Homeಮುಖಪುಟಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ...

ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

- Advertisement -
- Advertisement -

ಸೂರತ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ನೀಲೇಶ್ ಕುಂಭಾನಿ ಸೂರತ್‌ನಿಂದ ಲೋಕಸಭೆ ಸ್ಪರ್ಧೆಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಪಡೆದಿದ್ದರು. ಆದರೆ ಅವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ತಿರಸ್ಕರಿಸಿದ ಕಾರಣ ಭಾರತೀಯ ಜನತಾ ಪಕ್ಷದ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ನೀಲೇಶ್ ಕುಂಭಾನಿ ನಾಮಪತ್ರ ಸಲ್ಲಿಕೆ ವೇಳೆ ಅತ್ಯಂತ ನಿರ್ಲಕ್ಷ್ಯವಹಿಸಿದ್ದಾರೆ ಅಥವಾ ಬಿಜೆಪಿ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ನಿಮ್ಮ ನಾಮಪತ್ರದ ತಿರಸ್ಕಾರವು ನೀವು ಅತ್ಯಂತ ನಿರ್ಲಕ್ಷ್ಯವಹಿಸಿರುವುದು ಅಥವಾ ಬಿಜೆಪಿಯೊಂದಿಗೆ ಸಂಬಂಧವನ್ನು ಹೊಂದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಆದರೂ ನ್ಯಾಯದ ತತ್ವಗಳಿಗೆ ಅನುಸಾರವಾಗಿ, ಶಿಸ್ತು ಸಮಿತಿಯು ಅದರ ಮುಂದೆ ನಿಮ್ಮ ವಾದವನ್ನು ಮಂಡಿಸಲು ಸಾಕಷ್ಟು ಸಮಯವನ್ನು ಒದಗಿಸಿದೆ. ಪಕ್ಷಕ್ಕೆ ಯಾವುದೇ ವಿವರಣೆ ನೀಡದೆ ಏಕಾಏಕಿ ನಾಪತ್ತೆಯಾಗಿರುವುದು ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಶಿಸ್ತು ಸಮಿತಿ ಸದಸ್ಯ ಬಾಲುಭಾಯ್ ಪಟೇಲ್ ಸಹಿ ಹಾಕಿರುವ ಅಮಾನತು ಆದೇಶದಲ್ಲಿ ಹೇಳಲಾಗಿದೆ.

ಸೂರತ್‌ಗೆ ಸ್ಥಳಾಂತರಗೊಂಡಿರುವ ಸೌರಾಷ್ಟ್ರದ ಪಾಟಿದಾರ್ ಸಮುದಾಯದ ಜನರನ್ನು ಅವರು ಪ್ರತಿನಿಧಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ನೀಲೇಶ್ ಕುಂಭಾಣಿ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಲಾಗಿದೆ. ನಾಮಪತ್ರದ ತಿರಸ್ಕಾರ ಬೆಳವಣಿಗೆಯಿಂದ ಸೂರತ್‌ನ ಜನರು ಮತ್ತು ಪಕ್ಷದ ಕಾರ್ಯಕರ್ತರು ಕೋಪಗೊಂಡಿದ್ದಾರೆ ಮತ್ತು ತಮ್ಮ ಕೋಪವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮನ್ನು ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಕಾಂಗ್ರೆಸ್‌ನ ಶಿಸ್ತು ಸಮಿತಿ ಹೇಳಿದೆ.

ಸೂರತ್‌ನ ಮಾಜಿ ಕಾರ್ಪೊರೇಟರ್ ಕುಂಭಾನಿ ಅವರು 2022ರ ವಿಧಾನಸಭಾ ಚುನಾವಣೆಯಲ್ಲಿ ಸೂರತ್ ನಗರದ ಕಾಮ್ರೇಜ್‌ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ಮೂವರು ಅನುಮೋದಕರ ಸಹಿಗಳಲ್ಲಿ ವ್ಯತ್ಯಾಸದ ಕಾರಣದಿಂದ ಸೂರತ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಮತ್ತು ಜಿಲ್ಲಾಧಿಕಾರಿ ಸೌರಭ್ ಪರ್ಘಿ ಅವರು ತಿರಸ್ಕರಿಸಿದ್ದರು. ಇದೇ ರೀತಿ ಸೂರತ್‌ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನು ಕೂಡ ತಿರಸ್ಕರಿಸಲಾಗಿತ್ತು.

ಡಾಕ್ಯುಮೆಂಟ್‌ನಲ್ಲಿನ ಸಹಿಗಳು ತಮ್ಮದಲ್ಲ ಎಂದು ಆರೋಪಿಸಿ ಮೂವರು ಪ್ರಸ್ತಾವಕರು ಚುನಾವಣಾಧಿಕಾರಿಗೆ ಅಫಿಡವಿಟ್‌ಗಳನ್ನು ಸಲ್ಲಿಸಿದ ನಂತರ ಕುಂಭಾಣಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡ ನಂತರ, ಬಿಜೆಪಿಯು ಕಣದಲ್ಲಿದ್ದ ಉಳಿದ ಎಂಟು ಅಭ್ಯರ್ಥಿಗಳನ್ನು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಿದೆ, ಇದರ ಪರಿಣಾಮವಾಗಿ ಬಾಲುಭಾಯ್ ಪಟೇಲ್ ಅವಿರೋಧವಾಗಿ ಆಯ್ಕೆಯಾಗಿದ್ದರು.

ವೀಡಿಯೊ ಸಂದೇಶವೊಂದರಲ್ಲಿ ಕುಂಭಣಿ ಅವರು ನಾಪತ್ತೆಯಾಗಿರುವುದನ್ನು ನಿರಾಕರಿಸಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಹಲವಾರು ಹಿರಿಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದರು. ನನ್ನ ನಾಮಪತ್ರ ರದ್ದತಿಯನ್ನು ಪ್ರಶ್ನಿಸಿ ನಾನು ಅರ್ಜಿಯನ್ನು ಸಿದ್ಧಪಡಿಸಿದ್ದೆ ಮತ್ತು ಅದಕ್ಕಾಗಿ ಅಹಮದಾಬಾದ್‌ಗೆ ತೆರಳುತ್ತಿದ್ದಾಗ ಕೆಲವು ನಾಯಕರ ಪಿತೂರಿ ಮೇರೆಗೆ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ನನ್ನ ನಿವಾಸದ ಬಳಿ ಪ್ರತಿಭಟನೆ ನಡೆಸಿದರು ಎಂದು ಹೇಳಿದ್ದಾರೆ. ಪ್ರಚಾರದ ವೇಳೆ ಕೆಲ ಕಾಂಗ್ರೆಸ್ ನಾಯಕರು ತನಗೆ ಸಹಾಯ ಮಾಡಲಿಲ್ಲ ಎಂದು ಆರೋಪಿಸಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ನಾನು ಬದ್ಧನಾಗಿದ್ದೇನೆ, ನಾನು ಕಾಂಗ್ರೆಸ್‌ನ ನಿಷ್ಠಾವಂತ ಸದಸ್ಯನಾಗಿದ್ದೇನೆ ಮತ್ತು ಪಕ್ಷದಲ್ಲೇ ಉಳಿಯುತ್ತೇನೆ. ಪಕ್ಷದ ಉನ್ನತ ನಾಯಕತ್ವದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದರು.

ಇದನ್ನು ಓದಿ: 100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...