Homeಮುಖಪುಟಛತ್ತೀಸ್‌ಗಢದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಕೇಸರಿ ಭಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ...

ಛತ್ತೀಸ್‌ಗಢದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಕೇಸರಿ ಭಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ ಮಾಡಿದ ರಾಹುಲ್‌

- Advertisement -
- Advertisement -

ಛತ್ತೀಸ್‌ಗಢದ ಕೊರ್ಬಾದಿಂದ ಇಂದು ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದೆ. ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಸಾವಿರಾರು ಮಂದಿ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಯಾತ್ರೆ ವೇಳೆ ಮಾತನಾಡಿದ ರಾಹುಲ್‌ ಗಾಂಧಿ ರಾಮಮಂದಿರ ಪ್ರಾಣ ಪ್ರತಿಷ್ಠಾಪಣೆ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳಿಗೆ ಆಹ್ವಾನ ಕಳುಹಿಸಿರುವ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರ್ಬಾದಲ್ಲಿ ಯಾತ್ರೆಯ ವೇಳೆ ರಾಹುಲ್‌ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕೇಸರಿ ಭಾವುಟವನ್ನು ಪ್ರದರ್ಶಿಸಿ ಮೋದಿ-ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪ್ರೀತಿಯಿಂದ ತೆರೆದ ಜೀಪಿನಿಂದ ಇಳಿದು ಬಂದ ರಾಹುಲ್‌ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಹಸ್ತಲಾಘವ ಮಾಡಿದ್ದಾರೆ.

ಈ ಬಿಜೆಪಿ ಕಾರ್ಯಕರ್ತರನ್ನು ಯಾತ್ರೆಯ ವಿರುದ್ಧ ಪ್ರತಿಭಟಿಸಲು ಕಳುಹಿಸಲಾಗಿದೆ, ಆದರೆ ರಾಹುಲ್ ಗಾಂಧಿ ಅವರು ಪ್ರತಿಭಟನಾಕಾರರನ್ನು ಭೇಟಿಯಾದಾಗ ಅವರ ಮುಖದಲ್ಲಿನ ಸಂತೋಷವನ್ನು ನೋಡಬೇಕಾಗಿದೆ. ಪ್ರೀತಿಯ ಶಕ್ತಿಯನ್ನು ಈ ವಿಡಿಯೋದಲ್ಲಿ ನೋಡಿ ಎಂದು ಭಾರತ್‌ ಜೋಡೋ ನ್ಯಾಯ ಯಾತ್ರೆ ಕುರಿತ ಪೋಸ್ಟ್‌ನಲ್ಲಿ ಹೇಳಲಾಗಿದೆ.

ಎರಡು ದಿನಗಳ ವಿರಾಮದ ನಂತರ ಭಾನುವಾರ ಛತ್ತೀಸ್‌ಗಢದ ರಾಯಗಢ ಜಿಲ್ಲೆಯಿಂದ ಭಾರತ್‌ ಜೋಡೋ ನ್ಯಾಯ ಯಾತ್ರೆ ಪುನರಾರಂಭವಾಗಿತ್ತು. ಗಾಂಧಿ ಚೌಕ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ರಾಹುಲ್‌ ಗಾಂಧಿ ಮಾಲಾರ್ಪಣೆ ಮಾಡಿದ್ದು, ನಂತರ ಯಾತ್ರೆಯು ಖಾರ್ಸಿಯಾ ವಿಧಾನಸಭಾ ಕ್ಷೇತ್ರದಲ್ಲಿ ಮುಂದುವರಿದಿದೆ.

ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಗಾಂಧಿ ಚೌಕ್‌ನಲ್ಲಿ ಜಮಾಯಿಸಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿನ್ ಪೈಲಟ್, ಛತ್ತೀಸ್‌ಗಢ ಕಾಂಗ್ರೆಸ್‌ ಮುಖ್ಯಸ್ಥ ದೀಪಕ್ ಬೈಜ್ ಮತ್ತು ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ಅವರು ತೆರೆದ ಜೀಪಿನಲ್ಲಿ ರಾಹುಲ್‌ ಗಾಂಧಿ ಜೊತೆ ಯಾತ್ರೆಯಲ್ಲಿ ಸಾಗಿದ್ದರು.

ಯಾತ್ರೆಯು ಒಡಿಶಾದಿಂದ ಗುರುವಾರ ರಾಯಗಢವನ್ನು ಪ್ರವೇಶಿಸಿತ್ತು ಮತ್ತು ಎರಡು ದಿನಗಳ ವಿರಾಮದ ನಂತರ ಭಾನುವಾರ ಮಧ್ಯಾಹ್ನ ಯಾತ್ರೆ ಪುನರಾರಂಭವಾಗಿದೆ. ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ರಾಯ್‌ಗಢ್ ಜಿಲ್ಲೆಯ ರೆಂಗಾರ್‌ಪಾಲಿ ಚೆಕ್‌ಪೋಸ್ಟ್‌ ಮೂಲಕ ಯಾತ್ರೆ ಛತ್ತೀಸ್‌ಗಢ ಪ್ರವೇಶಿಸಿದೆ. ಅಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಿದ್ದರು.

