Homeಮುಖಪುಟಲೈಂಗಿಕ ಕಿರುಕುಳ ಆರೋಪ: ಶಾಸಕ ರಾಹುಲ್ ಮಾಂಕೂಟತ್ತಿಲ್ ಕಾಂಗ್ರೆಸ್‌ನಿಂದ ಅಮಾನತು

ಲೈಂಗಿಕ ಕಿರುಕುಳ ಆರೋಪ: ಶಾಸಕ ರಾಹುಲ್ ಮಾಂಕೂಟತ್ತಿಲ್ ಕಾಂಗ್ರೆಸ್‌ನಿಂದ ಅಮಾನತು

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎಂದು ಸೋಮವಾರ (ಆ.25) ವರದಿಯಾಗಿದೆ.

ತ್ರಿಶೂರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ. ಮುರಳೀಧರನ್ ರಾಹುಲ್ ವಿರುದ್ದ ಶಿಸ್ತು ಕ್ರಮ ಕೈಗೊಂಡಿರುವುದನ್ನು ದೃಢಪಡಿಸಿದ್ದಾರೆ.

ಆದಾಗ್ಯೂ, ರಾಹುಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದನ್ನು ಖಚಿತಪಡಿಸುವ ಯಾವುದೇ  ಅಧಿಕೃತ ಪ್ರಕಟಣೆಯನ್ನು ಕೆಪಿಸಿಸಿ ಇನ್ನೂ ಬಿಡುಗಡೆ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷ, ಶಾಸಕ ಸನ್ನಿ ಜೋಸೆಫ್ ಅವರು ಮಧ್ಯಾಹ್ನ ಕಣ್ಣೂರಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದಾರೆ.

“ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾಯಿತರಾದ ರಾಹುಲ್ ಅವರು, ಶಾಸಕ ಸ್ಥಾನದಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುವುದನ್ನು ಅವರೇ ನಿರ್ಧರಿಸಬೇಕು” ಎಂದು ಮುರಳೀಧರನ್ ಹೇಳಿದ್ದಾರೆ.

“ರಾಹುಲ್ ಅವರು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದಿರುವುದು ಅವರ ವಿರುದ್ದ ಪಕ್ಷ ಕೈಗೊಂಡಿರುವ ಮೊದಲ ಕ್ರಮ, ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದು ಎರಡನೇ ಕ್ರಮ, ಮುಂದೆ ಇನ್ನೂ ಹೆಚ್ಚಿನ ಆರೋಪಗಳು ಕೇಳಿ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೇರಿದಂತೆ ಮೂರನೇ ಕ್ರಮವೂ ಪಕ್ಷ ತೆಗೆದುಕೊಳ್ಳಲಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಅನ್ನು ದೂಷಿಸಲು ಯಾರಿಗೂ ಅವಕಾಶವಿಲ್ಲ. ಏಕೆಂದರೆ, ಇಂತಹ ಪ್ರಕರಣಗಳಲ್ಲಿ ಯಾವುದೇ ಪಕ್ಷವೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ” ಎಂದು ಮುರಳೀಧರನ್ ತಿಳಿಸಿದ್ದಾರೆ.

“ರಾಹುಲ್ ವಿರುದ್ಧದ ಆರೋಪಗಳ ಬಗ್ಗೆ ಪಕ್ಷವು ಆಂತರಿಕ ಪರಿಶೀಲನೆ ನಡೆಸಲಿದೆ. ರಾಹುಲ್ ಅವರಿಗೂ ಉತ್ತರ ನೀಡಲು ಅವಕಾಶ ನೀಡಲಿದೆ” ಎಂದು ಮುರಳೀಧರನ್ ಹೇಳಿದ್ದಾರೆ.

ಪಾಲಕ್ಕಾಡ್‌ನ ಉಪಚುನಾವಣೆಯ ಬಗ್ಗೆ ಕಾಂಗ್ರೆಸ್‌ಗೆ ಚಿಂತೆಯಿಲ್ಲ. ಅಲ್ಲಿ ಬಿಜೆಪಿ ಮತ್ತು ಯುಡಿಎಫ್‌ ನಡುವೇ ಸ್ಪರ್ಧೆಯಿದೆ ಎಂದು ಮುರಳೀಧರನ್ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಅಷ್ಟೇನು ಪ್ರಬಲವಾಗಿಲ್ಲ. ಚುನಾವಣೆ ನಡೆದರೆ ಯುಡಿಎಫ್‌ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಹುಲ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಕ್ಕಾಗಿ ಶಾಸಕಿ ಉಮಾ ಥಾಮಸ್ ಅವರ ವಿರುದ್ಧದ ಸೈಬರ್ ದಾಳಿಯನ್ನು ಮುರಳೀಧರನ್ ಖಂಡಿಸಿದ್ದು, “ಉಮಾ ಥಾಮಸ್ ಕೇರಳದ ಮಹಿಳೆಯರ ಪರ ಮಾತನಾಡಿದ್ದಾರೆ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ: “ಮೂರು ವರ್ಷಗಳ ಹಿಂದೆ ಕೇರಳದ ಯುವ ರಾಜಕಾರಣಿಯೊಬ್ಬರು ತನಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್ ಕೋಣೆಗೆ ಆಹ್ವಾನಿಸಿದ್ದರು” ಎಂದು ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಅವರು ಆಗಸ್ಟ್ 20ರಂದು ಆರೋಪಿಸಿದ್ದರು.

