Homeಕರ್ನಾಟಕರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ- ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ

- Advertisement -
- Advertisement -

ಭಾರತ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ಮುಖಂಡರಾದ ವಿ.ಸುದರ್ಶನ್ ಮತ್ತು ಟಿ.ಬಿ.ಜಯಚಂದ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ತುಮಕೂರಿನಲ್ಲಿ ಮಾತನಾಡಿದ ಉಭಯ ಮುಖಂಡರು ಕೇಂದ್ರದ ಧೋರಣೆ ವಿರುದ್ಧ ವಾಗ್ದಾಳಿ ನಡೆಸಿದರು. “ರೈತ ಸಮುದಾಯ ಹಲವು  ಸಮಸ್ಯೆಗಳನ್ನು ಎದುರಿಸುತ್ತಿದೆ. ಸಂಕಷ್ಟಗಳ ನಡುವೆ ಜೀವನ ನಡೆಸುತ್ತಿದೆ. ಇಂತಹ ಸಂದರ್ಭ ಉಪಯೋಗಿಸಿಕೊಂಡು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿರುವುದು ಖಂಡನೀಯ” ಎಂದರು.

ಇದನ್ನೂ ಓದಿ: ತುಮಕೂರು: ಬೌದ್ಧ ಧರ್ಮ ಸ್ವೀಕಾರ ಮಾಡಿದ 250 ದಲಿತರು

“ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಕೃಷಿ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲು ತುದಿಗಾಲಲ್ಲಿ ನಿಂತಿದೆ. ಇದನ್ನು ನೋಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಿತ ಕಾಯುವುದಕ್ಕಿಂತ ಮಾರುಕಟ್ಟೆಯ ಹಿತ ಕಾಯಲು ಮುಂದಾಗಿದೆ. ಕೃಷಿ ಕಾಯ್ದೆಗಳ ಕುರಿತು ಚರ್ಚೆ ನಡೆಸಿದ್ದರೆ ಈ ಸಮಸ್ಯೆ ತಲೆದೋರುತ್ತಿರಲಿಲ್ಲ. ಅರ್ಧ ಸಮಸ್ಯೆ ಬಗೆಹರಿಯುತ್ತಿತ್ತು. ಆದರೆ ಕೇಂದ್ರ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ” ಎಂದು ಟೀಕಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಜನವರಿ 20ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ. ಇದಕ್ಕೂ ಬಗ್ಗದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ಕಾಂಗ್ರೆಸ್ ವಕ್ತಾರ ಟಿ.ಬಿ.ಜಯಚಂದ್ರ ಮಾತನಾಡಿ, “ಸಿಡಿ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಸಿಡಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸಿಡಿ ವಿಷಯದ ಸದ್ದು ಜೋರಾಗಿಯೇ ಇದೆ. ವಿಶ್ವನಾಥ್ ಬಳಿಯೂ ಸಿಡಿ ಇರಬಹುದು. ಅದನ್ನು ಬಿಡುಗಡೆಗೊಳಿಸಲಿ” ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ:

“ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಚಾಲನೆ ನೀಡಲಾಯಿತು. ತಾಂತ್ರಿಕ ಪರಿಣತರು, ನೀರಾವರಿ ತಜ್ಞರು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಸಲಹೆ ಪಡೆದು 9 ಸಾವಿರ ಕೋಟಿ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕಳಿಸಿಕೊಟ್ಟೆವು. ನಂತರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪರಿಷ್ಕರಿಸಿ 20 ಸಾವಿರ ಕೋಟಿ ರೂ ಅಂದಾಜು ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳಿಸಿಕೊಟ್ಟರು. ಅದರ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತಿಲ್ಲ” ಎಂದು ದೂರಿದರು.

ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕು. ಮೇಕದಾಟು ಅಣೆಕಟ್ಟು ಕಟ್ಟಬೇಕು. ಇದರಿಂದ ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಸುಮಾರು 80 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು. ಈ ನೀರನ್ನು ಬಳಕೆ ಮಾಡಿಕೊಂಡರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಹಾಗಾಗಿ ಈ ಬಗ್ಗೆ ಯಡಿಯೂರಪ್ಪ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

ತುಮಕೂರು ಜಿಲ್ಲೆ ಸದಾ ಬರಗಾಲಕ್ಕೆ ತುತ್ತಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಹತ್ತೂ ತಾಲೂಕುಗಳಲ್ಲಿ ಇದೆ. ನೀರಿಗೆ ಹಾಹಾಕಾರವಿದ್ದು ಹೇವಮಾತಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಹೇಮಾವತಿ ಜಲಾಶಯದಿಂದ ನೀರನ್ನು ಮೆಟ್ಟೂರು ಡ್ಯಾಂಗೆ ಹರಿಸಲಾಗುತ್ತಿದೆ. ಹೇಮಾವತಿ ಜಲಾಶಯದ ನೀರು ತಮಿಳು ನಾಡಿಗೆ ಮೀಸಲು ಎಂಬಂತೆ ಪರಿಗಣಿಸುತ್ತಿರುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ತುಮಕೂರು: ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ

ಮುಂಗಾರು ಸಮಯದಲ್ಲಿ ವ್ಯಾಪಕ ಮಳೆ ಸುರಿದರೆ ಜಲಾಶಯಗಳು ತುಂಬಿ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರುತ್ತದೆ. ಇದನ್ನು ತಪ್ಪಿಸಿ ವ್ಯರ್ಥವಾಗಿ ಹರಿಯುವ ನೀರನ್ನು ಬಳಸಿಕೊಳ್ಳಬೇಕು. ಅದಕ್ಕಾಗಿ ಮೇಕೆದಾಟು ಅಣೆ ನಿರ್ಮಾಣವಾಗಬೇಕು. ಆಗ ಹೇಮಾವತಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯಬಹುದು. ಹೇಮಾವತಿ ಜಲಾಶಯ ಆಶ್ರಿತ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಬಹುದು. ಇದೇ ಕಾರಣಕ್ಕೆ ಯಡಿಯೂರಪ್ಪ ಸರ್ಕಾರ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಒಪ್ಪಿಗೆ ಪಡೆಯಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶಿರಾ ಜನರಿಗೆ ಮಾತುಕೊಟ್ಟರು. ನೀರು ಹರಿಸುವ ಭರವಸೆ ನೀಡಿದರು. ಹೇಮಾವತಿ ನೀರು ಕೆಲವೇ ದಿನ ಹರಿಯಿತು. ಇದರಿಂದ ಮದಲೂರು ಕೆರೆಗೆ ನೀರು ಹರಿಯಲೇ ಇಲ್ಲ. ಮುಖ್ಯಮಂತ್ರಿಗಳು ಕೊಟ್ಟ ಮಾತು ಉಳಿಸಿಕೊಂಡಿದ್ದಾರೋ ಇಲ್ಲವೇ ವಚನ ಭ್ರಷ್ಟರಾಗಿದ್ದಾರೋ ಎಂಬುದು ಮುಂದಿನ ದಿನಗಳಲ್ಲಿ ಬಹಿರಂಗಗೊಳ್ಳಲಿದೆ ಎಂದು ಛೇಡಿಸದರು.


ಇದನ್ನೂ ಓದಿ: ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...