Homeಮುಖಪುಟಲೈಂಗಿಕ ಕಿರುಕುಳ ಆರೋಪ: ಶಾಸಕ ರಾಹುಲ್ ಮಾಂಕೂಟತ್ತಿಲ್ ಕಾಂಗ್ರೆಸ್‌ನಿಂದ ಅಮಾನತು

ಲೈಂಗಿಕ ಕಿರುಕುಳ ಆರೋಪ: ಶಾಸಕ ರಾಹುಲ್ ಮಾಂಕೂಟತ್ತಿಲ್ ಕಾಂಗ್ರೆಸ್‌ನಿಂದ ಅಮಾನತು

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎಂದು ಸೋಮವಾರ (ಆ.25) ವರದಿಯಾಗಿದೆ.

ತ್ರಿಶೂರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ. ಮುರಳೀಧರನ್ ರಾಹುಲ್ ವಿರುದ್ದ ಶಿಸ್ತು ಕ್ರಮ ಕೈಗೊಂಡಿರುವುದನ್ನು ದೃಢಪಡಿಸಿದ್ದಾರೆ.

ಆದಾಗ್ಯೂ, ರಾಹುಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದನ್ನು ಖಚಿತಪಡಿಸುವ ಯಾವುದೇ  ಅಧಿಕೃತ ಪ್ರಕಟಣೆಯನ್ನು ಕೆಪಿಸಿಸಿ ಇನ್ನೂ ಬಿಡುಗಡೆ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷ, ಶಾಸಕ ಸನ್ನಿ ಜೋಸೆಫ್ ಅವರು ಮಧ್ಯಾಹ್ನ ಕಣ್ಣೂರಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದಾರೆ.

“ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾಯಿತರಾದ ರಾಹುಲ್ ಅವರು, ಶಾಸಕ ಸ್ಥಾನದಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುವುದನ್ನು ಅವರೇ ನಿರ್ಧರಿಸಬೇಕು” ಎಂದು ಮುರಳೀಧರನ್ ಹೇಳಿದ್ದಾರೆ.

“ರಾಹುಲ್ ಅವರು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದಿರುವುದು ಅವರ ವಿರುದ್ದ ಪಕ್ಷ ಕೈಗೊಂಡಿರುವ ಮೊದಲ ಕ್ರಮ, ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದು ಎರಡನೇ ಕ್ರಮ, ಮುಂದೆ ಇನ್ನೂ ಹೆಚ್ಚಿನ ಆರೋಪಗಳು ಕೇಳಿ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೇರಿದಂತೆ ಮೂರನೇ ಕ್ರಮವೂ ಪಕ್ಷ ತೆಗೆದುಕೊಳ್ಳಲಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಅನ್ನು ದೂಷಿಸಲು ಯಾರಿಗೂ ಅವಕಾಶವಿಲ್ಲ. ಏಕೆಂದರೆ, ಇಂತಹ ಪ್ರಕರಣಗಳಲ್ಲಿ ಯಾವುದೇ ಪಕ್ಷವೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ” ಎಂದು ಮುರಳೀಧರನ್ ತಿಳಿಸಿದ್ದಾರೆ.

“ರಾಹುಲ್ ವಿರುದ್ಧದ ಆರೋಪಗಳ ಬಗ್ಗೆ ಪಕ್ಷವು ಆಂತರಿಕ ಪರಿಶೀಲನೆ ನಡೆಸಲಿದೆ. ರಾಹುಲ್ ಅವರಿಗೂ ಉತ್ತರ ನೀಡಲು ಅವಕಾಶ ನೀಡಲಿದೆ” ಎಂದು ಮುರಳೀಧರನ್ ಹೇಳಿದ್ದಾರೆ.

ಪಾಲಕ್ಕಾಡ್‌ನ ಉಪಚುನಾವಣೆಯ ಬಗ್ಗೆ ಕಾಂಗ್ರೆಸ್‌ಗೆ ಚಿಂತೆಯಿಲ್ಲ. ಅಲ್ಲಿ ಬಿಜೆಪಿ ಮತ್ತು ಯುಡಿಎಫ್‌ ನಡುವೇ ಸ್ಪರ್ಧೆಯಿದೆ ಎಂದು ಮುರಳೀಧರನ್ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಅಷ್ಟೇನು ಪ್ರಬಲವಾಗಿಲ್ಲ. ಚುನಾವಣೆ ನಡೆದರೆ ಯುಡಿಎಫ್‌ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಹುಲ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಕ್ಕಾಗಿ ಶಾಸಕಿ ಉಮಾ ಥಾಮಸ್ ಅವರ ವಿರುದ್ಧದ ಸೈಬರ್ ದಾಳಿಯನ್ನು ಮುರಳೀಧರನ್ ಖಂಡಿಸಿದ್ದು, “ಉಮಾ ಥಾಮಸ್ ಕೇರಳದ ಮಹಿಳೆಯರ ಪರ ಮಾತನಾಡಿದ್ದಾರೆ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ: “ಮೂರು ವರ್ಷಗಳ ಹಿಂದೆ ಕೇರಳದ ಯುವ ರಾಜಕಾರಣಿಯೊಬ್ಬರು ತನಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್ ಕೋಣೆಗೆ ಆಹ್ವಾನಿಸಿದ್ದರು” ಎಂದು ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಅವರು ಆಗಸ್ಟ್ 20ರಂದು ಆರೋಪಿಸಿದ್ದರು.

