Homeಮುಖಪುಟ'ಸಿಎಂ ಹುದ್ದೆಗೆ 500 ಕೋಟಿ' ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

- Advertisement -
- Advertisement -

“500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ” ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಸೋಮವಾರ (ಡಿಸೆಂಬರ್ 8) ಅಮಾನತುಗೊಳಿಸಿದೆ.

ನವಜೋತ್ ಕೌರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ನ ಪಂಜಾಬ್ ಘಟಕ ತಿಳಿಸಿದೆ.

ಈ ಕುರಿತ ಆದೇಶ ಪತ್ರವನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ (ಪಿಸಿಸಿ) ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಸೋಮವಾರ ಸಂಜೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಶನಿವಾರ (ಡಿಸೆಂಬರ್ 6) ಚಂಡೀಗಢದಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ನವಜೋತ್ ಕೌರ್, ಅಮಾನತಿಗೆ ಕಾರಣವಾದ ಹೇಳಿಕೆ ನೀಡಿದ್ದರು.

“ನನ್ನ ಪತಿ ಕಾಂಗ್ರೆಸ್ ಜೊತೆ ಬಲವಾಗಿ ನಿಂತಿದ್ದಾರೆ. ಪಕ್ಷ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ, ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ” ಎಂದು ಮಾಜಿ ಶಾಸಕಿಯೂ ಆದ ನವಜೋತ್ ಕೌರ್ ಮಾಧ್ಯಮಗಳ ಮುಂದೆ ಹೇಳಿದ್ದರು.

“ಆದರೂ, ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ನಿರೀಕ್ಷೆ ನನಗಿಲ್ಲ. ಏಕೆಂದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಐದು ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರೆಲ್ಲ ಕಾಂಗ್ರೆಸ್ ಅನ್ನು ಸೋಲಿಸಲು ಪಣತೊಟ್ಟು ನಿಂತಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಅರ್ಥ ಮಾಡಿಕೊಂಡರೆ, ಅದು ಬೇರೆ ವಿಷಯ” ಎಂದಿದ್ದರು.

“ನಾವು ಯಾವಾಗಲೂ ಪಂಜಾಬ್ ಪರವಾಗಿ ಮಾತನಾಡುತ್ತೇವೆ. ಆದರೆ, ಮುಖ್ಯಮಂತ್ರಿ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ನಮ್ಮಲ್ಲಿ 500 ಕೋಟಿ ರೂಪಾಯಿ ಹಣವಿಲ್ಲ” ಎಂದು ಇದೇ ವೇಳೆ ನವಜೋತ್ ಕೌರ್ ಹೇಳಿದ್ದರು.

ಈ ವೇಳೆ ವರದಿಗಾರರು, “ನಿಮ್ಮಲ್ಲಿ ಯಾರಾದರೂ ಹಣ ಕೇಳಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ನವಜೋತ್ ಕೌರ್, “ಇಲ್ಲ ಹಣ ಕೇಳಿಲ್ಲ, ಆದರೆ 500 ಕೋಟಿ ರೂಪಾಯಿಯ ಸೂಟ್ ಕೇಸ್ ಕೊಟ್ಟವನೇ ಮುಖ್ಯಮಂತ್ರಿಯಾಗುತ್ತಾನೆ” ಎಂದಿದ್ದರು.

ನವಜೋತ್ ಅವರ ಈ ಹೇಳಿಕೆ ಮುಂದಿಟ್ಟುಕೊಂಡು ಪಂಜಾಬ್‌ನ ಎಎಪಿ ಮತ್ತು ಬಿಜೆಪಿ ಪಕ್ಷಗಳು ಕಾಂಗ್ರೆಸ್ ಮೇಲೆ ಮುಗಿಬಿದ್ದಿತ್ತು. ಕಾಂಗ್ರೆಸ್ ಈ ಕುರಿತು ಸ್ಪಷ್ಟನೆ ನೀಡುವಂತೆ ಆಗ್ರಹಿಸಿತ್ತು.

ವಿವಿಧ ಕಾಂಗ್ರೆಸ್ ನಾಯಕರೂ ಕೂಡ ನವಜೋತ್ ಕೌರ್ ಹೇಳಿಕೆ ವಿರುದ್ದ ಕಿಡಿಕಾರಿದ್ದರು. ಅವರ ಹೇಳಿಕೆಯನ್ನು ಅಲ್ಲಗಳೆದಿದ್ದರು.

ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ‘ಭ್ರಷ್ಟ’ : ನವಜೋತ್ ಕೌರ್

ತನ್ನನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಸೋಮವಾರ ಸಂಜೆ ಪ್ರತಿಕ್ರಿಯಿಸಿದ ನವಜೋತ್ ಕೌರ್, ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ‘ಅಸೂಕ್ಷ್ಮ, ಬೇಜವಾಬ್ದಾರಿ, ನೈತಿಕವಾಗಿ ಅಪ್ರಾಮಾಣಿಕ ಮತ್ತು ಭ್ರಷ್ಟ’ ಎಂದು ಕಿಡಿಕಾರಿದ್ದಾರೆ.

“ಅಮರಿಂದರ್ ಅವರ ಅಸಮರ್ಥತೆ ಮತ್ತು ಬೇಜವಾಬ್ದಾರಿ ವರ್ತನೆಯಿಂದ ನೋಯಿಸಲ್ಪಟ್ಟ ನನ್ನ ಎಲ್ಲಾ ಸಹೋದರ ಸಹೋದರಿಯರ ಪರವಾಗಿ ನಾನು ನಿಲ್ಲುತ್ತೇನೆ. ಅವರನ್ನು ಅಧ್ಯಕ್ಷರನ್ನಾಗಿ ಸ್ವೀಕರಿಸಲು ನಾನು ನಿರಾಕರಿಸುತ್ತೇನೆ. ಮುಖ್ಯಮಂತ್ರಿ ಅವರನ್ನು ಏಕೆ ರಕ್ಷಿಸುತ್ತಿದ್ದಾರೆಂದು ನನಗೆ ಆಶ್ಚರ್ಯವಾಗುತ್ತದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ...

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಮ್ಮುಖದಲ್ಲಿ 10 ನಕ್ಸಲರು ಶರಣಾಗತಿ: ಮುಖ್ಯವಾಹಿನಿಗೆ ಬಂದವರಿಗೆ ಸಂವಿಧಾನ ಪ್ರತಿ ನೀಡಿದ ಸಿಎಂ

ಡಿಸೆಂಬರ್ 7 ರಂದು, ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಮಂದಿ ನಕ್ಸಲರು ಬಾಲಘಾಟ್ ಜಿಲ್ಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಮುಖ್ಯವಾಹಿನಿಗೆ ಬಂದರು. ಶರಣಾಗತಿಯಾದ ನಕ್ಸಲರ ಬಳಿ ಇದ್ದ,...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...