Homeಮುಖಪುಟಬೆಂಗಳೂರಿನ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ: ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

ಬೆಂಗಳೂರಿನ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ: ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

- Advertisement -
- Advertisement -

ಸಚಿವರಾದ ವಿ.ಸೋಮಣ್ಣ ಮತ್ತು ಕೆ.ಸಿ ನಾರಾಯಣಗೌಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದರೆ ಇಂದು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಸೋಮಣ್ಣನವರು ಕಾಂಗ್ರೆಸ್ ಸೇರುತ್ತಾರೆ ಎಂಬ ವಂದಂತಿಗೆ ತೆರೆ ಎಳೆದಿದೆ. ಆದರೆ ಕೆ.ಆರ್ ಪೇಟೆಯ ಟಿಕೆಟ್ ಘೋಷಣೆ ಮಾಡದೆ ಬಾಕಿ ಉಳಿಸಿಕೊಂಡಿದೆ.

ಇತ್ತೀಚೆಗೆ ಬಿಜೆಪಿಯೊಂದಿಗೆ ಮುನಿಸಿಕೊಂಡಿದ್ದ ವಿ.ಸೋಮಣ್ಣನವರು ವಿಜಯ ಸಂಕಲ್ಪ ಯಾತ್ರೆಯಿಂದ ಅರ್ಧಕ್ಕೆ ಹೊರನಡೆದಿದ್ದರು. ಅಲ್ಲದೆ ಚಾಮರಾಜನಗರದಲ್ಲಿನ ಬಿಜೆಪಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಹಾಗಾಗಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳು ಹರಡಿದ್ದವು. ಅವರು ತಮಗೆ ಮತ್ತು ತಮ್ಮ ಪುತ್ರ ಅರುಣ್ ಸೋಮಣ್ಣ ಇಬ್ಬರಿಗೂ ಕಾಂಗ್ರೆಸ್‌ನಿಂದ ಟಿಕೆಟ್ ಕೇಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಸೋಮಣ್ಣನವರು ಪ್ರತಿನಿಧಿಸುವ ಗೋವಿಂದರಾಜನಗರ, ಅವರ ಮಗ ಬಯಸಿದ್ದ ರಾಜಾಜಿನಗರ ಅಥವಾ ಹನೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಇಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅಲ್ಲಿಗೆ ಸೋಮಣ್ಣನವರು ಕಾಂಗ್ರೆಸ್ ಸೇರುವ ಚರ್ಚೆ ಕೊನೆಗೊಂಡಿದೆ.

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಶಾಸಕ ಪ್ರಿಯಾಕೃಷ್ಣರವರ ಹೆಸರನ್ನು ಅಂತಿಮಗೊಳಿಸಿದೆ. ರಾಜಾಜಿನಗರಕ್ಕೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ ಪುಟ್ಟಣ್ಣನವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಅಲ್ಲದೆ ಹನೂರು ಕ್ಷೇತ್ರಕ್ಕೆ ಆರ್‌.ನರೇಂದ್ರ ಮತ್ತು ಚಾಮರಾಜನಗರ ಕ್ಷೇತ್ರಕ್ಕೆ ಸಿ.ಪುಟ್ಟರಂಗಶೆಟ್ಟಿಯವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ.

ಇನ್ನು ಕೆ.ಆರ್‌ ಪೇಟೆ ಶಾಸಕರಾಗಿರುವ ಸಚಿವ ನಾರಾಯಣ ಗೌಡರವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳಲು ಕಾರ್ಯಕರ್ತರು ಬಿಟ್ಟಿಲ್ಲ. ಅಲ್ಲದೆ ಅಲ್ಲಿ ಜೆಡಿಎಸ್ ಟಿಕೆಟ್ ವಂಚಿತ ಬಿ.ಎಲ್ ದೇವರಾಜುರವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿದೆ. ಈ ನಡುವೆ ಬಿ.ಎಸ್ ಯಡಿಯೂರಪ್ಪ ಹಾಗೂ ಅಮಿತ್‌ ಶಾ ನಡೆಸಿದ ರಾಜಿ ಸಂಧಾನದಿಂದ ಅವರು ಪಕ್ಷ ತ್ಯಜಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಗುರುಮಿಠಕಲ್‌ ಕ್ಷೇತ್ರದಲ್ಲಿ ಬಿಜೆಪಿಯು ಬಾಬುರಾವ್‌ ಚಿಂಚನಸೂರು ಅವರಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿದ ಬಾಬುರಾವ್‌ ಚಿಂಚನಸೂರು ಕ್ಷೇತ್ರಕ್ಕೂ ಟಿಕೆಟ್‌ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿ: ಮುಸ್ಲಿಂ ಸಮುದಾಯದ 8 ಮಂದಿಗೆ, 6 ಮಹಿಳೆಯರಿಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...