Homeಮುಖಪುಟಲೈಂಗಿಕ ಕಿರುಕುಳ ಆರೋಪ: ಶಾಸಕ ರಾಹುಲ್ ಮಾಂಕೂಟತ್ತಿಲ್ ಕಾಂಗ್ರೆಸ್‌ನಿಂದ ಅಮಾನತು

ಲೈಂಗಿಕ ಕಿರುಕುಳ ಆರೋಪ: ಶಾಸಕ ರಾಹುಲ್ ಮಾಂಕೂಟತ್ತಿಲ್ ಕಾಂಗ್ರೆಸ್‌ನಿಂದ ಅಮಾನತು

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎಂದು ಸೋಮವಾರ (ಆ.25) ವರದಿಯಾಗಿದೆ.

ತ್ರಿಶೂರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ. ಮುರಳೀಧರನ್ ರಾಹುಲ್ ವಿರುದ್ದ ಶಿಸ್ತು ಕ್ರಮ ಕೈಗೊಂಡಿರುವುದನ್ನು ದೃಢಪಡಿಸಿದ್ದಾರೆ.

ಆದಾಗ್ಯೂ, ರಾಹುಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದನ್ನು ಖಚಿತಪಡಿಸುವ ಯಾವುದೇ  ಅಧಿಕೃತ ಪ್ರಕಟಣೆಯನ್ನು ಕೆಪಿಸಿಸಿ ಇನ್ನೂ ಬಿಡುಗಡೆ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷ, ಶಾಸಕ ಸನ್ನಿ ಜೋಸೆಫ್ ಅವರು ಮಧ್ಯಾಹ್ನ ಕಣ್ಣೂರಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದಾರೆ.

“ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾಯಿತರಾದ ರಾಹುಲ್ ಅವರು, ಶಾಸಕ ಸ್ಥಾನದಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುವುದನ್ನು ಅವರೇ ನಿರ್ಧರಿಸಬೇಕು” ಎಂದು ಮುರಳೀಧರನ್ ಹೇಳಿದ್ದಾರೆ.

“ರಾಹುಲ್ ಅವರು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದಿರುವುದು ಅವರ ವಿರುದ್ದ ಪಕ್ಷ ಕೈಗೊಂಡಿರುವ ಮೊದಲ ಕ್ರಮ, ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದು ಎರಡನೇ ಕ್ರಮ, ಮುಂದೆ ಇನ್ನೂ ಹೆಚ್ಚಿನ ಆರೋಪಗಳು ಕೇಳಿ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೇರಿದಂತೆ ಮೂರನೇ ಕ್ರಮವೂ ಪಕ್ಷ ತೆಗೆದುಕೊಳ್ಳಲಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಅನ್ನು ದೂಷಿಸಲು ಯಾರಿಗೂ ಅವಕಾಶವಿಲ್ಲ. ಏಕೆಂದರೆ, ಇಂತಹ ಪ್ರಕರಣಗಳಲ್ಲಿ ಯಾವುದೇ ಪಕ್ಷವೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ” ಎಂದು ಮುರಳೀಧರನ್ ತಿಳಿಸಿದ್ದಾರೆ.

“ರಾಹುಲ್ ವಿರುದ್ಧದ ಆರೋಪಗಳ ಬಗ್ಗೆ ಪಕ್ಷವು ಆಂತರಿಕ ಪರಿಶೀಲನೆ ನಡೆಸಲಿದೆ. ರಾಹುಲ್ ಅವರಿಗೂ ಉತ್ತರ ನೀಡಲು ಅವಕಾಶ ನೀಡಲಿದೆ” ಎಂದು ಮುರಳೀಧರನ್ ಹೇಳಿದ್ದಾರೆ.

ಪಾಲಕ್ಕಾಡ್‌ನ ಉಪಚುನಾವಣೆಯ ಬಗ್ಗೆ ಕಾಂಗ್ರೆಸ್‌ಗೆ ಚಿಂತೆಯಿಲ್ಲ. ಅಲ್ಲಿ ಬಿಜೆಪಿ ಮತ್ತು ಯುಡಿಎಫ್‌ ನಡುವೇ ಸ್ಪರ್ಧೆಯಿದೆ ಎಂದು ಮುರಳೀಧರನ್ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಅಷ್ಟೇನು ಪ್ರಬಲವಾಗಿಲ್ಲ. ಚುನಾವಣೆ ನಡೆದರೆ ಯುಡಿಎಫ್‌ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಹುಲ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಕ್ಕಾಗಿ ಶಾಸಕಿ ಉಮಾ ಥಾಮಸ್ ಅವರ ವಿರುದ್ಧದ ಸೈಬರ್ ದಾಳಿಯನ್ನು ಮುರಳೀಧರನ್ ಖಂಡಿಸಿದ್ದು, “ಉಮಾ ಥಾಮಸ್ ಕೇರಳದ ಮಹಿಳೆಯರ ಪರ ಮಾತನಾಡಿದ್ದಾರೆ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ: “ಮೂರು ವರ್ಷಗಳ ಹಿಂದೆ ಕೇರಳದ ಯುವ ರಾಜಕಾರಣಿಯೊಬ್ಬರು ತನಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್ ಕೋಣೆಗೆ ಆಹ್ವಾನಿಸಿದ್ದರು” ಎಂದು ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಅವರು ಆಗಸ್ಟ್ 20ರಂದು ಆರೋಪಿಸಿದ್ದರು.

