Homeಮುಖಪುಟಬೆಂಗಳೂರಿನ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ: ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

ಬೆಂಗಳೂರಿನ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ: ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

- Advertisement -
- Advertisement -

ಸಚಿವರಾದ ವಿ.ಸೋಮಣ್ಣ ಮತ್ತು ಕೆ.ಸಿ ನಾರಾಯಣಗೌಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದರೆ ಇಂದು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಸೋಮಣ್ಣನವರು ಕಾಂಗ್ರೆಸ್ ಸೇರುತ್ತಾರೆ ಎಂಬ ವಂದಂತಿಗೆ ತೆರೆ ಎಳೆದಿದೆ. ಆದರೆ ಕೆ.ಆರ್ ಪೇಟೆಯ ಟಿಕೆಟ್ ಘೋಷಣೆ ಮಾಡದೆ ಬಾಕಿ ಉಳಿಸಿಕೊಂಡಿದೆ.

ಇತ್ತೀಚೆಗೆ ಬಿಜೆಪಿಯೊಂದಿಗೆ ಮುನಿಸಿಕೊಂಡಿದ್ದ ವಿ.ಸೋಮಣ್ಣನವರು ವಿಜಯ ಸಂಕಲ್ಪ ಯಾತ್ರೆಯಿಂದ ಅರ್ಧಕ್ಕೆ ಹೊರನಡೆದಿದ್ದರು. ಅಲ್ಲದೆ ಚಾಮರಾಜನಗರದಲ್ಲಿನ ಬಿಜೆಪಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಹಾಗಾಗಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳು ಹರಡಿದ್ದವು. ಅವರು ತಮಗೆ ಮತ್ತು ತಮ್ಮ ಪುತ್ರ ಅರುಣ್ ಸೋಮಣ್ಣ ಇಬ್ಬರಿಗೂ ಕಾಂಗ್ರೆಸ್‌ನಿಂದ ಟಿಕೆಟ್ ಕೇಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಸೋಮಣ್ಣನವರು ಪ್ರತಿನಿಧಿಸುವ ಗೋವಿಂದರಾಜನಗರ, ಅವರ ಮಗ ಬಯಸಿದ್ದ ರಾಜಾಜಿನಗರ ಅಥವಾ ಹನೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಇಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅಲ್ಲಿಗೆ ಸೋಮಣ್ಣನವರು ಕಾಂಗ್ರೆಸ್ ಸೇರುವ ಚರ್ಚೆ ಕೊನೆಗೊಂಡಿದೆ.

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಶಾಸಕ ಪ್ರಿಯಾಕೃಷ್ಣರವರ ಹೆಸರನ್ನು ಅಂತಿಮಗೊಳಿಸಿದೆ. ರಾಜಾಜಿನಗರಕ್ಕೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ ಪುಟ್ಟಣ್ಣನವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಅಲ್ಲದೆ ಹನೂರು ಕ್ಷೇತ್ರಕ್ಕೆ ಆರ್‌.ನರೇಂದ್ರ ಮತ್ತು ಚಾಮರಾಜನಗರ ಕ್ಷೇತ್ರಕ್ಕೆ ಸಿ.ಪುಟ್ಟರಂಗಶೆಟ್ಟಿಯವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ.

ಇನ್ನು ಕೆ.ಆರ್‌ ಪೇಟೆ ಶಾಸಕರಾಗಿರುವ ಸಚಿವ ನಾರಾಯಣ ಗೌಡರವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳಲು ಕಾರ್ಯಕರ್ತರು ಬಿಟ್ಟಿಲ್ಲ. ಅಲ್ಲದೆ ಅಲ್ಲಿ ಜೆಡಿಎಸ್ ಟಿಕೆಟ್ ವಂಚಿತ ಬಿ.ಎಲ್ ದೇವರಾಜುರವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿದೆ. ಈ ನಡುವೆ ಬಿ.ಎಸ್ ಯಡಿಯೂರಪ್ಪ ಹಾಗೂ ಅಮಿತ್‌ ಶಾ ನಡೆಸಿದ ರಾಜಿ ಸಂಧಾನದಿಂದ ಅವರು ಪಕ್ಷ ತ್ಯಜಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಗುರುಮಿಠಕಲ್‌ ಕ್ಷೇತ್ರದಲ್ಲಿ ಬಿಜೆಪಿಯು ಬಾಬುರಾವ್‌ ಚಿಂಚನಸೂರು ಅವರಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿದ ಬಾಬುರಾವ್‌ ಚಿಂಚನಸೂರು ಕ್ಷೇತ್ರಕ್ಕೂ ಟಿಕೆಟ್‌ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿ: ಮುಸ್ಲಿಂ ಸಮುದಾಯದ 8 ಮಂದಿಗೆ, 6 ಮಹಿಳೆಯರಿಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...