ನಿನ್ನೆ ಛತ್ತೀಸ್‌ಗಢದ ರಾಯ್‌ಗಢ್‌ನ ಕೆವದಬಾದಿ ಚೌಕ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪಕ್ಷವು ಭವಿಷ್ಯದ ಪೀಳಿಗೆಗೆ ದ್ವೇಷ ಮತ್ತು ಹಿಂಸೆ ಅಸ್ತಿತ್ವದಲ್ಲಿಲ್ಲದ ಹಿಂದೂಸ್ಥಾನವನ್ನು ನೀಡಲು ಬಯಸುತ್ತದೆ ಎಂದು ಹೇಳಿದ್ದರು.

ಸದ್ಯ ದೇಶದ ಮೂಲೆ ಮೂಲೆಗಳಲ್ಲಿ ದ್ವೇಷ, ಹಿಂಸಾಚಾರ ಹರಡುತ್ತಿದೆ. ಕೆಲವರು ಅವರ ಭಾಷೆಯ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಕೆಲವರು ರಾಜ್ಯಗಳ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಇಂತಹ ಚಿಂತನೆಗಳು ದೇಶವನ್ನು ದುರ್ಬಲಗೊಳಿಸುತ್ತವೆ. ಬಿಜೆಪಿ ಮತ್ತು ಆರೆಸ್ಸೆಸ್ ದ್ವೇಷವನ್ನು ಹರಡುತ್ತಿದೆ. ಆದರೆ, ಈ ದೇಶದ ಡಿಎನ್‌ಎಯಲ್ಲೇ ಪ್ರೀತಿ ಇದೆ. ದೇಶದಲ್ಲಿ, ವಿಭಿನ್ನ ನಂಬಿಕೆ ಮತ್ತು ಆಲೋಚನೆಗಳನ್ನು ಹೊಂದಿರುವ ಜನರು ಪ್ರೀತಿಯಿಂದ ಶಾಂತಿಯುತವಾಗಿ ಒಟ್ಟಿಗೆ ಬದುಕುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಭಾರತ್ ಜೋಡೋ ನ್ಯಾಯ್ ಯಾತ್ರೆ ಅವಧಿ ಕಡಿತಕ್ಕೆ ನಿರ್ಧಾರ:

ಉತ್ತರಪ್ರದೇಶದಲ್ಲಿ 10-12ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅವಧಿಯನ್ನು ಕಡಿಮೆ ಮಾಡಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

ಉತ್ತರಪ್ರದೇಶದಲ್ಲಿ ಯಾತ್ರೆಯು ಫೆ.26ರವೆರೆಗೆ ಮುಂದುವರಿಯುವ ಬಗ್ಗೆ ಈ ಮೊದಲು ಮಾಹಿತಿಯನ್ನು ನೀಡಲಾಗಿತ್ತು. ಆದರೆ ಫೆಬ್ರವರಿ 22ರಿಂದ ಪ್ರಾರಂಭವಾಗುವ ಯುಪಿ ಬೋರ್ಡ್ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ್ ಜೋಡೋ ನ್ಯಾಯ್ ಯಾತ್ರೆಯು ಫೆಬ್ರವರಿ 16ರಿಂದ ಫೆಬ್ರವರಿ 21ರವರೆಗೆ ಉತ್ತರಪ್ರದೇಶದಲ್ಲಿ ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಅಂಶು ಅವಸ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡಿದ್ದಾರೆ. ಈ ಹಿಂದೆ ಕೋವಿಡ್ -19 ಅವಧಿಯಲ್ಲಿ ಜನರ ಬಗ್ಗೆ ಕಾಳಜಿ ವಹಿಸಿ ರಾಹುಲ್ ಗಾಂಧಿ ಬಂಗಾಳದಲ್ಲಿ ತಮ್ಮ ರ್ಯಾಲಿಗಳನ್ನು ರದ್ದುಗೊಳಿಸಿದ್ದರು ಎಂದು ಅವಸ್ಥಿ ಹೇಳಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಫೆಬ್ರವರಿ 16ರಂದು ವಾರಣಾಸಿ ಮೂಲಕ ರಾಜ್ಯವನ್ನು ಪ್ರವೇಶಿಸಲಿದೆ ಮತ್ತು ಫೆಬ್ರವರಿ 19ರಂದು ಭದೋಹಿ, ಪ್ರಯಾಗರಾಜ್ ಮತ್ತು ಪ್ರತಾಪಗಢ ಮೂಲಕ ಅಮೇಥಿ ತಲುಪಲಿದೆ. ಫೆಬ್ರವರಿ 19ರಂದು ಅಮೇಥಿ ಲೋಕಸಭಾ ಕ್ಷೇತ್ರದ ಗೌರಿಗಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಲಿದ್ದು, ಮರುದಿನ ಫೆಬ್ರವರಿ 20ರಂದು ಯಾತ್ರೆ ರಾಯ್ ಬರೇಲಿ ಮೂಲಕ ಲಕ್ನೋಗೆ ತೆರಳಲಿದೆ. ಫೆಬ್ರವರಿ 21ರಂದು ಯಾತ್ರೆಯು ಲಕ್ನೋದಿಂದ ಉನ್ನಾವ್ ತಲುಪಲಿದ್ದು, ಉನ್ನಾವೋ ನಗರ ಮತ್ತು ಶುಕ್ಲಗಂಜ್ ಮೂಲಕ ಕಾನ್ಪುರವನ್ನು ಯಾತ್ರೆ ಪ್ರವೇಶಿಸಲಿದೆ. ನಂತರ ಕಾನ್ಪುರ, ಝಾನ್ಸಿ ಮೂಲಕ ಯಾತ್ರೆ ಮಧ್ಯಪ್ರದೇಶ ಪ್ರವೇಶಿಸಲಿದೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...