Homeಮುಖಪುಟಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ...

ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

- Advertisement -
- Advertisement -

ಸೂರತ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ನೀಲೇಶ್ ಕುಂಭಾನಿ ಸೂರತ್‌ನಿಂದ ಲೋಕಸಭೆ ಸ್ಪರ್ಧೆಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಪಡೆದಿದ್ದರು. ಆದರೆ ಅವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ತಿರಸ್ಕರಿಸಿದ ಕಾರಣ ಭಾರತೀಯ ಜನತಾ ಪಕ್ಷದ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ನೀಲೇಶ್ ಕುಂಭಾನಿ ನಾಮಪತ್ರ ಸಲ್ಲಿಕೆ ವೇಳೆ ಅತ್ಯಂತ ನಿರ್ಲಕ್ಷ್ಯವಹಿಸಿದ್ದಾರೆ ಅಥವಾ ಬಿಜೆಪಿ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ನಿಮ್ಮ ನಾಮಪತ್ರದ ತಿರಸ್ಕಾರವು ನೀವು ಅತ್ಯಂತ ನಿರ್ಲಕ್ಷ್ಯವಹಿಸಿರುವುದು ಅಥವಾ ಬಿಜೆಪಿಯೊಂದಿಗೆ ಸಂಬಂಧವನ್ನು ಹೊಂದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಆದರೂ ನ್ಯಾಯದ ತತ್ವಗಳಿಗೆ ಅನುಸಾರವಾಗಿ, ಶಿಸ್ತು ಸಮಿತಿಯು ಅದರ ಮುಂದೆ ನಿಮ್ಮ ವಾದವನ್ನು ಮಂಡಿಸಲು ಸಾಕಷ್ಟು ಸಮಯವನ್ನು ಒದಗಿಸಿದೆ. ಪಕ್ಷಕ್ಕೆ ಯಾವುದೇ ವಿವರಣೆ ನೀಡದೆ ಏಕಾಏಕಿ ನಾಪತ್ತೆಯಾಗಿರುವುದು ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಶಿಸ್ತು ಸಮಿತಿ ಸದಸ್ಯ ಬಾಲುಭಾಯ್ ಪಟೇಲ್ ಸಹಿ ಹಾಕಿರುವ ಅಮಾನತು ಆದೇಶದಲ್ಲಿ ಹೇಳಲಾಗಿದೆ.

ಸೂರತ್‌ಗೆ ಸ್ಥಳಾಂತರಗೊಂಡಿರುವ ಸೌರಾಷ್ಟ್ರದ ಪಾಟಿದಾರ್ ಸಮುದಾಯದ ಜನರನ್ನು ಅವರು ಪ್ರತಿನಿಧಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ನೀಲೇಶ್ ಕುಂಭಾಣಿ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಲಾಗಿದೆ. ನಾಮಪತ್ರದ ತಿರಸ್ಕಾರ ಬೆಳವಣಿಗೆಯಿಂದ ಸೂರತ್‌ನ ಜನರು ಮತ್ತು ಪಕ್ಷದ ಕಾರ್ಯಕರ್ತರು ಕೋಪಗೊಂಡಿದ್ದಾರೆ ಮತ್ತು ತಮ್ಮ ಕೋಪವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮನ್ನು ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಕಾಂಗ್ರೆಸ್‌ನ ಶಿಸ್ತು ಸಮಿತಿ ಹೇಳಿದೆ.

ಸೂರತ್‌ನ ಮಾಜಿ ಕಾರ್ಪೊರೇಟರ್ ಕುಂಭಾನಿ ಅವರು 2022ರ ವಿಧಾನಸಭಾ ಚುನಾವಣೆಯಲ್ಲಿ ಸೂರತ್ ನಗರದ ಕಾಮ್ರೇಜ್‌ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ಮೂವರು ಅನುಮೋದಕರ ಸಹಿಗಳಲ್ಲಿ ವ್ಯತ್ಯಾಸದ ಕಾರಣದಿಂದ ಸೂರತ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಮತ್ತು ಜಿಲ್ಲಾಧಿಕಾರಿ ಸೌರಭ್ ಪರ್ಘಿ ಅವರು ತಿರಸ್ಕರಿಸಿದ್ದರು. ಇದೇ ರೀತಿ ಸೂರತ್‌ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನು ಕೂಡ ತಿರಸ್ಕರಿಸಲಾಗಿತ್ತು.

ಡಾಕ್ಯುಮೆಂಟ್‌ನಲ್ಲಿನ ಸಹಿಗಳು ತಮ್ಮದಲ್ಲ ಎಂದು ಆರೋಪಿಸಿ ಮೂವರು ಪ್ರಸ್ತಾವಕರು ಚುನಾವಣಾಧಿಕಾರಿಗೆ ಅಫಿಡವಿಟ್‌ಗಳನ್ನು ಸಲ್ಲಿಸಿದ ನಂತರ ಕುಂಭಾಣಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡ ನಂತರ, ಬಿಜೆಪಿಯು ಕಣದಲ್ಲಿದ್ದ ಉಳಿದ ಎಂಟು ಅಭ್ಯರ್ಥಿಗಳನ್ನು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಿದೆ, ಇದರ ಪರಿಣಾಮವಾಗಿ ಬಾಲುಭಾಯ್ ಪಟೇಲ್ ಅವಿರೋಧವಾಗಿ ಆಯ್ಕೆಯಾಗಿದ್ದರು.

ವೀಡಿಯೊ ಸಂದೇಶವೊಂದರಲ್ಲಿ ಕುಂಭಣಿ ಅವರು ನಾಪತ್ತೆಯಾಗಿರುವುದನ್ನು ನಿರಾಕರಿಸಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಹಲವಾರು ಹಿರಿಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದರು. ನನ್ನ ನಾಮಪತ್ರ ರದ್ದತಿಯನ್ನು ಪ್ರಶ್ನಿಸಿ ನಾನು ಅರ್ಜಿಯನ್ನು ಸಿದ್ಧಪಡಿಸಿದ್ದೆ ಮತ್ತು ಅದಕ್ಕಾಗಿ ಅಹಮದಾಬಾದ್‌ಗೆ ತೆರಳುತ್ತಿದ್ದಾಗ ಕೆಲವು ನಾಯಕರ ಪಿತೂರಿ ಮೇರೆಗೆ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ನನ್ನ ನಿವಾಸದ ಬಳಿ ಪ್ರತಿಭಟನೆ ನಡೆಸಿದರು ಎಂದು ಹೇಳಿದ್ದಾರೆ. ಪ್ರಚಾರದ ವೇಳೆ ಕೆಲ ಕಾಂಗ್ರೆಸ್ ನಾಯಕರು ತನಗೆ ಸಹಾಯ ಮಾಡಲಿಲ್ಲ ಎಂದು ಆರೋಪಿಸಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ನಾನು ಬದ್ಧನಾಗಿದ್ದೇನೆ, ನಾನು ಕಾಂಗ್ರೆಸ್‌ನ ನಿಷ್ಠಾವಂತ ಸದಸ್ಯನಾಗಿದ್ದೇನೆ ಮತ್ತು ಪಕ್ಷದಲ್ಲೇ ಉಳಿಯುತ್ತೇನೆ. ಪಕ್ಷದ ಉನ್ನತ ನಾಯಕತ್ವದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದರು.

ಇದನ್ನು ಓದಿ: 100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...