Homeಕರ್ನಾಟಕಮರಳಿ ಜೆಡಿಎಸ್‌ ಸೇರಿದ ದತ್ತ; ಕಡೂರಿನಿಂದಲೇ ಸ್ಪರ್ಧೆ ಫಿಕ್ಸ್

ಮರಳಿ ಜೆಡಿಎಸ್‌ ಸೇರಿದ ದತ್ತ; ಕಡೂರಿನಿಂದಲೇ ಸ್ಪರ್ಧೆ ಫಿಕ್ಸ್

- Advertisement -
- Advertisement -

ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈಎಸ್‌ ವಿ ದತ್ತ ಅವರಿಗೆ ಟಿಕೆಟ್ ಕೈ ತಪ್ಪಿದ ಬಳಿಕ ಬೇಸರಗೊಂಡಿದ್ದರು. ಇದೀಗ ಮತ್ತೆ ಜೆಡಿಎಸ್​​ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ.

ಕಾಂಗ್ರೆಸ್‌ನಿಂದ ಟಿಕೆಟ್ ಸಿಗದಿದ್ದಕ್ಕೆ ಮುನಿಸಿಕೊಂಡ ದತ್ತ ತನ್ನ ಬೆಂಬಲಿಗರೊಂದಿಗೆ ಸಭೆ ಕರೆದು ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಿದ್ದರು. ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿಯೂ ಹೇಳಿದ್ದರು. ಆದರೆ ಪಕ್ಷೇತರರಾಗಿ ಗೆಲುವು ಸಾಧಿಸುವುದು ಸುಲಭದ ಮಾತಲ್ಲ ಹಾಗಾಗಿ ಜೆಡಿಎಸ್‌ನತ್ತ ಮುಖ ಮಾಡಿದ ದತ್ತ ಅವರು, ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದರು. ದೇವೇಗೌಡರ ಬಳಿ ದತ್ತ ಅವರು, ”ಕಾಂಗ್ರೆಸ್‌ನಲ್ಲಿ ಅನ್ಯಾಯ ಆಗೋಯ್ತು” ಎಂದು ಅಳಲು ತೋಡಿಕೊಂಡು, ಪಕ್ಷಕ್ಕೆ ವಾಪಾಸ್ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ದತ್ತ ಮಾತನಾಡಿದ್ದು, ”ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದು ದೇವೇಗೌಡರು ನನಗೆ ಹೇಳಿದ್ದಾರೆ. ಹಾಗಾಗಿ ಅವರ ಮಾತಿಗೆ ಬೆಲೆ ಕೊಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನೂ ಪಡೆದಿದ್ದೇನೆ. ಎಲ್ಲರ ಸಮ್ಮತಿಯೊಂದಿಗೆ ಜೆಡಿಎಸ್​ ಸೇರಿದ್ದು, 18ರಂದು ನಾಮಪತ್ರ ಸಲ್ಲಿಸಲಿದ್ದೇನೆ” ಎಂದು ದತ್ತ ಹೇಳಿದ್ದಾರೆ.

ಇದನ್ನೂ ಓದಿ: ‘ಕೈ’ ತಪ್ಪಿದ ಟಿಕೆಟ್‌; ಏ.9ರಂದು ಅಭಿಮಾನಿಗಳೊಂದಿಗೆ ವೈಎಸ್‌ವಿ ದತ್ತ ಸಭೆ

ಇದೀಗ ಎಚ್‌ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರು ಗುರುವಾರ ವೈ ಎಸ್‌ ವಿ ದತ್ತ ಅವರ ಮನೆಗೆ ಭೇಟಿ ನೀಡಿ, ಅಧಿಕೃತವಾಗಿ ಅವರನ್ನು ಮರಳಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ.

ಈ ಬೆಳವಣಿಗೆಗೂ ಮುನ್ನ ಪ್ರಜ್ವಲ್ ರೇವಣ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿರುವ ದತ್ತಾ ನಿವಾಸಕ್ಕೆ ಭೇಟಿ ನೀಡಿದ್ದರು. ದತ್ತಾ ಜತೆ ಮಾತುಕತೆ ನಡೆಸಿದ ಬಳಿಕ ಹೇಳಿಕೆ ನೀಡಿದ್ದ ಪ್ರಜ್ವಲ್, ”ದತ್ತಾರನ್ನು ಪಕ್ಷದಲ್ಲೇ ಉಳಿಸಿಕೊಳ್ಳಬೇಕೆಂದು ದೇವೇಗೌಡರು ಹೇಳಿದ್ದಾರೆ. ದತ್ತಾರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ತುಂಬಾ ಪ್ರಯತ್ನ ಮಾಡಿದ್ದೆವು. ಅವರಿಗೆ ಕಾಂಗ್ರೆಸ್​​ ಟಿಕೆಟ್ ನೀಡುವುದಿಲ್ಲ ಎಂಬುದೂ ಗೊತ್ತಿತ್ತು. ಯಾವಾಗಲೂ ನಾನು ದತ್ತಾ ಅಣ್ಣ ಜೊತೆ ಇರುತ್ತೇನೆ” ಎಂದು ಹೇಳಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಸೋಲುಂಡ ಬಳಿಕ ದತ್ತ ಅವರಿಗೆ 2023ರ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಬಹುದು ಎನ್ನುವ ಕಾರಣಕ್ಕೆ ಜನವರಿ 15ರಂದು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಪಕ್ಷ ಸೇರಿ ಮೂರು ತಿಂಗಳು ಕಳೆಯುವ ಮುನ್ನವೇ ದತ್ತ ಅವರು ಕಾಂಗ್ರೆಸ್ಸಿಗೂ ಗುಡ್‌ ಬೈ ಹೇಳಿದ್ದಾರೆ.

ದತ್ತ ಅವರು ಟಿಕೆಟ್ ಸಿಗುತ್ತದೆ ಎನ್ನುವ ಭರವಸೆಯಲ್ಲಿಯೇ ಕಾಂಗ್ರೆಸ್ ಸೇರಿದ್ದರು. ಆದರೆ ಅವರು ‌ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕುರಿತು ವಿವಾದಿತ ಹೇಳಿಕೆ ನೀಡಿದ್ದರು. ಅದೇ ಕಾರಣಕ್ಕೆ ಇದೀಗ ಟಿಕೆಟ್‌ ತಪ್ಪಲು ಕಾರಣವಾಗಿದೆ ಎನ್ನುವ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿವೆ. ಕಡೂರು ಕ್ಷೇತ್ರಕ್ಕೆ ಕೆಎಸ್‌ ಆನಂದ್‌ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...