Homeಮುಖಪುಟಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ...

ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

- Advertisement -
- Advertisement -

ಸೂರತ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ನೀಲೇಶ್ ಕುಂಭಾನಿ ಸೂರತ್‌ನಿಂದ ಲೋಕಸಭೆ ಸ್ಪರ್ಧೆಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಪಡೆದಿದ್ದರು. ಆದರೆ ಅವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ತಿರಸ್ಕರಿಸಿದ ಕಾರಣ ಭಾರತೀಯ ಜನತಾ ಪಕ್ಷದ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ನೀಲೇಶ್ ಕುಂಭಾನಿ ನಾಮಪತ್ರ ಸಲ್ಲಿಕೆ ವೇಳೆ ಅತ್ಯಂತ ನಿರ್ಲಕ್ಷ್ಯವಹಿಸಿದ್ದಾರೆ ಅಥವಾ ಬಿಜೆಪಿ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ನಿಮ್ಮ ನಾಮಪತ್ರದ ತಿರಸ್ಕಾರವು ನೀವು ಅತ್ಯಂತ ನಿರ್ಲಕ್ಷ್ಯವಹಿಸಿರುವುದು ಅಥವಾ ಬಿಜೆಪಿಯೊಂದಿಗೆ ಸಂಬಂಧವನ್ನು ಹೊಂದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಆದರೂ ನ್ಯಾಯದ ತತ್ವಗಳಿಗೆ ಅನುಸಾರವಾಗಿ, ಶಿಸ್ತು ಸಮಿತಿಯು ಅದರ ಮುಂದೆ ನಿಮ್ಮ ವಾದವನ್ನು ಮಂಡಿಸಲು ಸಾಕಷ್ಟು ಸಮಯವನ್ನು ಒದಗಿಸಿದೆ. ಪಕ್ಷಕ್ಕೆ ಯಾವುದೇ ವಿವರಣೆ ನೀಡದೆ ಏಕಾಏಕಿ ನಾಪತ್ತೆಯಾಗಿರುವುದು ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಶಿಸ್ತು ಸಮಿತಿ ಸದಸ್ಯ ಬಾಲುಭಾಯ್ ಪಟೇಲ್ ಸಹಿ ಹಾಕಿರುವ ಅಮಾನತು ಆದೇಶದಲ್ಲಿ ಹೇಳಲಾಗಿದೆ.

ಸೂರತ್‌ಗೆ ಸ್ಥಳಾಂತರಗೊಂಡಿರುವ ಸೌರಾಷ್ಟ್ರದ ಪಾಟಿದಾರ್ ಸಮುದಾಯದ ಜನರನ್ನು ಅವರು ಪ್ರತಿನಿಧಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ನೀಲೇಶ್ ಕುಂಭಾಣಿ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಲಾಗಿದೆ. ನಾಮಪತ್ರದ ತಿರಸ್ಕಾರ ಬೆಳವಣಿಗೆಯಿಂದ ಸೂರತ್‌ನ ಜನರು ಮತ್ತು ಪಕ್ಷದ ಕಾರ್ಯಕರ್ತರು ಕೋಪಗೊಂಡಿದ್ದಾರೆ ಮತ್ತು ತಮ್ಮ ಕೋಪವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮನ್ನು ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಕಾಂಗ್ರೆಸ್‌ನ ಶಿಸ್ತು ಸಮಿತಿ ಹೇಳಿದೆ.

ಸೂರತ್‌ನ ಮಾಜಿ ಕಾರ್ಪೊರೇಟರ್ ಕುಂಭಾನಿ ಅವರು 2022ರ ವಿಧಾನಸಭಾ ಚುನಾವಣೆಯಲ್ಲಿ ಸೂರತ್ ನಗರದ ಕಾಮ್ರೇಜ್‌ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ಮೂವರು ಅನುಮೋದಕರ ಸಹಿಗಳಲ್ಲಿ ವ್ಯತ್ಯಾಸದ ಕಾರಣದಿಂದ ಸೂರತ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಮತ್ತು ಜಿಲ್ಲಾಧಿಕಾರಿ ಸೌರಭ್ ಪರ್ಘಿ ಅವರು ತಿರಸ್ಕರಿಸಿದ್ದರು. ಇದೇ ರೀತಿ ಸೂರತ್‌ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನು ಕೂಡ ತಿರಸ್ಕರಿಸಲಾಗಿತ್ತು.

ಡಾಕ್ಯುಮೆಂಟ್‌ನಲ್ಲಿನ ಸಹಿಗಳು ತಮ್ಮದಲ್ಲ ಎಂದು ಆರೋಪಿಸಿ ಮೂವರು ಪ್ರಸ್ತಾವಕರು ಚುನಾವಣಾಧಿಕಾರಿಗೆ ಅಫಿಡವಿಟ್‌ಗಳನ್ನು ಸಲ್ಲಿಸಿದ ನಂತರ ಕುಂಭಾಣಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡ ನಂತರ, ಬಿಜೆಪಿಯು ಕಣದಲ್ಲಿದ್ದ ಉಳಿದ ಎಂಟು ಅಭ್ಯರ್ಥಿಗಳನ್ನು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಿದೆ, ಇದರ ಪರಿಣಾಮವಾಗಿ ಬಾಲುಭಾಯ್ ಪಟೇಲ್ ಅವಿರೋಧವಾಗಿ ಆಯ್ಕೆಯಾಗಿದ್ದರು.

ವೀಡಿಯೊ ಸಂದೇಶವೊಂದರಲ್ಲಿ ಕುಂಭಣಿ ಅವರು ನಾಪತ್ತೆಯಾಗಿರುವುದನ್ನು ನಿರಾಕರಿಸಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಹಲವಾರು ಹಿರಿಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದರು. ನನ್ನ ನಾಮಪತ್ರ ರದ್ದತಿಯನ್ನು ಪ್ರಶ್ನಿಸಿ ನಾನು ಅರ್ಜಿಯನ್ನು ಸಿದ್ಧಪಡಿಸಿದ್ದೆ ಮತ್ತು ಅದಕ್ಕಾಗಿ ಅಹಮದಾಬಾದ್‌ಗೆ ತೆರಳುತ್ತಿದ್ದಾಗ ಕೆಲವು ನಾಯಕರ ಪಿತೂರಿ ಮೇರೆಗೆ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ನನ್ನ ನಿವಾಸದ ಬಳಿ ಪ್ರತಿಭಟನೆ ನಡೆಸಿದರು ಎಂದು ಹೇಳಿದ್ದಾರೆ. ಪ್ರಚಾರದ ವೇಳೆ ಕೆಲ ಕಾಂಗ್ರೆಸ್ ನಾಯಕರು ತನಗೆ ಸಹಾಯ ಮಾಡಲಿಲ್ಲ ಎಂದು ಆರೋಪಿಸಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ನಾನು ಬದ್ಧನಾಗಿದ್ದೇನೆ, ನಾನು ಕಾಂಗ್ರೆಸ್‌ನ ನಿಷ್ಠಾವಂತ ಸದಸ್ಯನಾಗಿದ್ದೇನೆ ಮತ್ತು ಪಕ್ಷದಲ್ಲೇ ಉಳಿಯುತ್ತೇನೆ. ಪಕ್ಷದ ಉನ್ನತ ನಾಯಕತ್ವದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದರು.

ಇದನ್ನು ಓದಿ: 100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...