Homeಕರ್ನಾಟಕರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ- ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ

- Advertisement -
- Advertisement -

ಭಾರತ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ಮುಖಂಡರಾದ ವಿ.ಸುದರ್ಶನ್ ಮತ್ತು ಟಿ.ಬಿ.ಜಯಚಂದ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ತುಮಕೂರಿನಲ್ಲಿ ಮಾತನಾಡಿದ ಉಭಯ ಮುಖಂಡರು ಕೇಂದ್ರದ ಧೋರಣೆ ವಿರುದ್ಧ ವಾಗ್ದಾಳಿ ನಡೆಸಿದರು. “ರೈತ ಸಮುದಾಯ ಹಲವು  ಸಮಸ್ಯೆಗಳನ್ನು ಎದುರಿಸುತ್ತಿದೆ. ಸಂಕಷ್ಟಗಳ ನಡುವೆ ಜೀವನ ನಡೆಸುತ್ತಿದೆ. ಇಂತಹ ಸಂದರ್ಭ ಉಪಯೋಗಿಸಿಕೊಂಡು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿರುವುದು ಖಂಡನೀಯ” ಎಂದರು.

ಇದನ್ನೂ ಓದಿ: ತುಮಕೂರು: ಬೌದ್ಧ ಧರ್ಮ ಸ್ವೀಕಾರ ಮಾಡಿದ 250 ದಲಿತರು

“ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಕೃಷಿ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲು ತುದಿಗಾಲಲ್ಲಿ ನಿಂತಿದೆ. ಇದನ್ನು ನೋಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಿತ ಕಾಯುವುದಕ್ಕಿಂತ ಮಾರುಕಟ್ಟೆಯ ಹಿತ ಕಾಯಲು ಮುಂದಾಗಿದೆ. ಕೃಷಿ ಕಾಯ್ದೆಗಳ ಕುರಿತು ಚರ್ಚೆ ನಡೆಸಿದ್ದರೆ ಈ ಸಮಸ್ಯೆ ತಲೆದೋರುತ್ತಿರಲಿಲ್ಲ. ಅರ್ಧ ಸಮಸ್ಯೆ ಬಗೆಹರಿಯುತ್ತಿತ್ತು. ಆದರೆ ಕೇಂದ್ರ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ” ಎಂದು ಟೀಕಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಜನವರಿ 20ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ. ಇದಕ್ಕೂ ಬಗ್ಗದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ ಮಾತನಾಡಿ, “ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ” ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ:

“ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಚಾಲನೆ ನೀಡಲಾಯಿತು. ತಾಂತ್ರಿಕ ಪರಿಣತರು, ನೀರಾವರಿ ತಜ್ಞರು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಸಲಹೆ ಪಡೆದು 9 ಸಾವಿರ ಕೋಟಿ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕಳಿಸಿಕೊಟ್ಟೆವು. ನಂತರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪರಿಷ್ಕರಿಸಿ 20 ಸಾವಿರ ಕೋಟಿ ರೂ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳಿಸಿಕೊಟ್ಟರು. ಅದರ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತಿಲ್ಲ” ಎಂದು ದೂರಿದರು.

ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕು. ಮೇಕದಾಟು ಅಣೆಕಟ್ಟು ಕಟ್ಟಬೇಕು. ಇದರಿಂದ ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಸುಮಾರು 80 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು. ಈ ನೀರನ್ನು ಬಳಕೆ ಮಾಡಿಕೊಂಡರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಹಾಗಾಗಿ ಈ ಬಗ್ಗೆ ಯಡಿಯೂರಪ್ಪ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

ತುಮಕೂರು ಜಿಲ್ಲೆ ಸದಾ ಬರಗಾಲಕ್ಕೆ ತುತ್ತಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಹತ್ತೂ ತಾಲೂಕುಗಳಲ್ಲಿ ಇದೆ. ನೀರಿಗೆ ಹಾಹಾಕಾರವಿದ್ದು ಹೇವಮಾತಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಹೇಮಾವತಿ ಜಲಾಶಯದಿಂದ ನೀರನ್ನು ಮೆಟ್ಟೂರು ಡ್ಯಾಂಗೆ ಹರಿಸಲಾಗುತ್ತಿದೆ. ಹೇಮಾವತಿ ಜಲಾಶಯದ ನೀರು ತಮಿಳು ನಾಡಿಗೆ ಮೀಸಲು ಎಂಬಂತೆ ಪರಿಗಣಿಸುತ್ತಿರುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ತುಮಕೂರು: ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ

ಮುಂಗಾರು ಸಮಯದಲ್ಲಿ ವ್ಯಾಪಕ ಮಳೆ ಸುರಿದರೆ ಜಲಾಶಯಗಳು ತುಂಬಿ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರುತ್ತದೆ. ಇದನ್ನು ತಪ್ಪಿಸಿ ವ್ಯರ್ಥವಾಗಿ ಹರಿಯುವ ನೀರನ್ನು ಬಳಸಿಕೊಳ್ಳಬೇಕು. ಅದಕ್ಕಾಗಿ ಮೇಕೆದಾಟು ಅಣೆ ನಿರ್ಮಾಣವಾಗಬೇಕು. ಆಗ ಹೇಮಾವತಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯಬಹುದು. ಹೇಮಾವತಿ ಜಲಾಶಯ ಆಶ್ರಿತ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಬಹುದು. ಇದೇ ಕಾರಣಕ್ಕೆ ಯಡಿಯೂರಪ್ಪ ಸರ್ಕಾರ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಒಪ್ಪಿಗೆ ಪಡೆಯಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶಿರಾ ಜನರಿಗೆ ಮಾತುಕೊಟ್ಟರು. ನೀರು ಹರಿಸುವ ಭರವಸೆ ನೀಡಿದರು. ಹೇಮಾವತಿ ನೀರು ಕೆಲವೇ ದಿನ ಹರಿಯಿತು. ಇದರಿಂದ ಮದಲೂರು ಕೆರೆಗೆ ನೀರು ಹರಿಯಲೇ ಇಲ್ಲ. ಮುಖ್ಯಮಂತ್ರಿಗಳು ಕೊಟ್ಟ ಮಾತು ಉಳಿಸಿಕೊಂಡಿದ್ದಾರೋ ಇಲ್ಲವೇ ವಚನ ಭ್ರಷ್ಟರಾಗಿದ್ದಾರೋ ಎಂಬುದು ಮುಂದಿನ ದಿನಗಳಲ್ಲಿ ಬಹಿರಂಗಗೊಳ್ಳಲಿದೆ ಎಂದು ಛೇಡಿಸದರು.


ಇದನ್ನೂ ಓದಿ: ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...