮಾತುಕೊಟ್ಟರು. ನೀರು ಹರಿಸುವ ಭರವಸೆ ನೀಡಿದರು. ಹೇಮಾವತಿ ನೀರು ಕೆಲವೇ ದಿನ ಹರಿಯಿತು. ಇದರಿಂದ ಮದಲೂರು ಕೆರೆಗೆ ನೀರು ಹರಿಯಲೇ ಇಲ್ಲ. ಮುಖ್ಯಮಂತ್ರಿಗಳು ಕೊಟ್ಟ ಮಾತು ಉಳಿಸಿಕೊಂಡಿದ್ದಾರೋ ಇಲ್ಲವೇ ವಚನ ಭ್ರಷ್ಟರಾಗಿದ್ದಾರೋ ಎಂಬುದು ಮುಂದಿನ ದಿನಗಳಲ್ಲಿ ಬಹಿರಂಗಗೊಳ್ಳಲಿದೆ ಎಂದು ಛೇಡಿಸದರು.


ಇದನ್ನೂ ಓದಿ: ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...