Homeಕರ್ನಾಟಕಮರಳಿ ಜೆಡಿಎಸ್‌ ಸೇರಿದ ದತ್ತ; ಕಡೂರಿನಿಂದಲೇ ಸ್ಪರ್ಧೆ ಫಿಕ್ಸ್

ಮರಳಿ ಜೆಡಿಎಸ್‌ ಸೇರಿದ ದತ್ತ; ಕಡೂರಿನಿಂದಲೇ ಸ್ಪರ್ಧೆ ಫಿಕ್ಸ್

- Advertisement -
- Advertisement -

ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈಎಸ್‌ ವಿ ದತ್ತ ಅವರಿಗೆ ಟಿಕೆಟ್ ಕೈ ತಪ್ಪಿದ ಬಳಿಕ ಬೇಸರಗೊಂಡಿದ್ದರು. ಇದೀಗ ಮತ್ತೆ ಜೆಡಿಎಸ್​​ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ.

ಕಾಂಗ್ರೆಸ್‌ನಿಂದ ಟಿಕೆಟ್ ಸಿಗದಿದ್ದಕ್ಕೆ ಮುನಿಸಿಕೊಂಡ ದತ್ತ ತನ್ನ ಬೆಂಬಲಿಗರೊಂದಿಗೆ ಸಭೆ ಕರೆದು ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಿದ್ದರು. ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿಯೂ ಹೇಳಿದ್ದರು. ಆದರೆ ಪಕ್ಷೇತರರಾಗಿ ಗೆಲುವು ಸಾಧಿಸುವುದು ಸುಲಭದ ಮಾತಲ್ಲ ಹಾಗಾಗಿ ಜೆಡಿಎಸ್‌ನತ್ತ ಮುಖ ಮಾಡಿದ ದತ್ತ ಅವರು, ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದರು. ದೇವೇಗೌಡರ ಬಳಿ ದತ್ತ ಅವರು, ”ಕಾಂಗ್ರೆಸ್‌ನಲ್ಲಿ ಅನ್ಯಾಯ ಆಗೋಯ್ತು” ಎಂದು ಅಳಲು ತೋಡಿಕೊಂಡು, ಪಕ್ಷಕ್ಕೆ ವಾಪಾಸ್ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ದತ್ತ ಮಾತನಾಡಿದ್ದು, ”ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದು ದೇವೇಗೌಡರು ನನಗೆ ಹೇಳಿದ್ದಾರೆ. ಹಾಗಾಗಿ ಅವರ ಮಾತಿಗೆ ಬೆಲೆ ಕೊಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನೂ ಪಡೆದಿದ್ದೇನೆ. ಎಲ್ಲರ ಸಮ್ಮತಿಯೊಂದಿಗೆ ಜೆಡಿಎಸ್​ ಸೇರಿದ್ದು, 18ರಂದು ನಾಮಪತ್ರ ಸಲ್ಲಿಸಲಿದ್ದೇನೆ” ಎಂದು ದತ್ತ ಹೇಳಿದ್ದಾರೆ.

ಇದನ್ನೂ ಓದಿ: ‘ಕೈ’ ತಪ್ಪಿದ ಟಿಕೆಟ್‌; ಏ.9ರಂದು ಅಭಿಮಾನಿಗಳೊಂದಿಗೆ ವೈಎಸ್‌ವಿ ದತ್ತ ಸಭೆ

ಇದೀಗ ಎಚ್‌ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರು ಗುರುವಾರ ವೈ ಎಸ್‌ ವಿ ದತ್ತ ಅವರ ಮನೆಗೆ ಭೇಟಿ ನೀಡಿ, ಅಧಿಕೃತವಾಗಿ ಅವರನ್ನು ಮರಳಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ.

ಈ ಬೆಳವಣಿಗೆಗೂ ಮುನ್ನ ಪ್ರಜ್ವಲ್ ರೇವಣ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿರುವ ದತ್ತಾ ನಿವಾಸಕ್ಕೆ ಭೇಟಿ ನೀಡಿದ್ದರು. ದತ್ತಾ ಜತೆ ಮಾತುಕತೆ ನಡೆಸಿದ ಬಳಿಕ ಹೇಳಿಕೆ ನೀಡಿದ್ದ ಪ್ರಜ್ವಲ್, ”ದತ್ತಾರನ್ನು ಪಕ್ಷದಲ್ಲೇ ಉಳಿಸಿಕೊಳ್ಳಬೇಕೆಂದು ದೇವೇಗೌಡರು ಹೇಳಿದ್ದಾರೆ. ದತ್ತಾರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ತುಂಬಾ ಪ್ರಯತ್ನ ಮಾಡಿದ್ದೆವು. ಅವರಿಗೆ ಕಾಂಗ್ರೆಸ್​​ ಟಿಕೆಟ್ ನೀಡುವುದಿಲ್ಲ ಎಂಬುದೂ ಗೊತ್ತಿತ್ತು. ಯಾವಾಗಲೂ ನಾನು ದತ್ತಾ ಅಣ್ಣ ಜೊತೆ ಇರುತ್ತೇನೆ” ಎಂದು ಹೇಳಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಸೋಲುಂಡ ಬಳಿಕ ದತ್ತ ಅವರಿಗೆ 2023ರ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಬಹುದು ಎನ್ನುವ ಕಾರಣಕ್ಕೆ ಜನವರಿ 15ರಂದು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಪಕ್ಷ ಸೇರಿ ಮೂರು ತಿಂಗಳು ಕಳೆಯುವ ಮುನ್ನವೇ ದತ್ತ ಅವರು ಕಾಂಗ್ರೆಸ್ಸಿಗೂ ಗುಡ್‌ ಬೈ ಹೇಳಿದ್ದಾರೆ.

ದತ್ತ ಅವರು ಟಿಕೆಟ್ ಸಿಗುತ್ತದೆ ಎನ್ನುವ ಭರವಸೆಯಲ್ಲಿಯೇ ಕಾಂಗ್ರೆಸ್ ಸೇರಿದ್ದರು. ಆದರೆ ಅವರು ‌ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕುರಿತು ವಿವಾದಿತ ಹೇಳಿಕೆ ನೀಡಿದ್ದರು. ಅದೇ ಕಾರಣಕ್ಕೆ ಇದೀಗ ಟಿಕೆಟ್‌ ತಪ್ಪಲು ಕಾರಣವಾಗಿದೆ ಎನ್ನುವ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿವೆ. ಕಡೂರು ಕ್ಷೇತ್ರಕ್ಕೆ ಕೆಎಸ್‌ ಆನಂದ್‌ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...