Homeಮುಖಪುಟ'ಸಿಎಂ ಹುದ್ದೆಗೆ 500 ಕೋಟಿ' ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

- Advertisement -
- Advertisement -

“500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ” ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಸೋಮವಾರ (ಡಿಸೆಂಬರ್ 8) ಅಮಾನತುಗೊಳಿಸಿದೆ.

ನವಜೋತ್ ಕೌರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ನ ಪಂಜಾಬ್ ಘಟಕ ತಿಳಿಸಿದೆ.

ಈ ಕುರಿತ ಆದೇಶ ಪತ್ರವನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ (ಪಿಸಿಸಿ) ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಸೋಮವಾರ ಸಂಜೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಶನಿವಾರ (ಡಿಸೆಂಬರ್ 6) ಚಂಡೀಗಢದಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ನವಜೋತ್ ಕೌರ್, ಅಮಾನತಿಗೆ ಕಾರಣವಾದ ಹೇಳಿಕೆ ನೀಡಿದ್ದರು.

“ನನ್ನ ಪತಿ ಕಾಂಗ್ರೆಸ್ ಜೊತೆ ಬಲವಾಗಿ ನಿಂತಿದ್ದಾರೆ. ಪಕ್ಷ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ, ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ” ಎಂದು ಮಾಜಿ ಶಾಸಕಿಯೂ ಆದ ನವಜೋತ್ ಕೌರ್ ಮಾಧ್ಯಮಗಳ ಮುಂದೆ ಹೇಳಿದ್ದರು.

“ಆದರೂ, ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ನಿರೀಕ್ಷೆ ನನಗಿಲ್ಲ. ಏಕೆಂದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಐದು ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರೆಲ್ಲ ಕಾಂಗ್ರೆಸ್ ಅನ್ನು ಸೋಲಿಸಲು ಪಣತೊಟ್ಟು ನಿಂತಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಅರ್ಥ ಮಾಡಿಕೊಂಡರೆ, ಅದು ಬೇರೆ ವಿಷಯ” ಎಂದಿದ್ದರು.

“ನಾವು ಯಾವಾಗಲೂ ಪಂಜಾಬ್ ಪರವಾಗಿ ಮಾತನಾಡುತ್ತೇವೆ. ಆದರೆ, ಮುಖ್ಯಮಂತ್ರಿ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ನಮ್ಮಲ್ಲಿ 500 ಕೋಟಿ ರೂಪಾಯಿ ಹಣವಿಲ್ಲ” ಎಂದು ಇದೇ ವೇಳೆ ನವಜೋತ್ ಕೌರ್ ಹೇಳಿದ್ದರು.

ಈ ವೇಳೆ ವರದಿಗಾರರು, “ನಿಮ್ಮಲ್ಲಿ ಯಾರಾದರೂ ಹಣ ಕೇಳಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ನವಜೋತ್ ಕೌರ್, “ಇಲ್ಲ ಹಣ ಕೇಳಿಲ್ಲ, ಆದರೆ 500 ಕೋಟಿ ರೂಪಾಯಿಯ ಸೂಟ್ ಕೇಸ್ ಕೊಟ್ಟವನೇ ಮುಖ್ಯಮಂತ್ರಿಯಾಗುತ್ತಾನೆ” ಎಂದಿದ್ದರು.

ನವಜೋತ್ ಅವರ ಈ ಹೇಳಿಕೆ ಮುಂದಿಟ್ಟುಕೊಂಡು ಪಂಜಾಬ್‌ನ ಎಎಪಿ ಮತ್ತು ಬಿಜೆಪಿ ಪಕ್ಷಗಳು ಕಾಂಗ್ರೆಸ್ ಮೇಲೆ ಮುಗಿಬಿದ್ದಿತ್ತು. ಕಾಂಗ್ರೆಸ್ ಈ ಕುರಿತು ಸ್ಪಷ್ಟನೆ ನೀಡುವಂತೆ ಆಗ್ರಹಿಸಿತ್ತು.

ವಿವಿಧ ಕಾಂಗ್ರೆಸ್ ನಾಯಕರೂ ಕೂಡ ನವಜೋತ್ ಕೌರ್ ಹೇಳಿಕೆ ವಿರುದ್ದ ಕಿಡಿಕಾರಿದ್ದರು. ಅವರ ಹೇಳಿಕೆಯನ್ನು ಅಲ್ಲಗಳೆದಿದ್ದರು.

ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ‘ಭ್ರಷ್ಟ’ : ನವಜೋತ್ ಕೌರ್

ತನ್ನನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಸೋಮವಾರ ಸಂಜೆ ಪ್ರತಿಕ್ರಿಯಿಸಿದ ನವಜೋತ್ ಕೌರ್, ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ‘ಅಸೂಕ್ಷ್ಮ, ಬೇಜವಾಬ್ದಾರಿ, ನೈತಿಕವಾಗಿ ಅಪ್ರಾಮಾಣಿಕ ಮತ್ತು ಭ್ರಷ್ಟ’ ಎಂದು ಕಿಡಿಕಾರಿದ್ದಾರೆ.

“ಅಮರಿಂದರ್ ಅವರ ಅಸಮರ್ಥತೆ ಮತ್ತು ಬೇಜವಾಬ್ದಾರಿ ವರ್ತನೆಯಿಂದ ನೋಯಿಸಲ್ಪಟ್ಟ ನನ್ನ ಎಲ್ಲಾ ಸಹೋದರ ಸಹೋದರಿಯರ ಪರವಾಗಿ ನಾನು ನಿಲ್ಲುತ್ತೇನೆ. ಅವರನ್ನು ಅಧ್ಯಕ್ಷರನ್ನಾಗಿ ಸ್ವೀಕರಿಸಲು ನಾನು ನಿರಾಕರಿಸುತ್ತೇನೆ. ಮುಖ್ಯಮಂತ್ರಿ ಅವರನ್ನು ಏಕೆ ರಕ್ಷಿಸುತ್ತಿದ್ದಾರೆಂದು ನನಗೆ ಆಶ್ಚರ್ಯವಾಗುತ್ತದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...