Homeಕರ್ನಾಟಕಕಾಂಗ್ರೆಸ್ ಮೂರನೇ ಗ್ಯಾರಂಟಿ: ಬಡ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿ

ಕಾಂಗ್ರೆಸ್ ಮೂರನೇ ಗ್ಯಾರಂಟಿ: ಬಡ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿ

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10.ಕೆ.ಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದೆ.

ನಮ್ಮ ಸರಕಾರ ನೀಡುತಿದ್ದ 7 ಕೆ.ಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆ.ಜಿಗೆ ಇಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯವನ್ನು ಹಸಿವು ಮುಕ್ತವನ್ನಾಗಿ ಮಾಡಬೇಕು ಎಂದು ನಮ್ಮ ಮೂರನೇ ಗ್ಯಾರಂಟಿ ಯೋಜನೆಯಾಗಿ 10 ಕೆ.ಜಿ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಎಲ್ಲಿಂದ ದುಡ್ಡು ಎಂಬ ಪ್ರಶ್ನೆಗೆ ಉತ್ತಿರಿಸಿದ ಡಿ.ಕೆ ಶಿವಕುಮಾರ್, “ರಾಜ್ಯಪಾಲರ ಭಾಷಣದಲ್ಲಿ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಹೆಚ್ಚುವರಿ ವಿದ್ಯುತ್ ಅನ್ನು ಬೇರೆ ರಾಜ್ಯಕ್ಕೆ ಮಾರಿ 4 ಸಾವಿರ ಕೋಟಿ ಲಾಭ ಮಾಡಿದ್ದೇವೆ ಎಂದು ಹೇಳಿದ್ದಾರೆ. ದೇಶದ ಇಂಧನ ಉತ್ಪಾದನೆ ಇತಿಹಾಸದಲ್ಲೇ ರಾಜ್ಯವೊಂದು ಹೆಚ್ಚುವರಿ ವಿದ್ಯುತ್ ಮಾರಾಟ ಮಾಡುತ್ತಿರುವುದು ಇದೇ ಮೊದಲು. ನಾವು ಸಾಧಿಸಿದ್ದನ್ನು ಅವರು ರೈತರಿಗೆ ನೀಡಲು ಆಗುತ್ತಿಲ್ಲ. ನಾವು ಇಂಧನ ಸರಬರಾಜಿನಲ್ಲಿ ಆಗುವ ನಷ್ಟ ತಡೆಯಲು ಪ್ರತಿ ತಾಲೂಕಿನಲ್ಲಿ 20-40 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡಲು ವ್ಯವಸ್ಥೆ ಕಲ್ಪಿಸಿದ್ದೇವೆ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಜಗಳವಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಸಿದ್ದರಾಮಯ್ಯ ಕೈಕೈ ಮಿಲಾಯಿಸಿ ಜಗಳವಾಡಲು ಕುಸ್ತಿ ಅಖಾಡದಲ್ಲಿ ಇದ್ದೇವಾ? ಜಗಳ, ಕುಸ್ತಿಗಳು ಏನಿದ್ದರೂ ಬಿಜೆಪಿಯಲ್ಲಿದೆ. ಯುದ್ಧ, ಹೇಳಿಕೆ ಸಮರ ನಡೆಯುತ್ತಿರುವುದು ಬಿಜೆಪಿ ಪಕ್ಷದಲ್ಲಿ. ಅವರು ಯಡಿಯೂರಪ್ಪನವರ ಕಣ್ಣಲ್ಲಿ ನೀರು ಹಾಕಿಸಿದ್ದು ಯಾಕೆ? ನಿರಾಣಿ ವಿಚಾರವಾಗಿ ಯತ್ನಾಳ್ ಏನು ಹೇಳಿದರು? ಸರ್ಕಾರದ ಬಗ್ಗೆ ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಏನು ಹೇಳಿದ್ದಾರೆ? ವಿಧಾನಸೌಧ ಕಾರಿಡಾರ್ ನಲ್ಲಿ ಬಿಜೆಪಿ ಶಾಸಕರು ಏನು ಮಾತನಾಡುತ್ತಿದ್ದಾರೆ? ಯೋಗೇಶ್ವರ್ ಏನು ಹೇಳಿದ್ದಾರೆ? ಮಂಚದ ಮೇಲಿದ್ದ ಮಂತ್ರಿ ಯಾರು ಭ್ರಷ್ಟ ಎಂದು ಹೇಳಿದ? ಎಂಟಿಬಿ ನಾಗರಾಜ್ ಅವರು ಏನು ಹೇಳಿದರು? ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುವ ಆಸಕ್ತಿ ಇದ್ದರೆ ಅಧಿವೇಶನ ವಿಸ್ತರಣೆ ಮಾಡಿ, ಚರ್ಚೆಗೆ ಅವಕಾಶ ನೀಡಲಿ” ಎಂದರು.

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ ಉಳಿತಾಯ ಮಾಡಲು ಸಹಕಾರಿಯಾಗುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನವನ್ನು ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ; ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...