ರಿನಿ ಆರೋಪ ಮಾಡುವಾಗ ಯುವ ರಾಜಕಾರಣಿ ರಾಹುಲ್ ಮಾಂಕೂಟತ್ತಿಲ್ ಎಂದು ಹೇಳಿರಲಿಲ್ಲ. ಆದರೆ, ಪಾಲಕ್ಕಾಡ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಘಟಕದ ನಾಯಕರು ರಿನಿ ಆರೋಪ ಮಾಡಿರುವುದು ರಾಹುಲ್ ವಿರುದ್ದವೇ ಎಂದಿದ್ದರು.

ರಿನಿ ಆರೋಪ ಬೆನ್ನಲ್ಲೇ ಮಲಯಾಳಂ ಬರಗಾರ್ತಿ ಹನಿ ಭಾಸ್ಕರನ್ ಕೂಡ ರಾಹುಲ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. “ತಾನು ಶ್ರೀಲಂಕಾದಲ್ಲಿದ್ದಾಗ ರಾಹುಲ್ ಇನ್‌ಸ್ಟಾಗ್ರಾಮ್ ಮೂಲಕ ಸಂಭಾಷಣೆ ಆರಂಭಿಸಿದ್ದರು. ನಂತರ, ಖಾಸಗಿ ವಿಷಯಗಳನ್ನು ಹಂಚಿಕೊಳ್ಳಲು ಶುರು ಮಾಡಿದ್ದರು. ಈ ಬಗ್ಗೆ ಅವರ ಗೆಳೆಯರಲ್ಲಿ ಹೇಳಿಕೊಂಡು ತನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಹನಿ ಭಾಸ್ಕರನ್ ಸಾರ್ವಜನಿಕವಾಗಿ ಆರೋಪಿಸಿದ್ದರು.

ರಾಹುಲ್ ವಿರುದ್ದದ ಈ  ಗಂಭೀರ ಆರೋಪಗಳು ಯುವ ಕಾಂಗ್ರೆಸ್‌ನೊಳಗೆ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ವಿ ಸ್ನೇಹಾ ಮತ್ತು ಉಪಾಧ್ಯಕ್ಷ ವಿಷ್ಣು ಸುನಿಲ್ ಪಂದಲಂ ಸೇರಿದಂತೆ ಹಲವಾರು ನಾಯಕರು ರಾಹುಲ್ ರಾಜೀನಾಮೆಗೆ ಒತ್ತಾಯಿಸಿದ್ದರು. ಶಾಸಕ ಚಾಂಡಿ ಉಮ್ಮನ್ ಅವರ ಬೆಂಬಲಿಗರು ಕೂಡ ರಾಹುಲ್ ಅವರನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದ್ದರು.

ತನ್ನ ವಿರುದ್ದ ಆರೋಪ ರಾಜ್ಯದಾಧ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದಂತೆ ರಾಹುಲ್ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗುರುವಾರ (ಆ.21) ರಾಜೀನಾಮೆ ನೀಡಿದ್ದರು.

ಯುವ ಕಾಂಗ್ರೆಸ್‌ನೊಳಗೆ ಒತ್ತಡ ಹೆಚ್ಚಾದ ಹಿನ್ನೆಲೆ ಮತ್ತು ಹಿರಿಯ ನಾಯಕರಿಂದ ತೀವ್ರ ಟೀಕೆ ವ್ಯಕ್ತವಾದ ಕಾರಣ ಕಾಂಗ್ರೆಸ್ ನಾಯಕತ್ವವು ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ರಾಹುಲ್ ಅವರಿಗೆ ಸೂಚಿಸಿದೆ ಎಂದು ವರದಿಯಾಗಿತ್ತು. ಇದೀಗ ಅವರನ್ನು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಮಾತುಗೊಳಿಸಿರುವ ಬಗ್ಗೆ ಮುರಳೀಧರನ್‌ ಹೇಳಿಕೆ ನೀಡಿದ್ದಾರೆ.

ಬಿಹಾರ ವಿಶೇಷ ತೀವ್ರ ಪರಿಷ್ಕರಣೆ: ಶೇ. 98.2ರಷ್ಟು ದಾಖಲೆಗಳ ಸಂಗ್ರಹ ಮುಕ್ತಾಯ- ಚುನಾವಣಾ ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...