Homeಕರ್ನಾಟಕರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ- ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ

- Advertisement -
- Advertisement -

ಭಾರತ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ಮುಖಂಡರಾದ ವಿ.ಸುದರ್ಶನ್ ಮತ್ತು ಟಿ.ಬಿ.ಜಯಚಂದ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ತುಮಕೂರಿನಲ್ಲಿ ಮಾತನಾಡಿದ ಉಭಯ ಮುಖಂಡರು ಕೇಂದ್ರದ ಧೋರಣೆ ವಿರುದ್ಧ ವಾಗ್ದಾಳಿ ನಡೆಸಿದರು. “ರೈತ ಸಮುದಾಯ ಹಲವು  ಸಮಸ್ಯೆಗಳನ್ನು ಎದುರಿಸುತ್ತಿದೆ. ಸಂಕಷ್ಟಗಳ ನಡುವೆ ಜೀವನ ನಡೆಸುತ್ತಿದೆ. ಇಂತಹ ಸಂದರ್ಭ ಉಪಯೋಗಿಸಿಕೊಂಡು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿರುವುದು ಖಂಡನೀಯ” ಎಂದರು.

ಇದನ್ನೂ ಓದಿ: ತುಮಕೂರು: ಬೌದ್ಧ ಧರ್ಮ ಸ್ವೀಕಾರ ಮಾಡಿದ 250 ದಲಿತರು

“ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಕೃಷಿ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲು ತುದಿಗಾಲಲ್ಲಿ ನಿಂತಿದೆ. ಇದನ್ನು ನೋಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಿತ ಕಾಯುವುದಕ್ಕಿಂತ ಮಾರುಕಟ್ಟೆಯ ಹಿತ ಕಾಯಲು ಮುಂದಾಗಿದೆ. ಕೃಷಿ ಕಾಯ್ದೆಗಳ ಕುರಿತು ಚರ್ಚೆ ನಡೆಸಿದ್ದರೆ ಈ ಸಮಸ್ಯೆ ತಲೆದೋರುತ್ತಿರಲಿಲ್ಲ. ಅರ್ಧ ಸಮಸ್ಯೆ ಬಗೆಹರಿಯುತ್ತಿತ್ತು. ಆದರೆ ಕೇಂದ್ರ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ” ಎಂದು ಟೀಕಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಜನವರಿ 20ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ. ಇದಕ್ಕೂ ಬಗ್ಗದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ ಮಾತನಾಡಿ, “ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ” ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ:

“ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಚಾಲನೆ ನೀಡಲಾಯಿತು. ತಾಂತ್ರಿಕ ಪರಿಣತರು, ನೀರಾವರಿ ತಜ್ಞರು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಸಲಹೆ ಪಡೆದು 9 ಸಾವಿರ ಕೋಟಿ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕಳಿಸಿಕೊಟ್ಟೆವು. ನಂತರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪರಿಷ್ಕರಿಸಿ 20 ಸಾವಿರ ಕೋಟಿ ರೂ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳಿಸಿಕೊಟ್ಟರು. ಅದರ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತಿಲ್ಲ” ಎಂದು ದೂರಿದರು.

ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕು. ಮೇಕದಾಟು ಅಣೆಕಟ್ಟು ಕಟ್ಟಬೇಕು. ಇದರಿಂದ ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಸುಮಾರು 80 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು. ಈ ನೀರನ್ನು ಬಳಕೆ ಮಾಡಿಕೊಂಡರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಹಾಗಾಗಿ ಈ ಬಗ್ಗೆ ಯಡಿಯೂರಪ್ಪ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

ತುಮಕೂರು ಜಿಲ್ಲೆ ಸದಾ ಬರಗಾಲಕ್ಕೆ ತುತ್ತಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಹತ್ತೂ ತಾಲೂಕುಗಳಲ್ಲಿ ಇದೆ. ನೀರಿಗೆ ಹಾಹಾಕಾರವಿದ್ದು ಹೇವಮಾತಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಹೇಮಾವತಿ ಜಲಾಶಯದಿಂದ ನೀರನ್ನು ಮೆಟ್ಟೂರು ಡ್ಯಾಂಗೆ ಹರಿಸಲಾಗುತ್ತಿದೆ. ಹೇಮಾವತಿ ಜಲಾಶಯದ ನೀರು ತಮಿಳು ನಾಡಿಗೆ ಮೀಸಲು ಎಂಬಂತೆ ಪರಿಗಣಿಸುತ್ತಿರುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ತುಮಕೂರು: ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ

ಮುಂಗಾರು ಸಮಯದಲ್ಲಿ ವ್ಯಾಪಕ ಮಳೆ ಸುರಿದರೆ ಜಲಾಶಯಗಳು ತುಂಬಿ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರುತ್ತದೆ. ಇದನ್ನು ತಪ್ಪಿಸಿ ವ್ಯರ್ಥವಾಗಿ ಹರಿಯುವ ನೀರನ್ನು ಬಳಸಿಕೊಳ್ಳಬೇಕು. ಅದಕ್ಕಾಗಿ ಮೇಕೆದಾಟು ಅಣೆ ನಿರ್ಮಾಣವಾಗಬೇಕು. ಆಗ ಹೇಮಾವತಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯಬಹುದು. ಹೇಮಾವತಿ ಜಲಾಶಯ ಆಶ್ರಿತ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಬಹುದು. ಇದೇ ಕಾರಣಕ್ಕೆ ಯಡಿಯೂರಪ್ಪ ಸರ್ಕಾರ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಒಪ್ಪಿಗೆ ಪಡೆಯಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶಿರಾ ಜನರಿಗೆ ಮಾತುಕೊಟ್ಟರು. ನೀರು ಹರಿಸುವ ಭರವಸೆ ನೀಡಿದರು. ಹೇಮಾವತಿ ನೀರು ಕೆಲವೇ ದಿನ ಹರಿಯಿತು. ಇದರಿಂದ ಮದಲೂರು ಕೆರೆಗೆ ನೀರು ಹರಿಯಲೇ ಇಲ್ಲ. ಮುಖ್ಯಮಂತ್ರಿಗಳು ಕೊಟ್ಟ ಮಾತು ಉಳಿಸಿಕೊಂಡಿದ್ದಾರೋ ಇಲ್ಲವೇ ವಚನ ಭ್ರಷ್ಟರಾಗಿದ್ದಾರೋ ಎಂಬುದು ಮುಂದಿನ ದಿನಗಳಲ್ಲಿ ಬಹಿರಂಗಗೊಳ್ಳಲಿದೆ ಎಂದು ಛೇಡಿಸದರು.


ಇದನ್ನೂ ಓದಿ: ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...