ರಿನಿ ಆರೋಪ ಮಾಡುವಾಗ ಯುವ ರಾಜಕಾರಣಿ ರಾಹುಲ್ ಮಾಂಕೂಟತ್ತಿಲ್ ಎಂದು ಹೇಳಿರಲಿಲ್ಲ. ಆದರೆ, ಪಾಲಕ್ಕಾಡ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಘಟಕದ ನಾಯಕರು ರಿನಿ ಆರೋಪ ಮಾಡಿರುವುದು ರಾಹುಲ್ ವಿರುದ್ದವೇ ಎಂದಿದ್ದರು.

ರಿನಿ ಆರೋಪ ಬೆನ್ನಲ್ಲೇ ಮಲಯಾಳಂ ಬರಗಾರ್ತಿ ಹನಿ ಭಾಸ್ಕರನ್ ಕೂಡ ರಾಹುಲ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. “ತಾನು ಶ್ರೀಲಂಕಾದಲ್ಲಿದ್ದಾಗ ರಾಹುಲ್ ಇನ್‌ಸ್ಟಾಗ್ರಾಮ್ ಮೂಲಕ ಸಂಭಾಷಣೆ ಆರಂಭಿಸಿದ್ದರು. ನಂತರ, ಖಾಸಗಿ ವಿಷಯಗಳನ್ನು ಹಂಚಿಕೊಳ್ಳಲು ಶುರು ಮಾಡಿದ್ದರು. ಈ ಬಗ್ಗೆ ಅವರ ಗೆಳೆಯರಲ್ಲಿ ಹೇಳಿಕೊಂಡು ತನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಹನಿ ಭಾಸ್ಕರನ್ ಸಾರ್ವಜನಿಕವಾಗಿ ಆರೋಪಿಸಿದ್ದರು.

ರಾಹುಲ್ ವಿರುದ್ದದ ಈ  ಗಂಭೀರ ಆರೋಪಗಳು ಯುವ ಕಾಂಗ್ರೆಸ್‌ನೊಳಗೆ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ವಿ ಸ್ನೇಹಾ ಮತ್ತು ಉಪಾಧ್ಯಕ್ಷ ವಿಷ್ಣು ಸುನಿಲ್ ಪಂದಲಂ ಸೇರಿದಂತೆ ಹಲವಾರು ನಾಯಕರು ರಾಹುಲ್ ರಾಜೀನಾಮೆಗೆ ಒತ್ತಾಯಿಸಿದ್ದರು. ಶಾಸಕ ಚಾಂಡಿ ಉಮ್ಮನ್ ಅವರ ಬೆಂಬಲಿಗರು ಕೂಡ ರಾಹುಲ್ ಅವರನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದ್ದರು.

ತನ್ನ ವಿರುದ್ದ ಆರೋಪ ರಾಜ್ಯದಾಧ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದಂತೆ ರಾಹುಲ್ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗುರುವಾರ (ಆ.21) ರಾಜೀನಾಮೆ ನೀಡಿದ್ದರು.

ಯುವ ಕಾಂಗ್ರೆಸ್‌ನೊಳಗೆ ಒತ್ತಡ ಹೆಚ್ಚಾದ ಹಿನ್ನೆಲೆ ಮತ್ತು ಹಿರಿಯ ನಾಯಕರಿಂದ ತೀವ್ರ ಟೀಕೆ ವ್ಯಕ್ತವಾದ ಕಾರಣ ಕಾಂಗ್ರೆಸ್ ನಾಯಕತ್ವವು ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ರಾಹುಲ್ ಅವರಿಗೆ ಸೂಚಿಸಿದೆ ಎಂದು ವರದಿಯಾಗಿತ್ತು. ಇದೀಗ ಅವರನ್ನು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಮಾತುಗೊಳಿಸಿರುವ ಬಗ್ಗೆ ಮುರಳೀಧರನ್‌ ಹೇಳಿಕೆ ನೀಡಿದ್ದಾರೆ.

ಬಿಹಾರ ವಿಶೇಷ ತೀವ್ರ ಪರಿಷ್ಕರಣೆ: ಶೇ. 98.2ರಷ್ಟು ದಾಖಲೆಗಳ ಸಂಗ್ರಹ ಮುಕ್ತಾಯ- ಚುನಾವಣಾ ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...