Homeಕರ್ನಾಟಕರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ- ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ

- Advertisement -
- Advertisement -

ಭಾರತ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ಮುಖಂಡರಾದ ವಿ.ಸುದರ್ಶನ್ ಮತ್ತು ಟಿ.ಬಿ.ಜಯಚಂದ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ತುಮಕೂರಿನಲ್ಲಿ ಮಾತನಾಡಿದ ಉಭಯ ಮುಖಂಡರು ಕೇಂದ್ರದ ಧೋರಣೆ ವಿರುದ್ಧ ವಾಗ್ದಾಳಿ ನಡೆಸಿದರು. “ರೈತ ಸಮುದಾಯ ಹಲವು  ಸಮಸ್ಯೆಗಳನ್ನು ಎದುರಿಸುತ್ತಿದೆ. ಸಂಕಷ್ಟಗಳ ನಡುವೆ ಜೀವನ ನಡೆಸುತ್ತಿದೆ. ಇಂತಹ ಸಂದರ್ಭ ಉಪಯೋಗಿಸಿಕೊಂಡು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿರುವುದು ಖಂಡನೀಯ” ಎಂದರು.

ಇದನ್ನೂ ಓದಿ: ತುಮಕೂರು: ಬೌದ್ಧ ಧರ್ಮ ಸ್ವೀಕಾರ ಮಾಡಿದ 250 ದಲಿತರು

“ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಕೃಷಿ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲು ತುದಿಗಾಲಲ್ಲಿ ನಿಂತಿದೆ. ಇದನ್ನು ನೋಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಿತ ಕಾಯುವುದಕ್ಕಿಂತ ಮಾರುಕಟ್ಟೆಯ ಹಿತ ಕಾಯಲು ಮುಂದಾಗಿದೆ. ಕೃಷಿ ಕಾಯ್ದೆಗಳ ಕುರಿತು ಚರ್ಚೆ ನಡೆಸಿದ್ದರೆ ಈ ಸಮಸ್ಯೆ ತಲೆದೋರುತ್ತಿರಲಿಲ್ಲ. ಅರ್ಧ ಸಮಸ್ಯೆ ಬಗೆಹರಿಯುತ್ತಿತ್ತು. ಆದರೆ ಕೇಂದ್ರ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ” ಎಂದು ಟೀಕಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಜನವರಿ 20ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ. ಇದಕ್ಕೂ ಬಗ್ಗದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ ಮಾತನಾಡಿ, “ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ” ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ:

“ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಚಾಲನೆ ನೀಡಲಾಯಿತು. ತಾಂತ್ರಿಕ ಪರಿಣತರು, ನೀರಾವರಿ ತಜ್ಞರು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಸಲಹೆ ಪಡೆದು 9 ಸಾವಿರ ಕೋಟಿ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕಳಿಸಿಕೊಟ್ಟೆವು. ನಂತರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪರಿಷ್ಕರಿಸಿ 20 ಸಾವಿರ ಕೋಟಿ ರೂ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳಿಸಿಕೊಟ್ಟರು. ಅದರ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತಿಲ್ಲ” ಎಂದು ದೂರಿದರು.

ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕು. ಮೇಕದಾಟು ಅಣೆಕಟ್ಟು ಕಟ್ಟಬೇಕು. ಇದರಿಂದ ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಸುಮಾರು 80 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು. ಈ ನೀರನ್ನು ಬಳಕೆ ಮಾಡಿಕೊಂಡರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಹಾಗಾಗಿ ಈ ಬಗ್ಗೆ ಯಡಿಯೂರಪ್ಪ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

ತುಮಕೂರು ಜಿಲ್ಲೆ ಸದಾ ಬರಗಾಲಕ್ಕೆ ತುತ್ತಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಹತ್ತೂ ತಾಲೂಕುಗಳಲ್ಲಿ ಇದೆ. ನೀರಿಗೆ ಹಾಹಾಕಾರವಿದ್ದು ಹೇವಮಾತಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಹೇಮಾವತಿ ಜಲಾಶಯದಿಂದ ನೀರನ್ನು ಮೆಟ್ಟೂರು ಡ್ಯಾಂಗೆ ಹರಿಸಲಾಗುತ್ತಿದೆ. ಹೇಮಾವತಿ ಜಲಾಶಯದ ನೀರು ತಮಿಳು ನಾಡಿಗೆ ಮೀಸಲು ಎಂಬಂತೆ ಪರಿಗಣಿಸುತ್ತಿರುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ತುಮಕೂರು: ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ

ಮುಂಗಾರು ಸಮಯದಲ್ಲಿ ವ್ಯಾಪಕ ಮಳೆ ಸುರಿದರೆ ಜಲಾಶಯಗಳು ತುಂಬಿ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರುತ್ತದೆ. ಇದನ್ನು ತಪ್ಪಿಸಿ ವ್ಯರ್ಥವಾಗಿ ಹರಿಯುವ ನೀರನ್ನು ಬಳಸಿಕೊಳ್ಳಬೇಕು. ಅದಕ್ಕಾಗಿ ಮೇಕೆದಾಟು ಅಣೆ ನಿರ್ಮಾಣವಾಗಬೇಕು. ಆಗ ಹೇಮಾವತಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯಬಹುದು. ಹೇಮಾವತಿ ಜಲಾಶಯ ಆಶ್ರಿತ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಬಹುದು. ಇದೇ ಕಾರಣಕ್ಕೆ ಯಡಿಯೂರಪ್ಪ ಸರ್ಕಾರ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಒಪ್ಪಿಗೆ ಪಡೆಯಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶಿರಾ ಜನರಿಗೆ ಮಾತುಕೊಟ್ಟರು. ನೀರು ಹರಿಸುವ ಭರವಸೆ ನೀಡಿದರು. ಹೇಮಾವತಿ ನೀರು ಕೆಲವೇ ದಿನ ಹರಿಯಿತು. ಇದರಿಂದ ಮದಲೂರು ಕೆರೆಗೆ ನೀರು ಹರಿಯಲೇ ಇಲ್ಲ. ಮುಖ್ಯಮಂತ್ರಿಗಳು ಕೊಟ್ಟ ಮಾತು ಉಳಿಸಿಕೊಂಡಿದ್ದಾರೋ ಇಲ್ಲವೇ ವಚನ ಭ್ರಷ್ಟರಾಗಿದ್ದಾರೋ ಎಂಬುದು ಮುಂದಿನ ದಿನಗಳಲ್ಲಿ ಬಹಿರಂಗಗೊಳ್ಳಲಿದೆ ಎಂದು ಛೇಡಿಸದರು.


ಇದನ್ನೂ ಓದಿ: ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...