Homeಕರ್ನಾಟಕಮರಳಿ ಜೆಡಿಎಸ್‌ ಸೇರಿದ ದತ್ತ; ಕಡೂರಿನಿಂದಲೇ ಸ್ಪರ್ಧೆ ಫಿಕ್ಸ್

ಮರಳಿ ಜೆಡಿಎಸ್‌ ಸೇರಿದ ದತ್ತ; ಕಡೂರಿನಿಂದಲೇ ಸ್ಪರ್ಧೆ ಫಿಕ್ಸ್

- Advertisement -
- Advertisement -

ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈಎಸ್‌ ವಿ ದತ್ತ ಅವರಿಗೆ ಟಿಕೆಟ್ ಕೈ ತಪ್ಪಿದ ಬಳಿಕ ಬೇಸರಗೊಂಡಿದ್ದರು. ಇದೀಗ ಮತ್ತೆ ಜೆಡಿಎಸ್​​ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ.

ಕಾಂಗ್ರೆಸ್‌ನಿಂದ ಟಿಕೆಟ್ ಸಿಗದಿದ್ದಕ್ಕೆ ಮುನಿಸಿಕೊಂಡ ದತ್ತ ತನ್ನ ಬೆಂಬಲಿಗರೊಂದಿಗೆ ಸಭೆ ಕರೆದು ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಿದ್ದರು. ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿಯೂ ಹೇಳಿದ್ದರು. ಆದರೆ ಪಕ್ಷೇತರರಾಗಿ ಗೆಲುವು ಸಾಧಿಸುವುದು ಸುಲಭದ ಮಾತಲ್ಲ ಹಾಗಾಗಿ ಜೆಡಿಎಸ್‌ನತ್ತ ಮುಖ ಮಾಡಿದ ದತ್ತ ಅವರು, ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದರು. ದೇವೇಗೌಡರ ಬಳಿ ದತ್ತ ಅವರು, ”ಕಾಂಗ್ರೆಸ್‌ನಲ್ಲಿ ಅನ್ಯಾಯ ಆಗೋಯ್ತು” ಎಂದು ಅಳಲು ತೋಡಿಕೊಂಡು, ಪಕ್ಷಕ್ಕೆ ವಾಪಾಸ್ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ದತ್ತ ಮಾತನಾಡಿದ್ದು, ”ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದು ದೇವೇಗೌಡರು ನನಗೆ ಹೇಳಿದ್ದಾರೆ. ಹಾಗಾಗಿ ಅವರ ಮಾತಿಗೆ ಬೆಲೆ ಕೊಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನೂ ಪಡೆದಿದ್ದೇನೆ. ಎಲ್ಲರ ಸಮ್ಮತಿಯೊಂದಿಗೆ ಜೆಡಿಎಸ್​ ಸೇರಿದ್ದು, 18ರಂದು ನಾಮಪತ್ರ ಸಲ್ಲಿಸಲಿದ್ದೇನೆ” ಎಂದು ದತ್ತ ಹೇಳಿದ್ದಾರೆ.

ಇದನ್ನೂ ಓದಿ: ‘ಕೈ’ ತಪ್ಪಿದ ಟಿಕೆಟ್‌; ಏ.9ರಂದು ಅಭಿಮಾನಿಗಳೊಂದಿಗೆ ವೈಎಸ್‌ವಿ ದತ್ತ ಸಭೆ

ಇದೀಗ ಎಚ್‌ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರು ಗುರುವಾರ ವೈ ಎಸ್‌ ವಿ ದತ್ತ ಅವರ ಮನೆಗೆ ಭೇಟಿ ನೀಡಿ, ಅಧಿಕೃತವಾಗಿ ಅವರನ್ನು ಮರಳಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ.

ಈ ಬೆಳವಣಿಗೆಗೂ ಮುನ್ನ ಪ್ರಜ್ವಲ್ ರೇವಣ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿರುವ ದತ್ತಾ ನಿವಾಸಕ್ಕೆ ಭೇಟಿ ನೀಡಿದ್ದರು. ದತ್ತಾ ಜತೆ ಮಾತುಕತೆ ನಡೆಸಿದ ಬಳಿಕ ಹೇಳಿಕೆ ನೀಡಿದ್ದ ಪ್ರಜ್ವಲ್, ”ದತ್ತಾರನ್ನು ಪಕ್ಷದಲ್ಲೇ ಉಳಿಸಿಕೊಳ್ಳಬೇಕೆಂದು ದೇವೇಗೌಡರು ಹೇಳಿದ್ದಾರೆ. ದತ್ತಾರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ತುಂಬಾ ಪ್ರಯತ್ನ ಮಾಡಿದ್ದೆವು. ಅವರಿಗೆ ಕಾಂಗ್ರೆಸ್​​ ಟಿಕೆಟ್ ನೀಡುವುದಿಲ್ಲ ಎಂಬುದೂ ಗೊತ್ತಿತ್ತು. ಯಾವಾಗಲೂ ನಾನು ದತ್ತಾ ಅಣ್ಣ ಜೊತೆ ಇರುತ್ತೇನೆ” ಎಂದು ಹೇಳಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಸೋಲುಂಡ ಬಳಿಕ ದತ್ತ ಅವರಿಗೆ 2023ರ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಬಹುದು ಎನ್ನುವ ಕಾರಣಕ್ಕೆ ಜನವರಿ 15ರಂದು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಪಕ್ಷ ಸೇರಿ ಮೂರು ತಿಂಗಳು ಕಳೆಯುವ ಮುನ್ನವೇ ದತ್ತ ಅವರು ಕಾಂಗ್ರೆಸ್ಸಿಗೂ ಗುಡ್‌ ಬೈ ಹೇಳಿದ್ದಾರೆ.

ದತ್ತ ಅವರು ಟಿಕೆಟ್ ಸಿಗುತ್ತದೆ ಎನ್ನುವ ಭರವಸೆಯಲ್ಲಿಯೇ ಕಾಂಗ್ರೆಸ್ ಸೇರಿದ್ದರು. ಆದರೆ ಅವರು ‌ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕುರಿತು ವಿವಾದಿತ ಹೇಳಿಕೆ ನೀಡಿದ್ದರು. ಅದೇ ಕಾರಣಕ್ಕೆ ಇದೀಗ ಟಿಕೆಟ್‌ ತಪ್ಪಲು ಕಾರಣವಾಗಿದೆ ಎನ್ನುವ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿವೆ. ಕಡೂರು ಕ್ಷೇತ್ರಕ್ಕೆ ಕೆಎಸ್‌ ಆನಂದ್‌ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...