Homeಮುಖಪುಟ'ಸಿಎಂ ಹುದ್ದೆಗೆ 500 ಕೋಟಿ' ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

- Advertisement -
- Advertisement -

“500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ” ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಸೋಮವಾರ (ಡಿಸೆಂಬರ್ 8) ಅಮಾನತುಗೊಳಿಸಿದೆ.

ನವಜೋತ್ ಕೌರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ನ ಪಂಜಾಬ್ ಘಟಕ ತಿಳಿಸಿದೆ.

ಈ ಕುರಿತ ಆದೇಶ ಪತ್ರವನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ (ಪಿಸಿಸಿ) ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಸೋಮವಾರ ಸಂಜೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಶನಿವಾರ (ಡಿಸೆಂಬರ್ 6) ಚಂಡೀಗಢದಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ನವಜೋತ್ ಕೌರ್, ಅಮಾನತಿಗೆ ಕಾರಣವಾದ ಹೇಳಿಕೆ ನೀಡಿದ್ದರು.

“ನನ್ನ ಪತಿ ಕಾಂಗ್ರೆಸ್ ಜೊತೆ ಬಲವಾಗಿ ನಿಂತಿದ್ದಾರೆ. ಪಕ್ಷ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ, ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ” ಎಂದು ಮಾಜಿ ಶಾಸಕಿಯೂ ಆದ ನವಜೋತ್ ಕೌರ್ ಮಾಧ್ಯಮಗಳ ಮುಂದೆ ಹೇಳಿದ್ದರು.

“ಆದರೂ, ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ನಿರೀಕ್ಷೆ ನನಗಿಲ್ಲ. ಏಕೆಂದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಐದು ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರೆಲ್ಲ ಕಾಂಗ್ರೆಸ್ ಅನ್ನು ಸೋಲಿಸಲು ಪಣತೊಟ್ಟು ನಿಂತಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಅರ್ಥ ಮಾಡಿಕೊಂಡರೆ, ಅದು ಬೇರೆ ವಿಷಯ” ಎಂದಿದ್ದರು.

“ನಾವು ಯಾವಾಗಲೂ ಪಂಜಾಬ್ ಪರವಾಗಿ ಮಾತನಾಡುತ್ತೇವೆ. ಆದರೆ, ಮುಖ್ಯಮಂತ್ರಿ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ನಮ್ಮಲ್ಲಿ 500 ಕೋಟಿ ರೂಪಾಯಿ ಹಣವಿಲ್ಲ” ಎಂದು ಇದೇ ವೇಳೆ ನವಜೋತ್ ಕೌರ್ ಹೇಳಿದ್ದರು.

ಈ ವೇಳೆ ವರದಿಗಾರರು, “ನಿಮ್ಮಲ್ಲಿ ಯಾರಾದರೂ ಹಣ ಕೇಳಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ನವಜೋತ್ ಕೌರ್, “ಇಲ್ಲ ಹಣ ಕೇಳಿಲ್ಲ, ಆದರೆ 500 ಕೋಟಿ ರೂಪಾಯಿಯ ಸೂಟ್ ಕೇಸ್ ಕೊಟ್ಟವನೇ ಮುಖ್ಯಮಂತ್ರಿಯಾಗುತ್ತಾನೆ” ಎಂದಿದ್ದರು.

ನವಜೋತ್ ಅವರ ಈ ಹೇಳಿಕೆ ಮುಂದಿಟ್ಟುಕೊಂಡು ಪಂಜಾಬ್‌ನ ಎಎಪಿ ಮತ್ತು ಬಿಜೆಪಿ ಪಕ್ಷಗಳು ಕಾಂಗ್ರೆಸ್ ಮೇಲೆ ಮುಗಿಬಿದ್ದಿತ್ತು. ಕಾಂಗ್ರೆಸ್ ಈ ಕುರಿತು ಸ್ಪಷ್ಟನೆ ನೀಡುವಂತೆ ಆಗ್ರಹಿಸಿತ್ತು.

ವಿವಿಧ ಕಾಂಗ್ರೆಸ್ ನಾಯಕರೂ ಕೂಡ ನವಜೋತ್ ಕೌರ್ ಹೇಳಿಕೆ ವಿರುದ್ದ ಕಿಡಿಕಾರಿದ್ದರು. ಅವರ ಹೇಳಿಕೆಯನ್ನು ಅಲ್ಲಗಳೆದಿದ್ದರು.

ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ‘ಭ್ರಷ್ಟ’ : ನವಜೋತ್ ಕೌರ್

ತನ್ನನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಸೋಮವಾರ ಸಂಜೆ ಪ್ರತಿಕ್ರಿಯಿಸಿದ ನವಜೋತ್ ಕೌರ್, ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ‘ಅಸೂಕ್ಷ್ಮ, ಬೇಜವಾಬ್ದಾರಿ, ನೈತಿಕವಾಗಿ ಅಪ್ರಾಮಾಣಿಕ ಮತ್ತು ಭ್ರಷ್ಟ’ ಎಂದು ಕಿಡಿಕಾರಿದ್ದಾರೆ.

“ಅಮರಿಂದರ್ ಅವರ ಅಸಮರ್ಥತೆ ಮತ್ತು ಬೇಜವಾಬ್ದಾರಿ ವರ್ತನೆಯಿಂದ ನೋಯಿಸಲ್ಪಟ್ಟ ನನ್ನ ಎಲ್ಲಾ ಸಹೋದರ ಸಹೋದರಿಯರ ಪರವಾಗಿ ನಾನು ನಿಲ್ಲುತ್ತೇನೆ. ಅವರನ್ನು ಅಧ್ಯಕ್ಷರನ್ನಾಗಿ ಸ್ವೀಕರಿಸಲು ನಾನು ನಿರಾಕರಿಸುತ್ತೇನೆ. ಮುಖ್ಯಮಂತ್ರಿ ಅವರನ್ನು ಏಕೆ ರಕ್ಷಿಸುತ್ತಿದ್ದಾರೆಂದು ನನಗೆ ಆಶ್ಚರ್ಯವಾಗುತ್ತದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...