Homeಮುಖಪುಟಬೆಂಗಳೂರಿನ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ: ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

ಬೆಂಗಳೂರಿನ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ: ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

- Advertisement -
- Advertisement -

ಸಚಿವರಾದ ವಿ.ಸೋಮಣ್ಣ ಮತ್ತು ಕೆ.ಸಿ ನಾರಾಯಣಗೌಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದರೆ ಇಂದು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಸೋಮಣ್ಣನವರು ಕಾಂಗ್ರೆಸ್ ಸೇರುತ್ತಾರೆ ಎಂಬ ವಂದಂತಿಗೆ ತೆರೆ ಎಳೆದಿದೆ. ಆದರೆ ಕೆ.ಆರ್ ಪೇಟೆಯ ಟಿಕೆಟ್ ಘೋಷಣೆ ಮಾಡದೆ ಬಾಕಿ ಉಳಿಸಿಕೊಂಡಿದೆ.

ಇತ್ತೀಚೆಗೆ ಬಿಜೆಪಿಯೊಂದಿಗೆ ಮುನಿಸಿಕೊಂಡಿದ್ದ ವಿ.ಸೋಮಣ್ಣನವರು ವಿಜಯ ಸಂಕಲ್ಪ ಯಾತ್ರೆಯಿಂದ ಅರ್ಧಕ್ಕೆ ಹೊರನಡೆದಿದ್ದರು. ಅಲ್ಲದೆ ಚಾಮರಾಜನಗರದಲ್ಲಿನ ಬಿಜೆಪಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಹಾಗಾಗಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳು ಹರಡಿದ್ದವು. ಅವರು ತಮಗೆ ಮತ್ತು ತಮ್ಮ ಪುತ್ರ ಅರುಣ್ ಸೋಮಣ್ಣ ಇಬ್ಬರಿಗೂ ಕಾಂಗ್ರೆಸ್‌ನಿಂದ ಟಿಕೆಟ್ ಕೇಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಸೋಮಣ್ಣನವರು ಪ್ರತಿನಿಧಿಸುವ ಗೋವಿಂದರಾಜನಗರ, ಅವರ ಮಗ ಬಯಸಿದ್ದ ರಾಜಾಜಿನಗರ ಅಥವಾ ಹನೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಇಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅಲ್ಲಿಗೆ ಸೋಮಣ್ಣನವರು ಕಾಂಗ್ರೆಸ್ ಸೇರುವ ಚರ್ಚೆ ಕೊನೆಗೊಂಡಿದೆ.

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಶಾಸಕ ಪ್ರಿಯಾಕೃಷ್ಣರವರ ಹೆಸರನ್ನು ಅಂತಿಮಗೊಳಿಸಿದೆ. ರಾಜಾಜಿನಗರಕ್ಕೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ ಪುಟ್ಟಣ್ಣನವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಅಲ್ಲದೆ ಹನೂರು ಕ್ಷೇತ್ರಕ್ಕೆ ಆರ್‌.ನರೇಂದ್ರ ಮತ್ತು ಚಾಮರಾಜನಗರ ಕ್ಷೇತ್ರಕ್ಕೆ ಸಿ.ಪುಟ್ಟರಂಗಶೆಟ್ಟಿಯವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ.

ಇನ್ನು ಕೆ.ಆರ್‌ ಪೇಟೆ ಶಾಸಕರಾಗಿರುವ ಸಚಿವ ನಾರಾಯಣ ಗೌಡರವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳಲು ಕಾರ್ಯಕರ್ತರು ಬಿಟ್ಟಿಲ್ಲ. ಅಲ್ಲದೆ ಅಲ್ಲಿ ಜೆಡಿಎಸ್ ಟಿಕೆಟ್ ವಂಚಿತ ಬಿ.ಎಲ್ ದೇವರಾಜುರವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿದೆ. ಈ ನಡುವೆ ಬಿ.ಎಸ್ ಯಡಿಯೂರಪ್ಪ ಹಾಗೂ ಅಮಿತ್‌ ಶಾ ನಡೆಸಿದ ರಾಜಿ ಸಂಧಾನದಿಂದ ಅವರು ಪಕ್ಷ ತ್ಯಜಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಗುರುಮಿಠಕಲ್‌ ಕ್ಷೇತ್ರದಲ್ಲಿ ಬಿಜೆಪಿಯು ಬಾಬುರಾವ್‌ ಚಿಂಚನಸೂರು ಅವರಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿದ ಬಾಬುರಾವ್‌ ಚಿಂಚನಸೂರು ಕ್ಷೇತ್ರಕ್ಕೂ ಟಿಕೆಟ್‌ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿ: ಮುಸ್ಲಿಂ ಸಮುದಾಯದ 8 ಮಂದಿಗೆ, 6 ಮಹಿಳೆಯರಿಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...