ರಿನಿ ಆರೋಪ ಮಾಡುವಾಗ ಯುವ ರಾಜಕಾರಣಿ ರಾಹುಲ್ ಮಾಂಕೂಟತ್ತಿಲ್ ಎಂದು ಹೇಳಿರಲಿಲ್ಲ. ಆದರೆ, ಪಾಲಕ್ಕಾಡ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಘಟಕದ ನಾಯಕರು ರಿನಿ ಆರೋಪ ಮಾಡಿರುವುದು ರಾಹುಲ್ ವಿರುದ್ದವೇ ಎಂದಿದ್ದರು.

ರಿನಿ ಆರೋಪ ಬೆನ್ನಲ್ಲೇ ಮಲಯಾಳಂ ಬರಗಾರ್ತಿ ಹನಿ ಭಾಸ್ಕರನ್ ಕೂಡ ರಾಹುಲ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. “ತಾನು ಶ್ರೀಲಂಕಾದಲ್ಲಿದ್ದಾಗ ರಾಹುಲ್ ಇನ್‌ಸ್ಟಾಗ್ರಾಮ್ ಮೂಲಕ ಸಂಭಾಷಣೆ ಆರಂಭಿಸಿದ್ದರು. ನಂತರ, ಖಾಸಗಿ ವಿಷಯಗಳನ್ನು ಹಂಚಿಕೊಳ್ಳಲು ಶುರು ಮಾಡಿದ್ದರು. ಈ ಬಗ್ಗೆ ಅವರ ಗೆಳೆಯರಲ್ಲಿ ಹೇಳಿಕೊಂಡು ತನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಹನಿ ಭಾಸ್ಕರನ್ ಸಾರ್ವಜನಿಕವಾಗಿ ಆರೋಪಿಸಿದ್ದರು.

ರಾಹುಲ್ ವಿರುದ್ದದ ಈ  ಗಂಭೀರ ಆರೋಪಗಳು ಯುವ ಕಾಂಗ್ರೆಸ್‌ನೊಳಗೆ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ವಿ ಸ್ನೇಹಾ ಮತ್ತು ಉಪಾಧ್ಯಕ್ಷ ವಿಷ್ಣು ಸುನಿಲ್ ಪಂದಲಂ ಸೇರಿದಂತೆ ಹಲವಾರು ನಾಯಕರು ರಾಹುಲ್ ರಾಜೀನಾಮೆಗೆ ಒತ್ತಾಯಿಸಿದ್ದರು. ಶಾಸಕ ಚಾಂಡಿ ಉಮ್ಮನ್ ಅವರ ಬೆಂಬಲಿಗರು ಕೂಡ ರಾಹುಲ್ ಅವರನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದ್ದರು.

ತನ್ನ ವಿರುದ್ದ ಆರೋಪ ರಾಜ್ಯದಾಧ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದಂತೆ ರಾಹುಲ್ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗುರುವಾರ (ಆ.21) ರಾಜೀನಾಮೆ ನೀಡಿದ್ದರು.

ಯುವ ಕಾಂಗ್ರೆಸ್‌ನೊಳಗೆ ಒತ್ತಡ ಹೆಚ್ಚಾದ ಹಿನ್ನೆಲೆ ಮತ್ತು ಹಿರಿಯ ನಾಯಕರಿಂದ ತೀವ್ರ ಟೀಕೆ ವ್ಯಕ್ತವಾದ ಕಾರಣ ಕಾಂಗ್ರೆಸ್ ನಾಯಕತ್ವವು ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ರಾಹುಲ್ ಅವರಿಗೆ ಸೂಚಿಸಿದೆ ಎಂದು ವರದಿಯಾಗಿತ್ತು. ಇದೀಗ ಅವರನ್ನು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಮಾತುಗೊಳಿಸಿರುವ ಬಗ್ಗೆ ಮುರಳೀಧರನ್‌ ಹೇಳಿಕೆ ನೀಡಿದ್ದಾರೆ.

ಬಿಹಾರ ವಿಶೇಷ ತೀವ್ರ ಪರಿಷ್ಕರಣೆ: ಶೇ. 98.2ರಷ್ಟು ದಾಖಲೆಗಳ ಸಂಗ್ರಹ ಮುಕ್ತಾಯ- ಚುನಾವಣಾ ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...